ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ (ಸಂಗ್ರಹ ಚಿತ್ರ) 
ದೇಶ

ಡಿಎನ್ಎ ಹೇಳಿಕೆ ವಿವಾದ: ಮೋದಿಗೆ ಪತ್ರ ಬರೆದ ನಿತೀಶ್ ಕುಮಾರ್

ಡಿಎನ್ಎ ಕುರಿತಂತೆ ಹೇಳಿಕೆ ನೀಡಿದ್ದ ಪ್ರಧಾನಿ ಮೋದಿ ವಿರುದ್ಧ ಕಿಡಿಕಾಡಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸಾಮಾಜಿಕ ಜಾಲತಾಣದ ಮೂಲಕ ಬುಧವಾರ ಮೋದಿ ಅವರಿಗೆ ಬಹಿರಂಗ ಪತ್ರ ಬರೆದಿದ್ದು, ತಮ್ಮ ಹೇಳಿಕೆಯನ್ನು ಹಿಂಪಡೆಯುವಂತೆ ಹೇಳಿದ್ದಾರೆ...

ಪಾಟ್ನ: ಡಿಎನ್ಎ ಕುರಿತಂತೆ ಹೇಳಿಕೆ ನೀಡಿದ್ದ ಪ್ರಧಾನಿ ಮೋದಿ ವಿರುದ್ಧ ಕಿಡಿಕಾಡಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸಾಮಾಜಿಕ ಜಾಲತಾಣದ ಮೂಲಕ ಬುಧವಾರ ಮೋದಿ ಅವರಿಗೆ ಬಹಿರಂಗ ಪತ್ರ ಬರೆದಿದ್ದು, ತಮ್ಮ ಹೇಳಿಕೆಯನ್ನು ಹಿಂಪಡೆಯುವಂತೆ ಹೇಳಿದ್ದಾರೆ.

ಟ್ವಿಟ್ಟರ್ ನಲ್ಲಿ ತಮ್ಮ ಬಹಿರಂಗ ಪತ್ರವನ್ನು ಮೋದಿ ಅವರಿಗೆ ಬರೆದಿರುವ ನಿತೀಶ್ ಕುಮಾರ್ ಅವರು, ಪತ್ರದಲ್ಲಿ ಕೆಲವು ದಿನಗಳ ಹಿಂದೆ ಬಿಹಾರ ಚುನಾವಣೆ ಸಂಬಂಧ ರ್ಯಾಲಿ ವೇಳೆ ನನ್ನ ಡಿಎನ್ಎ ಕುರಿತಂತೆ ಹೇಳಿಕೆ ನೀಡಿದ್ದಿರಿ. ಈ ಹೇಳಿಕೆ ಕೇವಲ ಬಿಹಾರದಲ್ಲಿರುವ ಜನತೆಗಷ್ಟೇ ಅಲ್ಲದೇ ಹೊರ ರಾಜ್ಯದಲ್ಲಿರುವ ಬಿಹಾರ ಜನರಿಗೂ ನೋವುಂಟು ಮಾಡಿದೆ. ನಿಮ್ಮ ನಾಯಕತ್ವದ ಮೇಲೆ ಜನರಿಟ್ಟಿರುವ ನಂಬಿಕೆಗಳು ಈ ರೀತಿಯ ಹೇಳಿಕೆಗಳಿಂದ ಹಾಳಾಗಲಿದೆ. ಬಿಹಾರ ಜನತೆಯಲ್ಲಿರುವ ಡಿಎನ್ಎ ಯಂತೆಯೇ ನನ್ನ ಡಿಎನ್ಎ ಇರುವುದು. ಬಿಹಾರದ ಗ್ರಾಮಾಂತರ ಪ್ರದೇಶದಲ್ಲಿ ನಾನು ಬೆಳೆದದ್ದು, ಈ ರೀತಿಯ ಹೇಳಿಕೆಗಳು ನನ್ನ ಜೀವನದ ಮೇಲೆ ಪರಿಣಾಮ ಬೀರಲಿದ್ದು, ಬಿಹಾರ ಜನತೆಯಲ್ಲಿ ಹಲವು ಅನುಮಾನಗಳನ್ನು ಹುಟ್ಟುಹಾಕುತ್ತವೆ. ಕೂಡಲೇ ತಮ್ಮ ಹೇಳಿಕೆಯನ್ನು ಹಿಂಪಡೆಯಿರಿ ಎಂದು ಹೇಳಿದ್ದಾರೆ.

ಬಿಹಾರ ಚುನಾವಣೆ ಸಂಬಂಧ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ್ದ ಪ್ರಧಾನಿಮಂತ್ರಿ ನರೇಂದ್ರ ಮೋದಿ ಅವರು, ನಿತೀಶ್ ಕುಮಾರ್ ನನ್ನೊಬ್ಬನಿಗೆ ಮಾತ್ರವೇ ಅಗೌರವ ಸೂಚಿಸಿಲ್ಲ. ಮಹಾದಲಿತರಾದ ಜಿತನ್ ರಾಮ್ ಮಾಂಝಿ ಅವರಿಗೂ ಈ ಹಿಂದೆ ಅಗೌರವ ಸೂಚಿಸಿದ್ದಾರೆ. ಇಲ್ಲಿರುವ ಜನತೆಯ ಡಿಎನ್ಎಗೂ ನಿತೀಶ್ ಕುಮಾರ್ ಅವರ ಡಿಎನ್ ಎಗೂ ಸಾಕಷ್ಟು ವ್ಯತ್ಯಾಸಿವಿದ್ದು, ಅವರ ಡಿಎನ್ಎಯಲ್ಲಿ ಏನಾದರೂ ಸಮಸ್ಯೆ ಇರಬಹುದು ಎಂದು ಹೇಳಿದ್ದರು.

ಮೋದಿ ಅವರ ಈ ಹೇಳಿಕೆ ಹಲವು ವಿವಾದಕ್ಕೆ ಕಾರಣವಾಗಿತ್ತಲ್ಲದೇ, ಮೋದಿ ಅವರು ಡಿಎನ್ಎ ಪ್ರಶ್ನೆ ಎತ್ತುವ ಮೂಲಕ ಕೇವಲ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಮಾತ್ರವೇ ಅಪಮಾನ ಮಾಡಿಲ್ಲ. ಬಿಹಾರದ 11 ಕೋಟಿ ಜನರಿಗೂ ಅಪಮಾನ ಮಾಡಿದ್ದಾರೆಂದು ಜೆಡಿಯು ನಾಯಕರು ಆರೋಪ ವ್ಯಕ್ತಪಡಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT