ಶಿವಸೇನಾ 
ದೇಶ

ನಮ್ಮದೇ ರಾಷ್ಟ್ರದಲ್ಲಿ ಹಿಂದೂ ಭಯೋತ್ಪಾದನೆಗೆ ಕಾರಣವೇ ಇಲ್ಲ: ಶಿವಸೇನೆ

ಹಿಂದೂ ರಾಷ್ಟ್ರವಾಗಿರುವ ಭಾರತದಲ್ಲಿ ಹಿಂದೂ ಭಯೋತ್ಪಾದನೆಯನ್ನು ಹರಡುವುದಕ್ಕೆ ಯಾವುದೇ ಕಾರಣಗಳಿಲ್ಲ ಎಂದು ಶಿವಸೇನೆ ಹೇಳಿದೆ...

ಮುಂಬೈ: ಹಿಂದೂ ರಾಷ್ಟ್ರವಾಗಿರುವ ಭಾರತದಲ್ಲಿ ಹಿಂದೂ ಭಯೋತ್ಪಾದನೆಯನ್ನು ಹರಡುವುದಕ್ಕೆ ಯಾವುದೇ ಕಾರಣಗಳಿಲ್ಲ ಎಂದು ಶಿವಸೇನೆ ಹೇಳಿದೆ.

ಭಯೋತ್ಪಾದನೆಗೆ ಕೇಸರಿ ಬಣ್ಣವನ್ನು ಹಚ್ಚಿ ರಾಜಕೀಯದಾಟವನ್ನು ಆಡುವುದು ಕುಚೋದ್ಯತನದ ಹಾಗೂ ಸ್ವಾರ್ಥಪರ ರಾಜಕಾರಣವಾಗಿದೆ. ಮಾತ್ರವಲ್ಲದೆ ಪಾಕ್‌ ಪ್ರಾಯೋಜಕತ್ವದ ಭಯೋತ್ಪಾದನೆಗೆ ಹಸಿರು ಪರದೆಯನ್ನು ಹಾಕಿ ಮರೆಮಾಚುವುದು ಸ್ವಂತ ದೇಶಕ್ಕೆ ಬಗೆಯುವ ದ್ರೋಹವಾಗಿದೆ ಎಂದು ಶಿವಸೇನೆಯು ತನ್ನ ಮುಖವಾಣಿ ಸಾಮ್ನಾದಲ್ಲಿ ಕಿಡಿಕಾರಿದೆ.

ಹಿಂದೂ ಭಯೋತ್ಪಾದನೆ ಕುರಿತ ಚರ್ಚೆಯಲ್ಲಿ ಅತ್ಯಂತ ಬಲಯುತವಾಗಿ ತನ್ನ ವಾದವನ್ನು ಮಂಡಿಸಿರುವ ಶಿವಸೇನೆ, ಶೇಕಡಾ ನೂರು ಹಿಂದುಗಳಿರುವ ಭಾರತದಲ್ಲಿ ಭಯೋತ್ಪಾದನೆಯನ್ನು ಹರಡುವ ಯಾವುದೇ ಕಾರಣ ಅಥವಾ ಅನಿವಾರ್ಯತೆ ಹಿಂದೂಗಳಿಗಿಲ್ಲ ಎಂದು ಹೇಳಿತು.

ಕೆಲ ದಿನಗಳ ಹಿಂದಷ್ಟೇ ಕೇಂದ್ರ ಗೃಹ ಸಚಿವ ರಾಜನಾಥ್‌ ಸಿಂಗ್‌ ಅವರು ಕಾಂಗ್ರೆಸ್‌ ಪಕ್ಷವು ದೇಶದಲ್ಲಿ ಹಿಂದೂ ಭಯೋತ್ಪಾದನೆ ಎಂಬ ಪದಗಳನ್ನು ಬಳಕೆಗೆ ತರುವ ಮೂಲಕ ಭೀತಿವಾದ ವಿರುದ್ಧದ ದೇಶದ ಹೋರಾಟವನ್ನು ದುರ್ಬಲಗೊಳಿಸಿತು ಎಂದು ಆಪಾದಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT