ಸಂಸತ್ 
ದೇಶ

ಭೂಸ್ವಾಧೀನ ಮಸೂದೆ ವರದಿ ಸಲ್ಲಿಕೆ ಅವಧಿ ವಿಸ್ತರಣೆ

ಕೇಂದ್ರ ಎನ್ ಡಿಎ ಸರ್ಕಾರದ ಬಹುವಿವಾದಿತ ಭೂ ಸ್ವಾಧೀನ ಮಸೂದೆಗೆ ಸಂಬಂಧಿಸಿದಂತೆ ಸರ್ಕಾರ ರಚಿಸಿರುವ ಜಂಟಿ ಸದನ ಸಮಿತಿ ಸಮೀಕ್ಷೆಯ ವರದಿ ನೀಡಲು ...

ನವದೆಹಲಿ: ಕೇಂದ್ರ ಎನ್ ಡಿಎ ಸರ್ಕಾರದ ಬಹುವಿವಾದಿತ ಭೂ ಸ್ವಾಧೀನ ಮಸೂದೆಗೆ ಸಂಬಂಧಿಸಿದಂತೆ ಸರ್ಕಾರ ರಚಿಸಿರುವ ಜಂಟಿ ಸದನ ಸಮಿತಿ ಸಮೀಕ್ಷೆಯ ವರದಿ ನೀಡಲು ನಾಲ್ಕು ದಿನಗಳ ಅವಧಿ ವಿಸ್ತರಿಸಲಾಗಿದೆ.

ಸಂಸತ್ತಿನ ಜಂಟಿ ಸದನ ಸಮಿತಿ ಇತ್ತೀಚೆಗೆ ನಡೆದ ಸಭೆಯಲ್ಲಿ ವರದಿ ನೀಡಲು ಎರಡು ದಿನಗಳ ಹೆಚ್ಚಿನ ಕಾಲಾವಾಕಾಶ ನೀಡುವಂತೆ ಕೋರಿತ್ತು. ಅದರಂತೆ ಸರ್ಕಾರ ಭೂ ಸ್ವಾಧೀನ ಮಸೂದೆ ಅಧ್ಯಯನ ವರದಿ ವರದಿ ಸಲ್ಲಿಸಲು ಆಗಸ್ಚ್ 7ರ ವರೆಗೆ ಗಡುವು ನೀಡಿದೆ.

ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಲಲಿತ್ ಮೋದಿ ಹಾಗೂ ವ್ಯಾಪಂ ಹಗರಣ ಸಂಬಂಧ ಪ್ರತಿ ಪಕ್ಷಗಳು ಕೋಲಾಹಲ ಸೃಷ್ಠಸಿದ್ದು ಸದನ ನಡೆಯಲು ಅವಕಾಶ ನೀಡುತ್ತಿಲ್ಲ.ಹೀಗಾಗಿ ಜಂಟಿ ಸದನ ಸಮಿತಿ ಹೆಚ್ಚುವರಿ ಕಾಲಾವಾಕಾಶ ಕೋರಿದೆ. ಈ ಮೊದಲು ಆಗಸ್ಟ್ 3 ರೊಳಗೆ ಅಧ್ಯಯನ ವರದಿ ನೀಡುವಂತೆ ಸೂಚಿಸಲಾಗಿತ್ತು. ಭೂ ಸ್ವಾದೀನ ದಿಂದಾಗುವ ರೈತರಿಗೆ ಆಗುವ ಒಳಿತು ಕೆಡುಕು, ಪಾರದರ್ಶಕವಾಗಿ ನೀಡುವ ಪರಿಹಾರ, ಸೇರಿದಂತೆ ಹಲವು ವಿಷಯಗಳ ಬಗ್ಗೆ ಸಂಸದೀಯಸಮಿತಿ ಅಧ್ಯಯನ ನಡೆಸಿ ವರದಿ ಸಿದ್ದಪಡಿಸಿದೆ.






Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT