ಅವಶೇಷಗಳಡಿ ಸಿಲುಕಿದ್ದ 4 ತಿಂಗಳ ಮಗು 
ದೇಶ

ಸಾವನ್ನೇ ಗೆದ್ದ 4 ತಿಂಗಳ ಮಗು

ನಾಲ್ಕು ತಿಂಗಳ ಮಗುವೊಂದು ಪವಾಡ ಸದೃಶ ರೀತಿಯಲ್ಲಿ ಪಾರಾಗಿದೆ. ಘಟನೆ ನಡೆದು 22 ಗಂಟೆಗಳ ನಂತರ ಅವಶೇಷಗಳಡಿ ಸಿಲುಕಿದ್ದ ಮಗುವನ್ನು ರಕ್ಷಣಾ ಸಿಬ್ಬಂದಿ ರಕ್ಷಿಸಿದೆ.

ಕಠ್ಮಂಡು: ನೇಪಾಳದಲ್ಲಿ ಸಂಭವಿಸಿದ ಭೀಕರ ಭೂಕಂಪದಲ್ಲಿ ಸಾವಿರಾರು ಮಂದಿ ಜೀವ, ಬದುಕು ಕಳೆದು ಕೊಂಡಿದ್ದಾರೆ. ಇದರ ಜೊತೆಗೆ ಸಾವನ್ನು ಕೆಲವರು ಗೆದ್ದು ಬಂದಿದ್ದಾರೆ. ಇನ್ನೂ ರಕ್ಷಣಾ ಕಾರ್ಯ ಭರದಿಂದ ಸಾಗಿದೆ
ಇದರ ನಡುವೆಯೇ ನಾಲ್ಕು ತಿಂಗಳ ಮಗುವೊಂದು ಪವಾಡ ಸದೃಶ ರೀತಿಯಲ್ಲಿ ಜೀವಂತವಾಗಿ ಬದುಕುಳಿದಿದೆ. ಘಟನೆ ನಡೆದು 22 ಗಂಟೆಗಳ ನಂತರ ಅವಶೇಷಗಳಡಿ ಸಿಲುಕಿದ್ದ ಮಗುವನ್ನು ರಕ್ಷಣಾ ಸಿಬ್ಬಂದಿ ರಕ್ಷಿಸಿದೆ.
ಕಠ್ಮಂಡುವಿನ ಭಕ್ತಪುರದಲ್ಲಿ ವಾಸವಿದ್ದ ದಂಪತಿ ಮಗುವನ್ನು ಕಳೆದುಕೊಂಡಿದ್ದರು. ಅವರಿಗೆ ತಮ್ಮ ಬದುಕಿದೆ ಎಂಬ ದೃಢವಾದ ನಂಬಿಕೆಯಿಂದ ಮಗುವನ್ನು ಹುಡುಕಿಕೊಡುವಂತೆ ರಕ್ಷಣಾ ಪಡೆ ಬಳಿ ಮನವಿ ಮಾಡಿಕೊಂಡಿದ್ದರು. ಆದರೆ ರಕ್ಷಣಾ ಸಿಬ್ಬಂದಿ ಮಗು ಸಾವನ್ನಪ್ಪಿರಬಹುದೆಂದು ಶಂಕಿಸಿದ್ದರು. ಅವಶೇಷಗಳಡಿಯಿಂದ ಮಗುವಿನ ಅಳು ಕೇಳಿಸಿಕೊಂಡ ತಂದೆ ಮಗು ಬದುಕಿದೆಯೆಂದು ಅದನ್ನು ರಕ್ಷಿಸಿಕೊಡಬೇಕೆಂದು ಮತ್ತೆ ಸೈನಿಕರ ಬಳಿ ಅಂಗಲಾಚಿದ. ಕಾರ್ಯಾಚರಣೆ ನಡೆಸಿದ ಸಿಬ್ಬಂದಿ 4 ತಿಂಗಳ ಕಂದಮ್ಮನನ್ನು ರಕ್ಷಿಸಿದ್ದಾರೆ.
ಮಗುವನ್ನು ಹೊರತೆಗೆದು ಪರೀಕ್ಷಿಸಲಾಗಿದೆ. ಮಗು ಆರೋಗ್ಯವಾಗಿದ್ದು , ಸಣ್ಣ ಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

SCROLL FOR NEXT