ಸಾಂದರ್ಭಿಕ ಚಿತ್ರ 
ದೇಶ

ಮೊದಲ ಸಾಲಿನ ಕುರ್ಚಿ ಮಹಿಳೆಯರಿಗಲ್ಲ!

ಮೊದಲ ಸಾಲಿನ ಕುರ್ಚಿಗಳು ಮಹಿಳೆಯರಿಗೆ ಅಲ್ಲ ಎಂದು ಹೇಳುವ ಮೂಲಕ ಸ್ವಾಮಿ ನಾರಾಯಣ ಟ್ರಸ್ಟ್ ಮಹಿಳಾ ಪತ್ರಕರ್ತೆಯೊಬ್ಬರನ್ನು ಅವಮಾನಿಸಿದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ...

ಮುಂಬೈ: ಮೊದಲ ಸಾಲಿನ ಕುರ್ಚಿಗಳು ಮಹಿಳೆಯರಿಗೆ ಅಲ್ಲ ಎಂದು ಹೇಳುವ ಮೂಲಕ ಸ್ವಾಮಿ ನಾರಾಯಣ ಟ್ರಸ್ಟ್ ಮಹಿಳಾ ಪತ್ರಕರ್ತೆಯೊಬ್ಬರನ್ನು ಅವಮಾನಿಸಿದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

'ಗೋ ಮಾಂಸ' ವಿಚಾರ ಕುರಿತಂತೆ ಸ್ವಾಮಿ ನಾರಾಯಣ ಟ್ರಸ್ಟ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದ್ದು, ಮೊದಲ ಸಾಲಿನ ಕುರ್ಚಿಯಲ್ಲಿ ಮಹಿಳಾ ಪತ್ರಕರ್ತೆಯೊಬ್ಬರು ಆಸೀನರಾಗಲು ಬಂದಾಗ ಸ್ವಾಮಿ ನಾರಾಯಣ ಟ್ರಸ್ಟ್ ಆಯೋಜಕರು ಮಹಿಳೆಯರು ಮೊದಲ ಆಸನದಲ್ಲಿ ಕುಳಿತುಕೊಳ್ಳುವುದನ್ನು ನಮ್ಮ ಸಂಸ್ಕೃತಿ ಒಪ್ಪಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.

ಈ ಕಾರ್ಯಕ್ರಮಕ್ಕೆ ಎಲ್ಲಾ ಮಾದ್ಯಮಗಳನ್ನು ಆಹ್ವಾನಿಸಲಾಗಿತ್ತು. ಕಾರ್ಯಕ್ರಮದಲ್ಲಿ ಮೊದಲ 3 ಸಾಲು ಕುರ್ಚಿಯನ್ನು ಮಾಧ್ಯಮದವರಿಗೆಂದೇ ಕಾಯ್ದಿರಿಸಲಾಗಿತ್ತು. ಇದರಂತೆ ಖಾಸಗಿ ಮಾಧ್ಯಮದ ಮಹಿಳಾ ಪತ್ರಕರ್ತೆಯೊಬ್ಬರು ಮೊದಲ ಸಾಲಿನಲ್ಲಿ ಕುಳಿತಿದ್ದರು. ಇದನ್ನು ಕಂಡ ಸ್ವಾಮಿ ನಾರಾಯಣ ಟ್ರಸ್ಟ್ ಆಯೋಜಕರು, ಮಹಿಳೆಯರು ಮೊದಲ ಆಸನದಲ್ಲಿ ಕುಳಿತುಕೊಳ್ಳುವುದನ್ನು ನಮ್ಮ ಸಂಸ್ಕೃತಿ ಒಪ್ಪಿಕೊಳ್ಳುವುದಿಲ್ಲ ಎಂದು ಹೇಳಿ ಮಹಿಳಾ ಪತ್ರಕರ್ತೆಯನ್ನು ಹಿಂಬದಿ ಸಾಲಿಗೆ ತೆರಳುವಂತೆ ಸೂಚಿಸಿದ್ದಾರೆ.

ಈ ಘಟನೆಯಿಂದ ಮಹಿಳಾ ಪತ್ರಕರ್ತೆ ನೊಂದಿದ್ದು, ಸ್ವಾಮಿ ನಾರಾಯಣ ಟ್ರಸ್ಟ್ ಆಯೋಜಕರು ನಡೆದುಕೊಂಡ ರೀತಿಯನ್ನು ಅವರು ಖಂಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

"ಭಾರತೀಯರು ಬಗ್ಗದೇ ಹೋದರೆ...." ಹತಾಶಗೊಂಡ ಟ್ರಂಪ್ ಸಲಹೆಗಾರನಿಂದ ನೇರಾ ನೇರಾ ಬೆದರಿಕೆ!

SCO summit: ಟ್ರಂಪ್ ಗೆ ಸೆಡ್ಡು, ಚೀನಾ, ರಷ್ಯಾ ಅಧ್ಯಕ್ಷರೊಂದಿಗೆ ದ್ವಿಪಕ್ಷೀಯ ಸಭೆಗೆ ಪ್ರಧಾನಿ ಮೋದಿ ಸಜ್ಜು; ದಿಗ್ಗಜರ ಸಮಾಗಮದ ಮೇಲೆ ಜಗತ್ತಿನ ಕಣ್ಣು!

ಧರ್ಮಸ್ಥಳ ಪ್ರಕರಣ: ಹೊಸ ದೂರು ದಾಖಲು, ದೂರುದಾರನ ಮಂಪರು ಪರೀಕ್ಷೆಗೆ ಸೌಜನ್ಯ ತಾಯಿ ಒತ್ತಾಯ!

ಮಂಗಳೂರು: KSRTC ಬಸ್ ಬ್ರೇಕ್ ಫೇಲ್; ಭೀಕರ ಅಪಘಾತದಲ್ಲಿ ಮಗು ಸೇರಿ ಆರು ಸಾವು; Video

$34.2 Trillion GDP: 2038ರ ವೇಳೆಗೆ ಅಮೆರಿಕ ಹಿಂದಿಕ್ಕಿ, ಭಾರತ 2ನೇ ಅತಿದೊಡ್ಡ ಆರ್ಥಿಕತೆ- EY ವರದಿ

SCROLL FOR NEXT