ಯಾಕುಬ್‌ ವಾಲಿ ಮೊಹಮದ್ ಖಾನ್‌ ಅಲಿಯಾಸ್‌ ಯೇಡಾ ಯಾಕುಬ್‌ 
ದೇಶ

1993 ರ ಮುಂಬಯಿ ಸ್ಫೋಟ ಆರೋಪಿ ಪಾಕಿಸ್ತಾನದಲ್ಲಿ ಸಾವು

1993ರ ಮುಂಬಯಿ ಸರಣಿ ಸ್ಫೋಟದ ಮುಖ್ಯ ಆರೋಪಿಗಳಲ್ಲಿ ಒಬ್ಬನಾಗಿರುವ ಯಾಕುಬ್‌ ಖಾನ್‌ ಅಲಿಯಾಸ್‌ ಯೇಡಾ ಯಾಕುಬ್‌ ಪಾಕಿಸ್ತಾನದ...

ನವದೆಹಲಿ: 1993ರ ಮುಂಬಯಿ ಸರಣಿ ಸ್ಫೋಟದ ಮುಖ್ಯ ಆರೋಪಿಗಳಲ್ಲಿ ಒಬ್ಬನಾಗಿರುವ ಯಾಕುಬ್‌ ಖಾನ್‌ ಅಲಿಯಾಸ್‌ ಯೇಡಾ ಯಾಕುಬ್‌ ಪಾಕಿಸ್ತಾನದ ಕರಾಚಿಯಲ್ಲಿ ಮೃತನಾಗಿದ್ದಾನೆ ಎನ್ನಲಾಗಿದೆ.

ಕೆಲವು ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಆತ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ ಎಂದು ಮುಂಬಯಿ ಪೊಲೀಸ್ ಆಯುಕ್ತ ರಾಕೇಶ್ ಮಾರಿಯಾ ತಿಳಿಸಿದ್ದಾರೆ.

ಮುಂಬಯಿ ಸರಣಿ ಸ್ಫೋಟ ಪ್ರಕರಣದಲ್ಲಿ 257 ಜನ ಬಲಿಯಾಗಿದ್ದರು. 700ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು. ಈ ಸರಣಿ ಸ್ಫೋಟದ ಸಂಚಿನಲ್ಲಿ ಯೇಡಾ ಯಾಕುಬ್‌ ಹಾಗೂ ಆತನ ಸೋದರ ಮಜೀದ್‌ ಖಾನ್‌ ಪ್ರಮುಖ ಪಾತ್ರ ವಹಿಸಿದ್ದರು. ಸ್ಫೋಟಕ್ಕೆ ಬಳಸಿದ ಆರ್‌ಡಿಎಕ್ಸ್‌ ಅನ್ನು ರಾಯಗಢದಿಂದ ಮುಂಬಯಿಗೆ ತರುವ ಕಾರ್ಯದಲ್ಲಿ ಅವರಿಬ್ಬರೂ ಕೈಜೋಡಿಸಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ತಮ್ಮ ಕೆಲಸ ನಿರ್ವಹಿಸಿದ ಬೆನ್ನಿಗೇ ಯೇಡಾ ದುಬೈಗೆ ಹಾರಿದ್ದು, ಅಲ್ಲಿಂದ ಕರಾಚಿಗೆ ತೆರಳಿ ತಲೆಮರೆಸಿಕೊಂಡಿದ್ದ. ಆತನ ಎಲ್ಲ ಕೃತ್ಯಗಳಿಗೂ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ ಸಹಾಯ ಮಾಡಿತ್ತು ಎಂದು ಸರಣಿ ಸ್ಫೋಟದ ತನಿಖಾಧಿಕಾರಿಗಳು ಪತ್ತೆ ಹಚ್ಚಿದ್ದರು.

ಕರಾಚಿಗೆ ತೆರಳಿದ ಬಳಿಕ ಆತ ತನ್ನ ಎರಡನೇ ಪತ್ನಿ ಹಾಗೂ ಮಕ್ಕಳೊಂದಿಗೆ ನೆಲೆಸಿದ್ದ. ಭೂಗತ ಪಾತಕಿ ದಾವುದ್‌ ಇಬ್ರಾಹಿಂ ಗ್ಯಾಂಗ್‌ಗೆ ಮುಂಬಯಿ ಹಾಗೂ ಉತ್ತರಪ್ರದೇಶದಲ್ಲಿ ಸದಸ್ಯರನ್ನು ನೇಮಕ ಮಾಡುವ ಜಾಲವನ್ನು ನಿಯಂತ್ರಿಸುತ್ತಿದ್ದ. ಅಲ್ಲದೆ ದಾವುದ್‌ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾದಕ ದ್ರವ್ಯ ಜಾಲದ ರೂವಾರಿಯಾಗಿದ್ದು, 2013ರಲ್ಲಿ ಮೃತನಾದ ಇಕ್ಬಾಲ್‌ ಮಿರ್ಚಿಯ ಹಣಕಾಸು ಚಟುವಟಿಕೆಗಳನ್ನು ನೋಡಿಕೊಳ್ಳುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮತ್ತೆ ಗಡಿಯೊಳಗೆ ನುಗ್ಗಿದ 'ಪಾಕ್ ಡ್ರೋನ್' ಗಳು, ಭಾರತೀಯ ಸೇನಾಪಡೆಯಿಂದ ಗುಂಡಿನ ದಾಳಿ!

'ಕರ್ನಾಟಕದ ಹಿತಕ್ಕಿಂತ, ಹೈಕಮಾಂಡ್ ಹಂಗೇ ಹೆಚ್ಚಾಯಿತೇ? ಜರ್ಮನಿ ಚಾನ್ಸೆಲರ್ ಸ್ವಾಗತಿಸದ CM, DCM, ವಿರುದ್ಧ ಬಿಜೆಪಿ ಕಿಡಿ!

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಬಿ- ರಿಪೋರ್ಟ್, ಜ. 22ಕ್ಕೆ ಆದೇಶ ಕಾಯ್ದಿರಿಸಿದ ನ್ಯಾಯಾಲಯ!

ಕುರ್ಚಿ ಕಾಳಗ: ಸಿದ್ದರಾಮಯ್ಯ, ಡಿಕೆಶಿ ಜತೆ ರಾಹಲ್ ಗಾಂಧಿ ಪ್ರತ್ಯೇಕ ಚರ್ಚೆ; ಕುತೂಹಲ ಮೂಡಿಸಿದೆ ಚುಟುಕು ಮಾತುಕತೆ! Video

ಫಿನಾಲೆ ಹಂತಕ್ಕೆ 'ಬಿಗ್‌ಬಾಸ್‌ ಕನ್ನಡ' 12; ಎಲ್ಲೆಲ್ಲೂ ಗಿಲ್ಲಿ ನಟನ ಹಾವಳಿ! ಗೆಲ್ಲುವ ಅದೃಷ್ಟ ಯಾರಿಗಿದೆ?

SCROLL FOR NEXT