ಮನೋಹರ್ ಪಾರಿಕ್ಕರ್ 
ದೇಶ

ಭೂಕಂಪ ಸಂತ್ರಸ್ತರಿಗೆ ಅಗತ್ಯ ನೆರವು ನೀಡಲು ಸಿದ್ಧ-ಪಾರಿಕ್ಕರ್

ಭೂಕಂಪ ಪೀಡಿತ ಸಂತ್ರಸ್ತರಿಗೆ ಅಗತ್ಯವಿರುವ ಎಲ್ಲಾ ಸಹಾಯವನ್ನು ನೀಡಲು ಭಾರತ ಸಿದ್ದ....

ನವದೆಹಲಿ: ಭೂಕಂಪ ಪೀಡಿತ ಸಂತ್ರಸ್ತರಿಗೆ ಅಗತ್ಯವಿರುವ ಎಲ್ಲಾ ಸಹಾಯವನ್ನು ನೀಡಲು ಭಾರತ ಸಿದ್ದವಿದೆ ಎಂದು ಕೇಂದ್ರ ರಕ್ಷಣಾ ಸಚಿವ ಮನೋಹರ್ ಪಾರಿಕ್ಕರ್ ಹೇಳಿದ್ದಾರೆ.

ಏಪ್ರಿಲ್ 25 ರಂದು ಸಂಭವಿಸಿದ ಭೀಕರ ಭೂಕಂಪದಿಂದ 5 ಸಾವಿರಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿ 10 ಸಾವಿರಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಭಾರತೀಯ ವಾಯು ಸೇನೆ ಅಧಿಕಾರಿಗಳನ್ನು ಭೇಟಿ ಮಾಡಿರುವ ನೇಪಾಳ ಸರ್ಕಾರ ಭಾರತದ ನೆರವು ಕೋರಿದೆ. ನೇಪಾಳ ಸರ್ಕಾರ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಜೊತೆ ಸಂಪರ್ಕದಲ್ಲಿದೆ ಎಂದು ಹೇಳಿದರು.

ಭೂಕಂಪ ಪೀಡಿತ ಪ್ರದೇಶದಲ್ಲಿ ಕೂಡಲೇ ಕಾರ್ಯಪ್ರವೃತ್ತರಾದ ಭಾರತೀಯ ವಾಯು ಪಡೆ, ತಾಂತ್ರಿಕ ಉಪಕರಣಗಳು, ವೈದ್ಯಕೀಯ ಸೌಲಭ್ಯ, ಆಹಾರ, ಔಷಧಿ ಸೇರಿದಂತೆ ಹಲವು ಅವಶ್ಯಕ ಸಾಮಾಗ್ರಿಗಳ ಜೊತೆ ಕಾರ್ಯಾಚರಣೆಯಲ್ಲಿ ತೊಡಗಿದವು ಎಂದರು.
 
ಹೀಗಾಗಲೇ ಭಾರತೀಯ ವಾಯು ಸೇನೆ ಭೂಕಂಪ ಪೀಡಿತ ಪ್ರದೇಶದಿಂದ 3 ಸಾವಿರ ಮಂದಿಯನ್ನು ಸುರಕ್ಷಿತವಾಗಿ ಕರೆತಂದಿದೆ. ಸೂಪರ್ ಹರ್ಕ್ಯುಲೆಸ್ ಮತ್ತು ಎಎನ್ 32 ವಿಮಾನಗಳು 314.6 ಟನ್ ಪರಿಹಾರ ಸಾಮಾಗ್ರಿಗಳನ್ನು ಕೊಂಡೊಯ್ದಿವೆ ಎಂದು ವಿವರ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

SCROLL FOR NEXT