ರೈತ ಗಜೇಂದ್ರ ಸಿಂಗ್ 
ದೇಶ

ನೇಣು ಬಿಗಿದುಕೊಂಡು ರೈತ ಗಜೇಂದ್ರ ಸಿಂಗ್ ಸಾವು: ಮರಣೋತ್ತರ ವರದಿ

ರಾಜಸ್ತಾನ ರೈತ ಗಜೇಂದ್ರ ಸಿಂಗ್ ನೇಣು ಬಿಗಿದುಕೊಂಡು ಸಾವನ್ನಪ್ಪಿರುವುದು ಶವಪರೀಕ್ಷೆಯಲ್ಲಿ ದೃಢಪಟ್ಟಿದೆ.....

ನವದೆಹಲಿ: ಆಮ್ ಆದ್ಮಿ ಪಕ್ಷದ ರ್ಯಾಲಿಯಲ್ಲಿ ರಾಜಸ್ತಾನ ರೈತ ಗಜೇಂದ್ರ ಸಿಂಗ್ ನೇಣು ಬಿಗಿದುಕೊಂಡು ಸಾವನ್ನಪ್ಪಿರುವುದು ಶವಪರೀಕ್ಷೆಯಲ್ಲಿ ದೃಢಪಟ್ಟಿದೆ.
ಮಂಗಳವಾರ ಸಂಜೆ ದೆಹಲಿ ಪೊಲೀಸರು ಗಜೇಂದ್ರ ಸಿಂಗ್ ಮರಣೋತ್ತರ ವರದಿ ಪಡೆದುಕೊಂಡಿದ್ದು, ವರದಿಯಲ್ಲಿನ ಅಂಶಗಳನ್ನು ತಿಳಿಸಿದ್ದಾರೆ.
ಮರಣೋತ್ತರ ಪರೀಕ್ಷೆಯ ವರದಿ ನೀಡಿರುವ ವೈದ್ಯರು ಗಜೇಂದ್ರ ಸಿಂಗ್ ದೇಹದಲ್ಲಿ 7 ಕಡೆ ತರಚಿದ ಗಾಯಗಳಿದ್ದುದ್ದನ್ನು ಉಲ್ಲೇಖಿಸಿದ್ದಾರೆ. ಆತ ಮರದ ಮೇಲಿಂದ ಕೆಳಗೆ ಆತನ ದೇಹದ 7 ಕಡೆ ತರಚಿದ ಗಾಯಗಳಾಗಿದ್ದವು. ಎಲ್ಲಿಯೂ ಮೂಳೆ ಮುರಿತ ಆಗಿರಲಿಲ್ಲ ಎಂದು ವರದಿಯಲ್ಲಿ ದಾಖಲಿಸಿದ್ದಾರೆ.
ದೆಹಲಿ ಪೋಲೀಸರು ಗಜೇಂದ್ರ ಸಿಂಗ್ ಆತ್ಮಹತ್ಯೆ ಪ್ರಕರಣದ ತನಿಖೆ ಮುಂದುವರಿಸಿದ್ದಾರೆ. ಆಪ್ ರ್ಯಾಲಿಯಲ್ಲಿ ಕೆಲವರು ಗಜೇಂದ್ರ ಸಿಂಗ್ ಗೆ  ಆತ್ಮಹತ್ಯೆಗೆ ಪ್ರಚೋದನೆ  ನೀಡಿದ್ದರೆಂದು ಪ್ರತ್ಯಕ್ಷದರ್ಶಿಗಳು ವಿಚಾರಣೆ ವೇಳೆ ತಿಳಿಸಿದ್ದರು. ಏಪ್ರಿಲ್ 22 ರಂದು ದೆಹಲಿಯ ಜಂತರ್ ಮಂತರ್ ನಲ್ಲಿ  ಭೂಸ್ವಾಧೀನ ಮಸೂದೆ ವಿರೋಧಿಸಿ ಆಪ್ ಹಮ್ಮಿಕೊಂಡಿದ್ದ ರ್ಯಾಲಿಯಲ್ಲಿ ರೈತ ಗಜೇಂದ್ರ ಸಿಂಗ್ ಆತ್ನಹತ್ಯಗೆ ಶರಣಾಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT