ಮನೋಹರ್ ಪಾರಿಕ್ಕರ್ 
ದೇಶ

ಭೂಕಂಪ ಸಂತ್ರಸ್ತರಿಗೆ ಅಗತ್ಯ ನೆರವು ನೀಡಲು ಸಿದ್ಧ-ಪಾರಿಕ್ಕರ್

ಭೂಕಂಪ ಪೀಡಿತ ಸಂತ್ರಸ್ತರಿಗೆ ಅಗತ್ಯವಿರುವ ಎಲ್ಲಾ ಸಹಾಯವನ್ನು ನೀಡಲು ಭಾರತ ಸಿದ್ದ....

ನವದೆಹಲಿ: ಭೂಕಂಪ ಪೀಡಿತ ಸಂತ್ರಸ್ತರಿಗೆ ಅಗತ್ಯವಿರುವ ಎಲ್ಲಾ ಸಹಾಯವನ್ನು ನೀಡಲು ಭಾರತ ಸಿದ್ದವಿದೆ ಎಂದು ಕೇಂದ್ರ ರಕ್ಷಣಾ ಸಚಿವ ಮನೋಹರ್ ಪಾರಿಕ್ಕರ್ ಹೇಳಿದ್ದಾರೆ.

ಏಪ್ರಿಲ್ 25 ರಂದು ಸಂಭವಿಸಿದ ಭೀಕರ ಭೂಕಂಪದಿಂದ 5 ಸಾವಿರಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿ 10 ಸಾವಿರಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಭಾರತೀಯ ವಾಯು ಸೇನೆ ಅಧಿಕಾರಿಗಳನ್ನು ಭೇಟಿ ಮಾಡಿರುವ ನೇಪಾಳ ಸರ್ಕಾರ ಭಾರತದ ನೆರವು ಕೋರಿದೆ. ನೇಪಾಳ ಸರ್ಕಾರ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಜೊತೆ ಸಂಪರ್ಕದಲ್ಲಿದೆ ಎಂದು ಹೇಳಿದರು.

ಭೂಕಂಪ ಪೀಡಿತ ಪ್ರದೇಶದಲ್ಲಿ ಕೂಡಲೇ ಕಾರ್ಯಪ್ರವೃತ್ತರಾದ ಭಾರತೀಯ ವಾಯು ಪಡೆ, ತಾಂತ್ರಿಕ ಉಪಕರಣಗಳು, ವೈದ್ಯಕೀಯ ಸೌಲಭ್ಯ, ಆಹಾರ, ಔಷಧಿ ಸೇರಿದಂತೆ ಹಲವು ಅವಶ್ಯಕ ಸಾಮಾಗ್ರಿಗಳ ಜೊತೆ ಕಾರ್ಯಾಚರಣೆಯಲ್ಲಿ ತೊಡಗಿದವು ಎಂದರು.
 
ಹೀಗಾಗಲೇ ಭಾರತೀಯ ವಾಯು ಸೇನೆ ಭೂಕಂಪ ಪೀಡಿತ ಪ್ರದೇಶದಿಂದ 3 ಸಾವಿರ ಮಂದಿಯನ್ನು ಸುರಕ್ಷಿತವಾಗಿ ಕರೆತಂದಿದೆ. ಸೂಪರ್ ಹರ್ಕ್ಯುಲೆಸ್ ಮತ್ತು ಎಎನ್ 32 ವಿಮಾನಗಳು 314.6 ಟನ್ ಪರಿಹಾರ ಸಾಮಾಗ್ರಿಗಳನ್ನು ಕೊಂಡೊಯ್ದಿವೆ ಎಂದು ವಿವರ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳದಲ್ಲಿ ದಿಢೀರ್ ಪ್ರವಾಹ: ಬಲಿಯಾದವರ ಸಂಖ್ಯೆ 538ಕ್ಕೆ ಏರಿಕೆ; 320 ಭಾರತೀಯ ಪ್ರವಾಸಿಗರು ನಾಪತ್ತೆ!

ನೇಪಾಳದಲ್ಲಿ ಪ್ರವಾಹದ ರೌದ್ರಾವತಾರ: ಮತ್ತೊಂದು ಜಲಪ್ರಳಯದ ಭೀತಿ; ರಕ್ಷಣಾ ಕಾರ್ಯಾಚರಣೆ ಸ್ಥಗಿತಕ್ಕೆ ಆದೇಶ, ಕೂಡಲೇ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೈನಿಕರಿಗೆ ಸೂಚನೆ..!

ಅಂಡರ್-19 ತಂಡದಲ್ಲಿ ದ್ರಾವಿಡ್, ಸೆಹ್ವಾಗ್ ಮಕ್ಕಳಿಗೆ ಚಾನ್ಸ್; ಸ್ಫೋಟಕ ಪ್ರದರ್ಶನ ನೀಡಿದ್ರೂ ವೈಭವ್ ಸೂರ್ಯವಂಶಿ ಕೈಬಿಟ್ಟ BCCI; ಇಲ್ಲಿದೆ ಕಾರಣ...

ನಾಡಗೀತೆ: ಹೈಕೋರ್ಟ್ ಆದೇಶದಲ್ಲಿ ಮಧ್ಯ ಪ್ರವೇಶಕ್ಕೆ ಸುಪ್ರೀಂಕೋರ್ಟ್ ನಕಾರ!

ಸಿನಿಮಾ ಇಷ್ಟವಾಗಲಿಲ್ಲ ಅಂದ್ರೆ ನಾನು ನಡು ರಸ್ತೆಯಲ್ಲೇ ತಲೆ ಬೋಳಿಸಿಕೊಳ್ಳುತ್ತೇನೆ: ಪ್ರೇಕ್ಷಕರಿಗೆ ನಟಿ ಶ್ವೇತಾ ಚಾಲೆಂಜ್; ವಿಡಿಯೋ ವೈರಲ್!