ಕೇಂದ್ರ ಸಚಿವೆ ಉಮಾ ಭಾರತಿ (ಸಂಗ್ರಹ ಚಿತ್ರ) 
ದೇಶ

ಗಂಗೆ ಕಲುಷಿತ: ಕೈಗಾರಿಕಾ ಘಟಕಗಳ ಮೇಲೆ ಶೀಘ್ರದಲ್ಲೇ ಕಠಿಣ ಕ್ರಮ; ಉಮಾ ಭಾರತಿ

ಪವಿತ್ರ ಗಂಗಾ ನದಿಯನ್ನು ಕಲುಷಿತ ಮಾಡುತ್ತಿರುವ ಕೈಗಾರಿಕಾ ಘಟನಗಳ ಮೇಲೆ ಶೀಘ್ರದಲ್ಲಿಯೇ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಕೇಂದ್ರ ಸಚಿವೆ ಉಮಾ ಭಾರತಿ ಗುರುವಾರ ಹೇಳಿದ್ದಾರೆ...

ನವದೆಹಲಿ: ಪವಿತ್ರ ಗಂಗಾ ನದಿಯನ್ನು ಕಲುಷಿತ ಮಾಡುತ್ತಿರುವ ಕೈಗಾರಿಕಾ ಘಟನಗಳ ಮೇಲೆ ಶೀಘ್ರದಲ್ಲಿಯೇ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಕೇಂದ್ರ ಸಚಿವೆ ಉಮಾ ಭಾರತಿ ಗುರುವಾರ ಹೇಳಿದ್ದಾರೆ.

ಈ ಕುರಿತಂತೆ ಲೋಕಸಭೆಯ ಪ್ರಶ್ನಾವಳಿ ವಿಭಾಗದಲ್ಲಿ ಮಾತನಾಡಿರುವ ಅವರು, ಗಂಗಾನದಿ ಸ್ವಚ್ಛತಾ ಕಾರ್ಯ ಯೋಜನೆ ಅನುಷ್ಟಾನಕ್ಕೆ ಬರಲು ಕ್ಯಾಬಿನೆಟ್ ಅಂತಿಮ ಒಪ್ಪಿಗೆಗೆ ಕಳುಹಿಸಲಾಗಿದೆ. ಗಂಗಾನದಿ ಸ್ವಚ್ಛತಾ ಕಾರ್ಯಕ್ಕೆ ಸಾರ್ವಜನಿಕರೂ ಸಹ ಸರ್ಕಾರದ ಜೊತೆ ಕೈ ಜೋಡಿಸುವಂತೆ ಮನವಿಮಾಡಲಾಗಿದ್ದು, ಗಂಗಾ ನದಿಯನ್ನು ಕಲುಷಿತ ಮಾಡುತ್ತಿರುವ ಕೈಗಾರಿಕಾ ಘಟಕಗಳ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆ ಈಗಾಗಲೇ ಮಾಲಿನ್ಯ ನಿಯಂತ್ರಣ ಮಂಡಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.

ಗಂಗಾ ನದಿ ಸ್ವಚ್ಛತಾ ಕಾರ್ಯಕ್ಕೆ ಸಾರ್ವಜನಿಕರ ಭಾಗವಹಿಸುವಿಕೆಗೆ ಈಗಾಗರೇ 528 ಕೋಟಿ ಹಣವನ್ನು ಮೀಸಲಿಡಲಾಗಿದ್ದು, ಜೂನ್ ಅಂತಿಮದವರೆಗೆ 91.75 ಲಕ್ಷ ಹಣವನ್ನು ಖರ್ಟು ಮಾಡಲಾಗಿದೆ. ಗಂಗಾ ನದಿಯಲ್ಲದೆಯೇ ಮತ್ತಿತ್ತರ ನದಿಗಳಾದ ಯಮುನಾ, ಗೋಮ್ಟಿ, ದಾಮೋದರ್ ನದಿಗಳ ಸ್ವಚ್ಛತಾ ಕಾರ್ಯಕ್ಕೂ ಸರ್ಕಾರ ಮುಂದಾಗಿದ್ದು, ಈಗಾಗಲೇ ಸ್ಚಚ್ಛಾ ಕಾರ್ಯಾಚರಣೆ ಆರಂಭವಾಗಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!