ಹರಿಯಾಣ ಕೃಷಿ ಸಚಿವ ಓ.ಪಿ.ಧಂಕರ್ 
ದೇಶ

ರೈತರು ಹೇಡಿಗಳಲ್ಲ, ಹೋರಾಟಗಾರರು: ಸ್ಪಷ್ಟನೆ ನೀಡಿದ ಹರಿಯಾಣ ಸಚಿವ

ವಿವಾದಾತ್ಮಕ ಹೇಳಿಕೆ ನೀಡಿ ಪ್ರತಿಪಕ್ಷಗಳ ಕೆಂಗಣ್ಣಿಗೆ ಗುರಿಯಾದ್ದ ಹರಿಯಾಣ ಕೃಷಿ ಸಚಿವ ಓ.ಪಿ.ಧಂಕರ್ ಅವರು ತಮ್ಮ ಹೇಳಿಕೆ ಸ್ಫಷ್ಟನೆ ನೀಡಿದ್ದು, ರೈತರು ಹೋರಾಟಗಾರರಾಗಿದ್ದು, ಹೇಡಿಯಂತಹ ಆತ್ಮಹತ್ಯೆಯ...

ಚಂಡೀಗಡ: ವಿವಾದಾತ್ಮಕ ಹೇಳಿಕೆ ನೀಡಿ ಪ್ರತಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದ್ದ ಹರಿಯಾಣ ಕೃಷಿ ಸಚಿವ ಒ.ಪಿ.ಧಂಕರ್ ಅವರು ತಮ್ಮ ಹೇಳಿಕೆ ಸ್ಫಷ್ಟನೆ ನೀಡಿದ್ದು, ರೈತರು ಹೋರಾಟಗಾರರಾಗಿದ್ದು, ಹೇಡಿಯಂತಹ ಆತ್ಮಹತ್ಯೆಯ ಕೃತ್ಯಗಳಿಗೆ ಕೈ ಹಾಕಬಾರದು ಎಂದು ಹೇಳಿದ್ದಾರೆ.

ತಾವು ಯಾವುದೇ ರೀತಿಯಲ್ಲೂ ರೈತರಿಗೆ ನೋವಾಗುವಂತಹ ಹೇಳಿಕೆ ನೀಡಿಲ್ಲ. ಆತ್ಮಹತ್ಯೆ ಮಾಡಿಕೊಳ್ಳುವವರು ಹೇಡಿಗಳಂತಹ ವ್ಯಕ್ತಿಗಳು. ಹೋರಾಟಗಾರರಾಗಿರುವ ರೈತರು ಇಂತಹ ಹೇಡಿತನದ ಕೆಲಸಕ್ಕೆ ಕೈ ಹಾಕಬಾರದು ಎಂಬ ಅರ್ಥದಲ್ಲಿ ನಾನು ಹೇಳಿಕೆ ನೀಡಿದ್ದೆ ಎಂದು ತಮ್ಮ ಹೇಳಿಕೆಗೆ ಒ.ಪಿ.ಧಂಕರ್ ಸ್ಪಷ್ಟನೆ ನೀಡಿದ್ದಾರೆ.

ಇದೇ ವೇಳೆ ಮಾಧ್ಯಮದವರ ಮೇಲೆ ಆರೋಪ ವ್ಯಕ್ತಪಡಿಸಿರುವ ಧಂಕರ್ ಅವರು, ನಾನು ನೀಡಿದ ಈ ಹೇಳಿಕೆಯ ವೀಡಿಯೋವನ್ನು ಮಾಧ್ಯಮಗಳು ತಿರುಚಿ ಸುಳ್ಳು ಸುದ್ದಿಯನ್ನು ಪ್ರಕಟಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಹಿಂದೆ ಒ.ಪಿ.ಧಂಕರ್ ಅವರು ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು. ಕಾನೂನಿನ ಪ್ರಕಾರ ಆತ್ಮಹತ್ಯೆ ಮಾಡಿಕೊಳ್ಳುವವರು ಅಪರಾಧಿಯಾಗಿದ್ದು, ಆತನ ಸಾವಿಗೆ ಆತನೇ ಕಾರಣನಾಗುತ್ತಾನೆ. ಸಂಸಾರ, ಕುಟುಂಬವನ್ನು ನಿಭಾಯಿಸುವುದಕ್ಕೆ ಸಾಧ್ಯವಾಗದೆ ಹೇಡಿತನದಿಂದ ಆತ್ಮಹತ್ಯೆ ಮಾಡಿಕೊಳ್ಳುವ ರೈತನ ಸಾವಿಗೆ ಸರ್ಕಾರ ಜವಾಬ್ದಾರಿಯಲ್ಲ. ಇಂತಹವರಿಗೆ ಸರ್ಕಾರದಿಂದ ಯಾವುದೇ ಸಹಾಯ ದೊರೆಯುವುದಿಲ್ಲ ಎಂಬ ಹೇಳಿಕೆ ನೀಡಿ ವಿವಾದಕ್ಕೆ ಕಾರಣರಾಗಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT