ರೈತರೊಂದಿಗೆ ರಾಹುಲ್ ಗಾಂಧಿ 
ದೇಶ

ಬಾಕಿ ಪಾವತಿಸಲು ವಿಮಾ ಕಂಪನಿಗಳು ನಿರಾಕರಿಸುತ್ತಿವೆ: ರಾಹುಲ್‌ಗೆ ರೈತರು

ವಿಮಾ ಕಂಪನಿಗಳು ತಮಗೆ ಮೋಸ ಮಾಡುತ್ತಿದ್ದು, ಬೆಳೆ ಹಾನಿಗೆ ಪರಿಹಾರ ನೀಡುತ್ತಿಲ್ಲ ಎಂದು ಮಹಾರಾಷ್ಟ್ರದ ವಿದರ್ಭದಲ್ಲಿ ಪಾದಯಾತ್ರೆ ನಡೆಸುತ್ತಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ...

ದಮಂಗಾಂವ: ವಿಮಾ ಕಂಪನಿಗಳು ತಮಗೆ ಮೋಸ ಮಾಡುತ್ತಿದ್ದು, ಬೆಳೆ ಹಾನಿಗೆ ಪರಿಹಾರ ನೀಡುತ್ತಿಲ್ಲ ಎಂದು ಮಹಾರಾಷ್ಟ್ರದ ವಿದರ್ಭದಲ್ಲಿ ಪಾದಯಾತ್ರೆ ನಡೆಸುತ್ತಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಬಳಿ ಹಲವು ರೈತರು ತಮ್ಮ ಅಳಲು ತೋಡಿಕೊಂಡಿದ್ದಾರೆ.

ಸುಮಾರು ೧೫ ಕಿಮೀ ಪಾದಯಾತ್ರೆ ಕೈಗೊಂಡಿರುವ ಕೈ ನಾಯಕ ರಾಹುಲ್ ಗಾಂಧಿ, ಬೆಳೆ ನಾಶದಿಂದ ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳನ್ನು ಭೇಟಿ ಮಾಡಿ ಚರ್ಚಿಸಿದರು.

ಇಂದು ಬೆಳಗ್ಗೆ ಅಮರಾವತಿ ನಗರದಿಂದ ಸುಮಾರು ೫೦ ಕಿಮೀ ದೂರದಲ್ಲಿರುವ ಗುಂಜ್ ಗ್ರಾಮಕ್ಕೆ ಭೇಟಿ ಮಾಡಿದ ರಾಹುಲ್, ಇತ್ತೀಚೆಗಷ್ಟೇ ಆತ್ಮಹತ್ಯೆಗೆ ಶರಣಾಗಿದ್ದ ನಿಲೇಶ್ ವಾಲ್ಕೆ ಮತ್ತು ಅಂಬಾದಾಸ್ ವಾಹ್ಲಿಲೆ ಕುಟುಂಬದ ಸದಸ್ಯರನ್ನು ರಾಹುಲ್ ಭೇಟಿ ಮಾಡಿದರು.

ಗುಂಜ್ ಗ್ರಾಮದ ರಸ್ತೆಗಳ ಎರಡು ಬದಿಯಲ್ಲಿ ನೆರೆದಿದ್ದ ಗ್ರಾಮಸ್ಥರು ರಾಹುಲ್ ಗಾಂಧಿ ಅವರಿಗೆ ಸ್ವಾಗತ ಕೋರಿದರು. ಅಲ್ಲಿ ಕೆಲವರ ಜೊತೆ ಮಾನಾಡಿದ ರಾಹುಲ್ ಅವರ ತೊಂದರೆಗಳ ಆಳಕ್ಕಿಳಿದು ಅರಿತುಕೊಳ್ಳಲು ಪ್ರಯತ್ನಿಸಿದರು.

ಬೆಳೆ ನಾಶ ಹಾಗು ಮಳೆಯ ವೈಪರೀತ್ಯದಿಂದ ಹಾನಿಗೊಂಡಿರುವ ರೈತರು ಮತ್ತು ಕುಟುಂಬದವರನ್ನು ಭೇಟಿ ಮಾಡಲು ರಾಹುಲ್ ಗಾಂಧಿ ಐದು ಗ್ರಾಮಗಳಿಗೆ ಭೇಟಿ ನೀದಲಿದ್ದಾರೆ. ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಶೋಕ್ ಚವ್ಹಾಣ್ ಅವರು ರಾಹುಲ್ ಗೆ ಸಾಥ್ ನೀಡುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

SCROLL FOR NEXT