ಉಗ್ರ ಉಸ್ಮಾನ್ ಖಾನ್ 
ದೇಶ

ನಾನು ಪಾಕಿಸ್ತಾನಿ; ಹಿಂದೂಗಳನ್ನು ಕೊಲ್ಲಲು ಬಂದೆ; ಮಜವಾಗಿದೆ: ಉಗ್ರ ಉಸ್ಮಾನ್

ನಾನೊಬ್ಬ ಭಯೋತ್ಪಾದಕ. ಭಾರತದಲ್ಲಿ ಪ್ರತಿದಿನ ಕಾಶ್ಮೀರಿ ಜನರನ್ನು ಹತ್ಯೆ ಮಾಡಲಾಗುತ್ತಿದೆ. ಇದಕ್ಕೆ ಪ್ರತಿಯಾಗಿ ಭಾರತೀಯರ ಮೇಲೆ ಸೇಡು ತೀರಿಸಿಕೊಳ್ಳಲು...

ನವದೆಹಲಿ: ನಾನೊಬ್ಬ ಭಯೋತ್ಪಾದಕ. ಭಾರತದಲ್ಲಿ ಪ್ರತಿದಿನ ಕಾಶ್ಮೀರಿ ಜನರನ್ನು ಹತ್ಯೆ ಮಾಡಲಾಗುತ್ತಿದೆ. ಇದಕ್ಕೆ ಪ್ರತಿಯಾಗಿ ಭಾರತೀಯರ ಮೇಲೆ ಸೇಡು ತೀರಿಸಿಕೊಳ್ಳಲು ನಾನು ಭಾರತಕ್ಕೆ ಬಂದಿದ್ದೆ ಎಂದು ಸೆರೆ ಸಿಕ್ಕಿರುವ ಉಗ್ರ ಉಸ್ಮಾನ್ ಖಾನ್ ಹೇಳಿದ್ದಾನೆ.
ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಪ್ರತಿದಿನ ಜನರ ಹತ್ಯೆ ನಡೆಯುತ್ತಿದೆ. ಇದಕ್ಕೆ ಪ್ರತಿಯಾಗಿ ಭಾರತೀಯರನ್ನು ಕೊಂದು ಸೇಡು ತೀರಿಸಿಕೊಳ್ಳುವ ಸಲುವಾಗಿ 12 ದಿನಗಳ ಹಿಂದೆ ಉಧಂಪುರ ಗಡಿಯಿಂದ ಭಾರತಕ್ಕೆ ಪ್ರವೇಶಿಸಿದ್ದೇವು. ಅಮರನಾಥ್ ಯಾತ್ರೆಯೇ ನಮ್ಮ ಟಾರ್ಗೆಟ್ ಆಗಿತ್ತು ಎಂದು ಉಗ್ರ ಉಸ್ಮಾನ್ ಪೊಲೀಸರಿಗೆ ತಿಳಿಸಿದ್ದಾನೆ. 
ಜಮ್ಮು ಕಾಶ್ಮೀರದ ಉಧಂಪುರ ಜಿಲ್ಲೆಯ ಸಮ್ರೌಲಿ ಪ್ರದೇಶದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳಗ್ಗೆ  ಉಗ್ರರು ಗುಂಡಿನ ದಾಳಿ ನಡೆಸಿದ್ದರು. ಈ ಗುಂಡಿನ ದಾಳಿಯಲ್ಲಿ ಇಬ್ಬರು ಬಿಎಸ್ಎಫ್ ಯೋಧರು ಮೃತಪಟ್ಟಿದ್ದರು. ಉಗ್ರರ ವಿರುದ್ಧ ಪ್ರತಿದಾಳಿ ನಡೆಸಿದ್ದ ಪರಿಣಾಮ ಉಗ್ರನೊಬ್ಬ ಮೃತಪಟ್ಟಿದ್ದು, ಉಸ್ಮಾನ್ ಖಾನ್ ನನ್ನು ಸ್ಥಳೀಯರೇ ಸೆರೆ ಹಿಡಿದು ಪೊಲೀಸರ ವಶಕ್ಕೆ ನೀಡಿದ್ದರು.

ಪೊಲೀಸರನ್ನು ಗೊಂದಲಕ್ಕೆ ಸಿಕ್ಕಿಸುವ ಸಲುವಾಗಿ ಉಗ್ರ ನಾವಿದ್‌ ಮೊದಲಿಗೆ ಕಾಸೀಂ ಖಾನ್, ನಂತರ ಉಸ್ಮಾನ್ ಖಾನ್ ಬಳಿಕ ಫೈಸ್ಲಾಬಾದ್‌‌ನ ಘುಲಾಮ್ ಮುಸ್ತಾಫಬಾದ್‌ ನಿವಾಸಿ ಎಂದು ಹೇಳಿಕೊಂಡಿದ್ದಾನೆ. ಈತನಿಗೆ ಒಬ್ಬ ಸಹೋದರಿ ಹಾಗೂ ಇಬ್ಬರು ಸಹೋದರರು ಇದ್ದಾರೆ. ಅವರಲ್ಲಿ ಒಬ್ಬರು ಉಪನ್ಯಾಸಕರಾಗಿದ್ದು, ಮತ್ತೊಬ್ಬರು ಜವಳಿ ವ್ಯಾಪಾರಿ, ಎಂದು ಹೇಳಿದ್ದಾನೆ. 

ಜಮ್ಮುವಿನ ತನಿಖಾ ಕೇಂದ್ರವೊಂದರಲ್ಲಿ ನಾವಿದ್‌ನ ವಿಚಾರಣೆ ನಡೆಸಲಾಗುತ್ತಿದ್ದು, ಕಳೆದ ತಿಂಗಳು ನಾಲ್ವರು ಉಗ್ರರೊಂದಿಗೆ ಉತ್ತರ ಕಾಶ್ಮೀರದ ಕುಪ್ವಾರವನ್ನು ನಾವಿದ್ ಪ್ರವೇಶಿಸಿದ್ದ. ಆತನನ್ನು ಬರಮಾಡಿಕೊಳ್ಳಬೇಕಾಗಿದ್ದ ಗೈಡ್ ಬಾರದ ಕಾರಣ ಹಿಂದಿರುಗಿದ್ದಾಗಿ ಹೇಳಿದ್ದಾನೆ. 

ಇವನೊಂದಿಗಿದ್ದು, ಗಡಿ ಭದ್ರತಾ ಪಡೆ ಸಿಬ್ಬಂದಿ ಗುಂಡಿಗೆ ಬಲಿಯಾದ ಉಗ್ರ ಪಾಕಿಸ್ತಾನದ ಭಾವಲ್‌ಪುರ್‌ನ ನೊಮನ್ ಅಲಿಯಾಸ್ ಮೊಮಿನ್ ಎಂದು ನಾವಿದ್ ಹೇಳಿದ್ದಾನೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Iran War: Hormuz ಕುರಿತು ಬಹ್ರೇನ್ ನೇತೃತ್ವದಲ್ಲಿ ಕರಡು ನಿರ್ಣಯ; ಇಂದು UNSC ಮತದಾನ!

ಸೋಲಿನಲ್ಲೂ RCB ದಾಖಲೆ ಮುರಿದ CSK: 210 ರನ್ ಬಾರಿಸಿ ಚೆನ್ನೈ ವಿರುದ್ಧ 5 ವಿಕೆಟ್ ಗಳಿಂದ ಗೆದ್ದ ಪಂಜಾಬ್‌!

ಹುಬ್ಬಳ್ಳಿ Love Jihad ಕೇಸ್‌ಗೆ ಟ್ವಿಸ್ಟ್: Gym ಟ್ರೈನರ್ Sameer Mulla ಮೊಬೈಲ್‌ನಲ್ಲಿ ಯುವತಿಯರ ಫೋಟೋಗಳು ಪತ್ತೆ!

'ನಿಮ್ದೊಂದೆರಡು ಕಿತ್ತೋದ ವಿಮಾನವಾಹಕ ನೌಕೆಗಳು ಇದ್ಯಲ್ಲಾ ಯುದ್ಧಕ್ಕೆ ಕಳಿಸ್ತೀರಾ?' ಅಂತ ಕೇಳಿದ್ದೆ, ಮ್ಯಾಕ್ರಾನ್ ಗೆ ಹೆಂಡ್ತಿ ಕಾಟ: ಬ್ರಿಟನ್, ಫ್ರಾನ್ಸ್ ಬಗ್ಗೆ ಟ್ರಂಪ್ ವ್ಯಂಗ್ಯ

Bengal polls: ಕ್ರಿಮಿನಲ್ ಪ್ರಕರಣಗಳನ್ನು ಹೊಂದಿರುವ ರಾಜಕಾರಣಿಗಳಿಗೆ ಸೆಕ್ಯೂರಿಟಿ ವಾಪಸ್, ಚುನಾವಣಾ ಆಯೋಗ ನಿರ್ದೇಶನ!

SCROLL FOR NEXT