ಉಗ್ರ ಚುಟುವಟಿಕೆಗಳಿಗೆ ಆಕರ್ಷಿತನಾಗಿ ಇಸಿಸ್ ಗೆ ಸೇರಿದ ಕೇರಳ ಪತ್ರಕರ್ತ? (ಸಾಂದರ್ಭಿಕ ಚಿತ್ರ) 
ದೇಶ

ಉಗ್ರರ ಸಿದ್ಧಾಂತಗಳಿಗೆ ಆಕರ್ಷಿತನಾಗಿ ಇಸಿಸ್ ಗೆ ಸೇರಿದ ಕೇರಳ ಪತ್ರಕರ್ತ?

ಉಗ್ರರ ವಿಚಾರಧಾರೆ ಹಾಗೂ ಚಟುವಟಿಕೆಗಳ ಕುರಿತಂತೆ ಆಕರ್ಷಿತನಾದ ಕೇರಳ ಮಾಜಿ ಪತ್ರಕರ್ತನೊಬ್ಬ ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಅಂಡ್ ಸಿರಿಯಾ ಉಗ್ರ ಸಂಘಟನೆಗೆ ಸೇರಿರುವುದಾಗಿ ಮೂಲಗಳಿಂದ ತಿಳಿದುಬಂದಿದೆ...

ತಿರುವನಂತಪುರ: ಉಗ್ರರ ವಿಚಾರಧಾರೆ ಹಾಗೂ ಚಟುವಟಿಕೆಗಳ ಕುರಿತಂತೆ ಆಕರ್ಷಿತನಾದ ಕೇರಳ ಮಾಜಿ ಪತ್ರಕರ್ತನೊಬ್ಬ ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಅಂಡ್ ಸಿರಿಯಾ ಉಗ್ರ ಸಂಘಟನೆಗೆ ಸೇರಿರುವುದಾಗಿ ಮೂಲಗಳಿಂದ ತಿಳಿದುಬಂದಿದೆ.

ಈ ಕುರಿತಂತೆ ಕೇರಳ ಪೊಲೀಸರಿಗೆ ಮಾಹಿತಿ ನೀಡಿರುವ ಕೇಂದ್ರ ಗುಪ್ತಚರ ಇಲಾಖೆ, ಪಾಲಕ್ಕಾಡ್ ನಲ್ಲಿರುವ ದಿನಪತ್ರಿಕೆಯೊಂದರಲ್ಲಿ ಪತ್ರಕರ್ತನಾಗಿ ಕೆಲಸಮಾಡುತ್ತಿದ್ದ ಪತ್ರಕರ್ತನೊಬ್ಬ ಇಸಿಸ್ ಉಗ್ರ ಸಂಘಟನೆಯ ವಿಚಾರಧಾರೆಗಳಿಂದ ಪ್ರೇರೇಪಿನಾಗಿದ್ದು, ಇಸಿಸ್ ಸಂಘಟನೆಗೆ ಸೇರ್ಪಡೆಯಾಗಿರುವುದಾಗಿ ತಿಳಿದುಬಂದಿದೆ ಎಂದು ಹೇಳಿದೆ.

ಗಲ್ಫ್ ರಾಷ್ಟ್ರದ ಪತ್ರಿಕೆಯಲ್ಲಿ ಕೆಲಸ ಮಾಡುತ್ತಿದ್ದ ಈ ಪತ್ರಕರ್ತ ಅಲ್ಲಿಂದಲೇ ಸಿರಿಯಾಗೆ ಹೋಗಿರುವುದಾಗಿ ಹಲವು ಶಂಕೆಗಳು ವ್ಯಕ್ತವಾಗುತ್ತಿದೆ, ಕಳೆದ ಕೆಲವು ವರ್ಷಗಳ ಹಿಂದೆ ಪಲಕ್ಕಡ್ ದಿನಪತ್ರಿಕೆಯೊಂದರಲ್ಲಿ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದ ಈತ ಕೆಲವು ತಿಂಗಳ ಬಳಿಕ ಇಸಿಸ್ ಉಗ್ರ ಸಂಘಟನೆ ಕುರಿತಂತೆ ತನ್ನ ಕುಟುಂಬಸ್ಥರೊಂದಿಗೆ ಮಾತನಾಡತೊಡಗಿದ್ದಾನೆ. ಮಗನ ಈ ವರ್ತನೆ ಕಂಡ ಆತನ ತಂದೆಗೆ ಗಾಬರಿಯಾಗಿದೆ. ಈ ವೇಳೆ ಮಗನಿಗೆ ಬುದ್ದಿವಾದ ಹೇಳಿದ್ದಾರೆ. ನಂತರ ಅಪ್ಪನ ಮಾತು ಕೇಳಿದ ಈತ ಪತ್ರಿಕೆಯಲ್ಲಿ ಮಾಡುತ್ತಿದ್ದ ಕೆಲಸವನ್ನು ತೊರೆದು ಗಲ್ಫ್ ನ ಪತ್ರಿಕೆಯೊಂದರಲ್ಲಿ ಕೆಲಸ ಮಾಡುವ ತನ್ನ ಇಚ್ಛೆಯನ್ನು ಮನೆಯವರೊಂದಿಗೆ ಹೇಳಿಕೊಂಡಿದ್ದಾನೆ.

8 ತಿಂಗಳ ಬಳಿಕ ಈತ ಗಲ್ಫ್ ರಾಷ್ಟ್ರದ ಪತ್ರಿಕೆಯೊಂದರಲ್ಲಿ ಕೆಲಸ ಪಡೆದಿದ್ದಾನೆ. ನಂತರ ಕೆಲಸ ಮಾಡಲು ಗಲ್ಫ್ ಗೆ ಹೋಗಿದ್ದಾನೆ. ಗಲ್ಫ್ ನಿಂದ ಮನೆಗೆ ಬಂದಾಗಲೆಲ್ಲಾ ಮತ್ತದೇ ಇಸಿಸ್ ಸಂಘಟನೆ ಬಗ್ಗೆ ಮನೆಯವರ ಜೊತೆ ಮಾತನಾಡಲು ಪ್ರಾರಂಭಿಸಿದ್ದಾನೆ. ಈ ವೇಳೆ ಮನೆಯವರು ಆತನಿಗೆ ಬುದ್ಧಿವಾದ ಹೇಳಿದ್ದಾರೆ. ಆದರೆ, ಬುದ್ದಿವಾದ ಕೇಳದ ಈ ವ್ಯಕ್ತಿ ಇಸಿಸ್ ಸಂಘಟನೆ ಸೇರುವುದಾಗಿ ನಿರ್ಧರಿಸಿ ಆನ್ ಲೈನ್ ನೇಮಕಾತಿ ಕುರಿತಂತೆ ಮಾಹಿತಿ ಪಡೆಯಲು ಅಂತರ್ಜಾಲದಲ್ಲಿ ಹುಡುಕಾಟ ನಡೆಸಿದ್ದಾನೆ. ಈ ವೇಳೆ ಆನ್ ಲೈನ್ ಗೆಳೆಯರ ಜೊತೆ ಚಾಟ್ ಮಾಡಿದ ಈ ವ್ಯಕ್ತಿ ಇಸಿಸ್ ಉಗ್ರ ಸಂಘಟನೆ ಸೇರುವ ಕುರಿತಂತೆ ಮಾಹಿತಿ ಕೇಳಿದ್ದಾನೆ. ಆದರೆ, ಆತನೊಂದಿಗೆ ಚಾಟ್ ಮಾಡಿದ ವ್ಯಕ್ತಿ ಕೇಂದ್ರ ಗುಪ್ತಚರ ಇಲಾಖೆಗೆ ಹತ್ತಿರ ಇರುವ ವ್ಯಕ್ತಿಯಾದ್ದರಿಂದ ಈ ಬಗ್ಗೆ ಗುಪ್ತಚರ ಇಲಾಖೆಗೆ ಮಾಹಿತಿ ನೀಡಿದ್ದಾನೆ ಎಂದು ಹೇಳಲಾಗುತ್ತಿದೆ.

ಕೇಂದ್ರ ಗುಪ್ತಚರ ಇಲಾಖೆ ನೀಡಿರುವ ಮಾಹಿತಿ ಕುರಿತಂತೆ ಈ ಬಗ್ಗೆ ಈಗಾಗಲೇ ಕೇರಳ ಪೊಲೀಸ್ ಅಧಿಕಾರಿಗಳು ಮಾಹಿತಿ ಕಲೆ ಹಾಕುತ್ತಿದ್ದು, ಮಾಜಿ ಪತ್ರಕರ್ತ ಈಗಾಗಲೇ ಸಿರಿಯಾ ಸಂಘಟನೆ ಸೇರಿದ್ದು, ಇಸಿಸ್ ಉಗ್ರ ಸಂಘಟನೆಯ ಕ್ಯಾಂಪ್ ವೊಂದರಲ್ಲಿ ನೆಲೆಸಿದ್ದಾನೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT