ವೆಂಕಯ್ಯ ನಾಯ್ಡು ಮತ್ತು ಮೋದಿ 
ದೇಶ

ಭೂ ಸ್ವಾಧೀನ ಮಸೂದೆ: ಯುಪಿಎ ಸರ್ಕಾರವಧಿಯ ಮಸೂದೆ ಜಾರಿಗೆ ಕೇಂದ್ರ ಚಿಂತನೆ?

ಭೂ ಸ್ವಾಧೀನ ಮಸೂದೆಗೆ ದೇಶಾದ್ಯಂತ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ತಿದ್ದುಪಡಿ ಮಸೂದೆ ವಾಪಸ್ ಪಡೆದು...

ನವದೆಹಲಿ: ಭೂ ಸ್ವಾಧೀನ ಮಸೂದೆಗೆ ದೇಶಾದ್ಯಂತ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ತಿದ್ದುಪಡಿ ಮಸೂದೆ ವಾಪಸ್ ಪಡೆದು 2013ರ ಯುಪಿಎ ಭೂ ತಿದ್ದುಪಡಿ ಮಸೂದೆ ಒಪ್ಪಿಕೊಳ್ಳಲು ಚಿಂತನೆ ನಡೆಸುತ್ತಿದೆ ಎಂದು ಸಂಸತ್ ನ ಉನ್ನತ ಮೂಲಗಳು ತಿಳಿಸಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.

2013ರಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ಭೂ ಮಸೂದೆ ಕಾಯ್ದೆಗೆ ಕಳೆದ ವರ್ಷ ಪ್ರಧಾನಿ ನರೇಂದ್ರ ಮೋದಿ ಭೂ ಮಸೂದೆ ಕಾಯ್ದೆಯಲ್ಲಿ ಪ್ರಮುಖ ಬದಲಾವಣೆ ಮಾಡಿತ್ತು. ಆದರೆ ಪ್ರತಿಪಕ್ಷಗಳು ಈ ಹೊಸ ಪ್ರಸ್ತಾಪದ ಭೂ ಮಸೂದೆ ಕಾಯ್ದೆ ಜಾರಿಗೆ ವಿರೋಧ ವ್ಯಕ್ತಪಡಿಸಿ ಇದು ರೈತ ವಿರೋಧಿ ಮಸೂದೆ ಎಂದು ವಾಗ್ದಾಳಿ ನಡೆಸಿದ್ದವು.

ಆದರೆ ಭೂಸ್ವಾಧೀನ ತಿದ್ದುಪಡಿ ಮಸೂದೆ ಜಾರಿಗೆ ಸರ್ಕಾರಕ್ಕೆ ರಾಜ್ಯಸಭೆಯಲ್ಲಿ ಭಾರೀ ಹಿನ್ನಡೆ ಉಂಟಾಗಿತ್ತು. ಅಲ್ಲದೇ ಮಸೂದೆ ಜಾರಿಗೆ ಬೆಂಬಲ ನೀಡಬೇಕೆಂಬ ಪ್ರಧಾನಿ ಮೋದಿ ಮನವಿಗೂ ಪ್ರತಿಪಕ್ಷಗಳು ಸ್ಪಂದಿಸಿಲ್ಲವಾಗಿತ್ತು. ಆ ನಿಟ್ಟಿನಲ್ಲಿ ಇದೀಗ ಉಲ್ಟಾ ಹೊಡೆದಿರುವ ಕೇಂದ್ರ ಸರ್ಕಾರ 2013ರ ಮಸೂದೆಯನ್ನು ಹಾಗೆಯೇ ಉಳಿಸಿಕೊಳ್ಳಲು ಚಿಂತನೆ ನಡೆಸಿದೆ ಎಂದು ವರದಿ ವಿವರಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT