ಶಾಸಕರಿಗೆ ಲ್ಯಾಪ್‌ಟಾಪ್ ವಿತರಿಸುತ್ತಿರುವ ಖಟ್ಟರ್ 
ದೇಶ

ಹರಿಯಾಣ ಸರ್ಕಾರದಿಂದ ಶಾಸಕರಿಗೆ ಲ್ಯಾಪ್ ಟಾಪ್, ಮನೆ ಸಾಲ ಗಿಫ್ಟ್, ರೈತರಿಗಿಲ್ಲ ನೆರವು

ಆತ್ಮಹತ್ಯೆಗೆ ಶರಣಾಗುವ ರೈತರು ಹೇಡಿಗಳು, ಕ್ರಿಮಿನಲ್‌ಗಳು. ಹೀಗಾಗಿ ಅವರಿಗೆ ಆರ್ಥಿಕ ನೆರವು ನೀಡುವುದಿಲ್ಲ ಎಂದಿರುವ ಹರಿಯಾಣದ ಬಿಜೆಪಿ ಸರ್ಕಾರ...

ಚಂಡೀಗಢ: ಆತ್ಮಹತ್ಯೆಗೆ ಶರಣಾಗುವ ರೈತರು ಹೇಡಿಗಳು, ಕ್ರಿಮಿನಲ್‌ಗಳು. ಹೀಗಾಗಿ ಅವರಿಗೆ ಆರ್ಥಿಕ ನೆರವು ನೀಡುವುದಿಲ್ಲ ಎಂದಿರುವ ಹರಿಯಾಣದ ಬಿಜೆಪಿ ಸರ್ಕಾರ, ತನ್ನ ಎಲ್ಲಾ ಶಾಸಕರಿಗೆ ಲ್ಯಾಪ್‌ಟಾಪ್ ಹಾಗೂ ಕಾರು, ಮನೆಗಳ ಮೇಲಿನ ಸಾಲದ ಮೊತ್ತವನ್ನು ಡಬ್ಬಲ್ ಮಾಡಿದೆ.

ಮುಖ್ಯಮಂತ್ರಿ ಮನೋಹರ್‌ಲಾಲ್ ಖಟ್ಟರ್ ಅವರು ಇಂದು ಹರಿಯಾಣದ 90 ಶಾಸಕರಿಗೆ ಲ್ಯಾಪ್‌ಟಾಪ್ ವಿತರಣೆ ಮಾಡಿದರು. ಅಲ್ಲದೆ ಕಾರು ಹಾಗೂ ಮನೆ ಸಾಲದ ಮೊತ್ತವನ್ನು 20 ರಿಂದ 60 ಲಕ್ಷಕ್ಕೆ ಏರಿಸುವ ಮೂಲಕ ಶಾಸಕರಿಗೆ ಭರ್ಜರಿ ಗಿಫ್ಟ್ ನೀಡಿದ್ದಾರೆ.

ಕಳೆದ ನಾಲ್ಕು ತಿಂಗಳಲ್ಲಿ ಹರಿಯಾಣದಲ್ಲಿ ಒಂದು ಡಜನ್ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಕಾಲಿಕ ಮಳೆಯಿಂದ ಸಂಕಷ್ಟದಲ್ಲಿರುವ ರಾಜ್ಯದ ರೈತರಿಗೆ ಹರಿಯಾಣ ಸರ್ಕಾರ ಇನ್ನೂ ಯಾವುದೇ ಪರಿಹಾರ ನೀಡಿಲ್ಲ.

ಆತ್ಮಹತ್ಯೆಗೆ ಶರಣಾಗುವ ರೈತರಿಗೆ ಯಾವುದೇ ಪರಿಹಾರ ನೀಡುವುದಿಲ್ಲ ಎಂದಿರುವ ಹರಿಯಾಣ ಕೃಷಿ ಸಚಿವ ಓಂ ಪ್ರಕಾಶ್ ಧಂಕರ್, ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು ಮತ್ತು ಕ್ರಿಮಿನಲ್‌ಗಳು ಎಂದು ಹೇಳಿಕೆ ನೀಡಿದ್ದು, ತೀವ್ರ ವಿವಾದಕ್ಕೆ ಕಾರಣವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT