ಶಿವಸೇನಾ 
ದೇಶ

ನಮ್ಮದೇ ರಾಷ್ಟ್ರದಲ್ಲಿ ಹಿಂದೂ ಭಯೋತ್ಪಾದನೆಗೆ ಕಾರಣವೇ ಇಲ್ಲ: ಶಿವಸೇನೆ

ಹಿಂದೂ ರಾಷ್ಟ್ರವಾಗಿರುವ ಭಾರತದಲ್ಲಿ ಹಿಂದೂ ಭಯೋತ್ಪಾದನೆಯನ್ನು ಹರಡುವುದಕ್ಕೆ ಯಾವುದೇ ಕಾರಣಗಳಿಲ್ಲ ಎಂದು ಶಿವಸೇನೆ ಹೇಳಿದೆ...

ಮುಂಬೈ: ಹಿಂದೂ ರಾಷ್ಟ್ರವಾಗಿರುವ ಭಾರತದಲ್ಲಿ ಹಿಂದೂ ಭಯೋತ್ಪಾದನೆಯನ್ನು ಹರಡುವುದಕ್ಕೆ ಯಾವುದೇ ಕಾರಣಗಳಿಲ್ಲ ಎಂದು ಶಿವಸೇನೆ ಹೇಳಿದೆ.

ಭಯೋತ್ಪಾದನೆಗೆ ಕೇಸರಿ ಬಣ್ಣವನ್ನು ಹಚ್ಚಿ ರಾಜಕೀಯದಾಟವನ್ನು ಆಡುವುದು ಕುಚೋದ್ಯತನದ ಹಾಗೂ ಸ್ವಾರ್ಥಪರ ರಾಜಕಾರಣವಾಗಿದೆ. ಮಾತ್ರವಲ್ಲದೆ ಪಾಕ್‌ ಪ್ರಾಯೋಜಕತ್ವದ ಭಯೋತ್ಪಾದನೆಗೆ ಹಸಿರು ಪರದೆಯನ್ನು ಹಾಕಿ ಮರೆಮಾಚುವುದು ಸ್ವಂತ ದೇಶಕ್ಕೆ ಬಗೆಯುವ ದ್ರೋಹವಾಗಿದೆ ಎಂದು ಶಿವಸೇನೆಯು ತನ್ನ ಮುಖವಾಣಿ ಸಾಮ್ನಾದಲ್ಲಿ ಕಿಡಿಕಾರಿದೆ.

ಹಿಂದೂ ಭಯೋತ್ಪಾದನೆ ಕುರಿತ ಚರ್ಚೆಯಲ್ಲಿ ಅತ್ಯಂತ ಬಲಯುತವಾಗಿ ತನ್ನ ವಾದವನ್ನು ಮಂಡಿಸಿರುವ ಶಿವಸೇನೆ, ಶೇಕಡಾ ನೂರು ಹಿಂದುಗಳಿರುವ ಭಾರತದಲ್ಲಿ ಭಯೋತ್ಪಾದನೆಯನ್ನು ಹರಡುವ ಯಾವುದೇ ಕಾರಣ ಅಥವಾ ಅನಿವಾರ್ಯತೆ ಹಿಂದೂಗಳಿಗಿಲ್ಲ ಎಂದು ಹೇಳಿತು.

ಕೆಲ ದಿನಗಳ ಹಿಂದಷ್ಟೇ ಕೇಂದ್ರ ಗೃಹ ಸಚಿವ ರಾಜನಾಥ್‌ ಸಿಂಗ್‌ ಅವರು ಕಾಂಗ್ರೆಸ್‌ ಪಕ್ಷವು ದೇಶದಲ್ಲಿ ಹಿಂದೂ ಭಯೋತ್ಪಾದನೆ ಎಂಬ ಪದಗಳನ್ನು ಬಳಕೆಗೆ ತರುವ ಮೂಲಕ ಭೀತಿವಾದ ವಿರುದ್ಧದ ದೇಶದ ಹೋರಾಟವನ್ನು ದುರ್ಬಲಗೊಳಿಸಿತು ಎಂದು ಆಪಾದಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT