ರಿಶಿ ಖನಲ್ ನನ್ನು ರಕ್ಷಿಸುತ್ತಿರುವ ರಕ್ಷಣಾ ಸಿಬ್ಬಂದಿ 
ದೇಶ

ನೇಪಾಳ ಭೂಕಂಪ: 80 ಗಂಟೆಗಳ ಬಳಿಕ, ಅವಶೇಷಗಳಡಿ ಜೀವಹಿಡಿದು ಕುಳಿತಿದ್ದ ವ್ಯಕ್ತಿಯ ರಕ್ಷಣೆ

ಭೀಕರ ಭೂಕಂಪದ ಬಳಿಕ ಬರೋಬ್ಬರಿ 80 ಗಂಟೆಗಳ ಕಾಲ ಅವಶೇಷಗಳಡಿ ಜೀವಹಿಡಿದು ಕೂತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣಾ ಸಿಬ್ಬಂದಿ ಬುಧವಾರ ರಕ್ಷಿಸಿದ್ದಾರೆ.

ಕಠ್ಮಂಡು: ಭೀಕರ ಭೂಕಂಪದ ಬಳಿಕ ಬರೋಬ್ಬರಿ 80 ಗಂಟೆಗಳ ಕಾಲ ಅವಶೇಷಗಳಡಿ ಜೀವಹಿಡಿದು ಕೂತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣಾ ಸಿಬ್ಬಂದಿ ಬುಧವಾರ ರಕ್ಷಿಸಿದ್ದಾರೆ.

ಭೂಕಂಪದಿಂದಾಗಿ ಕುಸಿದ ಕಟ್ಟಡವೊಂದರಲ್ಲಿ ವ್ಯಕ್ತಿಯೊಬ್ಬ ಸಿಕ್ಕಿಹಾಕಿಕೊಂಡ ಬಗ್ಗೆ ಮಾಹಿತಿ ಪಡೆದ ರಕ್ಷಣಾ ತಂಡ ಕಾರ್ಯಾಚರಣೆ ನಡೆಸಿ ರಿಶಿ ಖನಲ್ ಅವರನ್ನು ರಕ್ಷಿಸಿದೆ. ತೀವ್ರವಾಗಿ ಗಾಯಗೊಂಡಿರುವ ರಿಶಿ ಖನಲ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

'ನನ್ನ ಮೂತ್ರವನ್ನು ನಾನೆ ಕುಡಿದೆ' ಎಂದು ಅಪಾಯದಿಂದ ಪಾರಾಗಿರುವ ರಿಶಿ ಅವಶೇಷಗಳಡಿ ತಾನು ಅನುಭವಿಸಿದ ನರಕಯಾತನೆಯನ್ನು ಸುದ್ದಿ ಸಂಸ್ಥೆಯೊಂದಿಗೆ ಹೇಳಿಕೊಂಡಿದ್ದಾನೆ.

ಕಳೆದ ಮೂರು ದಿನಗಳಿಂದ ರಕ್ಷಣಾ ಸಿಬ್ಬಂದಿ ಸಹಾಯಕ್ಕಾಗಿ ಕಾಯುತ್ತಿದ್ದೆ. ನನ್ನ ಸುತ್ತ ಇದ್ದ ಮೃತದೇಹಗಳ ವಾಸನೆಯ ನಡುವೆಯೇ ಜೀವ ಹಿಡಿದುಕೊಂಡು ಬದುಕಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

SCROLL FOR NEXT