ಮುಂಗಾರು ಮಳೆ ಅಬ್ಬರ 
ದೇಶ

ಮುಂಗಾರು ಮಳೆ ಅಬ್ಬರ: ಉತ್ತರ ಭಾರತದಲ್ಲಿ 120 ಮಂದಿ ಸಾವು

ಮುಂಗಾರು ಮಳೆಯ ಅಬ್ಬರಕ್ಕೆ ಭಾರತ ಅಕ್ಷರಸಹ ತತ್ತರಿಸಿದೆ. ಉತ್ತರ ಹಾಗೂ ಈಶಾನ್ಯ ಭಾರತದ 5 ರಾಜ್ಯಗಳಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು

ನವದೆಹಲಿ: ಮುಂಗಾರು ಮಳೆಯ ಅಬ್ಬರಕ್ಕೆ ಭಾರತ ಅಕ್ಷರಸಹ ತತ್ತರಿಸಿದೆ. ಉತ್ತರ ಹಾಗೂ ಈಶಾನ್ಯ ಭಾರತದ 5 ರಾಜ್ಯಗಳಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು ಕನಿಷ್ಠ 120 ಮಂದಿ ಮೃತಪಟ್ಟಿದ್ದು, ಪ್ರವಾಹದಿಂದಾಗಿ 80 ಲಕ್ಷಕ್ಕೂ ಹೆಚ್ಚು ಜನರು ತೊಂದರೆಗೆ ಸಿಲುಕಿದ್ದಾರೆ.

ಕಳೆದ ಕೆಲವು ದಿನಗಳಿಂದ ಬಂಗಾಳ ಕೊಲ್ಲಿಯಲ್ಲಿ ಬೀಸುತ್ತಿರುವ ಕೊಮೆನ್‌ ಚಂಡಮಾರುತದ ಪ್ರಭಾವದಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ  ಪಶ್ಚಿಮ ಬಂಗಾಳ, ಗುಜರಾತ್‌, ರಾಜಸ್ತಾನ, ಮಣಿಪುರ ಮತ್ತು ಒಡಿಶಾ ರಾಜ್ಯಗಳು ತತ್ತರಿಸಿವೆ.

ಈ ಎಲ್ಲಾ ರಾಜ್ಯಗಳಲ್ಲಿ ಬಹುತೇಕ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು ಪ್ರವಾಹದಿಂದ  ಲಕ್ಷಾಂತರ ಜನರು ಮನೆ, ಮಠ ಕಳೆದುಕೊಂಡು ನಿರ್ಗತಿಕರಾಗಿದ್ದಾರೆ.  ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿರುವ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ 17 ತಂಡಗಳು ಸಾವಿರಾರು ಜನರನ್ನು ರಕ್ಷಿಸಿ ಸುರಕ್ಷಿತ  ಪ್ರದೇಶಗಳಿಗೆ ಸ್ಥಳಾಂತರಿಸಿದ್ದಾರೆ.

ಪ್ರವಾಹದಲ್ಲಿ ಸಿಲುಕಿರುವ ಸಂತ್ರಸ್ತರಿಗೆ ಹತ್ತು ಲಕ್ಷಕ್ಕೂ ಹೆಚ್ಚು ಆಹಾರ ಪೊಟ್ಟಣಗಳನ್ನು ಹೆಲಿಕಾಪ್ಟರ್‌ ಮೂಲಕ ವಿತರಿಸಲಾಗಿದೆ. ನಿರಾಶ್ರಿತರಿಗೆ ತಾತ್ಕಾಲಿಕ ಶಿಬಿರ ತೆರೆಯಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT