ಪಾಕಿಸ್ತಾನದ ಮಾಜಿ ಎಫ್ಐಎ ಮುಖ್ಯಸ್ಥ ತಾರಿಕ್ ಖೋಸಾ 
ದೇಶ

ಮುಂಬೈ ದಾಳಿಗೆ ಕಾರಣವಾದ ಪಾಕಿಸ್ತಾನ ತನ್ನ ತಪ್ಪನ್ನು ಒಪ್ಪಿಕೊಳ್ಳಬೇಕು: ಪಾಕ್ ಮಾಜಿ ಎಫ್ಐಎ ಮುಖ್ಯಸ್ಥ

2008 ರಲ್ಲಿ ಮುಂಬೈ ನಲ್ಲಿ ಭಯೋತ್ಪಾದಕರ ದಾಳಿ ನಡೆಸಲು ಭಯೋತ್ಪಾದಕರನ್ನು ಭಾರತಕ್ಕೆ ಕಳಿಸಿದ್ದ ಪಾಕಿಸ್ತಾನ ತನ್ನ ತಪ್ಪನ್ನು ಒಪ್ಪಿಕೊಳ್ಳಬೇಕು...

ಇಸ್ಲಾಮಾಬಾದ್: 2008 ರಲ್ಲಿ ಮುಂಬೈ ನಲ್ಲಿ ಭಯೋತ್ಪಾದಕರ ದಾಳಿ ನಡೆಸಲು ಭಯೋತ್ಪಾದಕರನ್ನು ಭಾರತಕ್ಕೆ ಕಳಿಸಿದ್ದ ಪಾಕಿಸ್ತಾನ ತನ್ನ ತಪ್ಪನ್ನು ಒಪ್ಪಿಕೊಳ್ಳಬೇಕು ಎಂದು ಪಾಕಿಸ್ತಾನದ ನಿವೃತ್ತ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಮುಂಬೈ ದಾಳಿ ಕುರಿತು ತನಿಖೆ ನಡೆಸಿದ್ದ ಫೆಡರಲ್ ತನಿಖಾ ಸಂಸ್ಥೆಯ ಮಾಜಿ ಮಹಾನಿರ್ದೇಶಕ ತಾರಿಕ್ ಖೋಸಾ, ಪಾಕ್ ನ ಡಾನ್ ಪತ್ರಿಕೆಯಲ್ಲಿ ಲೇಖನ ಬರೆದಿದ್ದು ತನ್ನ ನೆಲದಲ್ಲೇ ರೂಪುಗೊಂಡು ಅಲ್ಲಿಂದಲೇ ನಡೆದ ಮುಂಬೈ ದಾಳಿಯ ಅಪರಾಧಿಗಳನ್ನು ಪಾಕಿಸ್ತಾನ ಶಿಕ್ಷೆಗೊಳಿಸಬೇಕಿದೆ ಎಂದು ಹೇಳಿದ್ದಾರೆ. ಇದು ಸಾಧ್ಯವಾಗಬೇಕಾದರೆ ಪಾಕಿಸ್ತಾನ ಸತ್ಯ ಹಾಗೂ ತಪ್ಪುಗಳನ್ನು ಒಪ್ಪಿಕೊಳ್ಳಬೇಕು ಎಂದು ಖೊಸ ಅಭಿಪ್ರಾಯಪಟ್ಟಿದ್ದಾರೆ.

ಮುಂಬೈ ದಾಳಿ ಯೋಜನೆಯ ರುವಾರಿಗಳನ್ನು ಶಿಕ್ಷಿಸುವುದಕ್ಕೆ ಪಾಕಿಸ್ತಾನ ಭದ್ರತಾ ವ್ಯವಸ್ಥೆ ಕಠಿಣ ನಿರ್ಧಾರ ಕೈಗೊಳ್ಳಬೇಕಿದೆ ಈ ಮೂಲಕ  ಮುಂಬೈ ದಾಳಿಯ ಸಂತ್ರಸ್ತರಿಗೆ ಪಾಕಿಸ್ತಾನ ನ್ಯಾಯ ಒದಗಿಸಬೇಕು ಎಂದು ಪಾಕಿಸ್ತಾನದ ಮಾಜಿ ಅಧಿಕಾರಿ ತಾರಿಕ್ ಖೋಸಾ ಆಗ್ರಹಿಸಿದ್ದಾರೆ. ಮುಂಬೈ ದಾಳಿಯ ತನಿಖೆಯನ್ನು ವಿಳಂಬ ಮಾಡಲಾಗುತ್ತಿದೆ ಎಂದೂ ತಾರಿಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

2008 ರಲ್ಲಿ ಭಾರತಕ್ಕೆ ನುಗ್ಗಿದ್ದ ಉಗ್ರರು ಮುಂಬೈನ ತಾಜ್ ಹೊಟೆಲ್ ಮೇಲೆ ದಾಳಿ ನಡೆಸಿ ವಿಧ್ವಂಸಕ ಕೃತ್ಯವೆಸಗಿದ್ದರು. ದಾಳಿಯಲ್ಲಿ ಸೆರೆ ಸಿಕ್ಕ ಉಗ್ರ ಅಜ್ಮಲ್ ಕಸಬ್ ನನ್ನು ಗಲ್ಲಿಗೇರಿಸಲಾಗಿತ್ತು. ಈ ಬಗ್ಗೆಯೂ ಬರೆದಿರುವ ಖೊಸ, ಕಸಬ್ ಪಾಕಿಸ್ತಾನದ ಲಷ್ಕರ್-ಎ- ತೈಯ್ಬಾ ಉಗ್ರ ಸಂಘಟನೆಯ ಭಯೋತ್ಪಾದಕ ಎಂಬುದು ತನಿಖೆ ವೇಳೆ ಬಯಲಾಗಿತ್ತು ಖೋಸಾ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT