ಮಸಾಜ್ ಮಾಡುವುದಕ್ಕೆ ನಿರಾಕರಿಸಿದ ವಿದ್ಯಾರ್ಥಿಯ ಕಾಲು ಮುರಿದ ಶಿಕ್ಷಕ (ಸಾಂದರ್ಭಿಕ ಚಿತ್ರ) 
ದೇಶ

ಮಸಾಜ್ ಮಾಡುವುದಕ್ಕೆ ನಿರಾಕರಿಸಿದ ವಿದ್ಯಾರ್ಥಿಯ ಕಾಲು ಮುರಿದ ಶಿಕ್ಷಕ

ಕಾಲಿಗೆ ಮಸಾಜ್ ಮಾಡುವಂತೆ ಹೇಳಿದ ಶಿಕ್ಷಕನ ಮಾತನ್ನು ನಿರಾಕರಿಸಿದ 3ನೇ ತರಗತಿಯ ಬಾಲಕನೊಬ್ಬನಿಗೆ ಮನಬಂದಂತೆ ಥಳಿಸಿ ಮಹಡಿಯಿಂದ ಕೆಳಗೆ ಹಾಕಿರುವ ಘಟನೆಯೊಂದು ರಾಜಧಾನಿ ದೆಹಲಿಯಲ್ಲಿ ಶುಕ್ರವಾರ ನಡೆದಿದೆ...

ನವದೆಹಲಿ: ಕಾಲಿಗೆ ಮಸಾಜ್ ಮಾಡುವಂತೆ ಹೇಳಿದ ಶಿಕ್ಷಕನ ಮಾತನ್ನು ನಿರಾಕರಿಸಿದ 3ನೇ ತರಗತಿಯ ಬಾಲಕನೊಬ್ಬನಿಗೆ ಮನಬಂದಂತೆ ಥಳಿಸಿ ಮಹಡಿಯಿಂದ ಕೆಳಗೆ ಹಾಕಿರುವ ಘಟನೆಯೊಂದು ರಾಜಧಾನಿ ದೆಹಲಿಯಲ್ಲಿ ಶುಕ್ರವಾರ ನಡೆದಿದೆ.

ಶಾಲೆ ಪ್ರಾರಂಭವಾಗುತ್ತಿದ್ದಂತೆ ತರಗತಿಗೆ ಬರುತ್ತಿದ್ದ ಶಿಕ್ಷಕ ವಿದ್ಯಾರ್ಥಿಗಳಲ್ಲಿ ತನ್ನ ಕಾಲಿಗೆ ಮಸಾಜ್ ಮಾಡುವಂತೆ ಕೋರುತ್ತಿದ್ದನು. ಯಾರಾದರು ಬಂದರೆ ಎಂಬ ಕಾರಣಕ್ಕೆ  ಇಬ್ಬರು ವಿದ್ಯಾರ್ಥಿಗಳನ್ನು ಶಾಲಾ ಕೊಠಡಿಯ ಬಾಗಿಲ ಬಳಿ ನಿಲ್ಲಿಸುತ್ತಿದ್ದರು. ಒಬ್ಬ ವಿದ್ಯಾರ್ಥಿ ಆತನ ಕಾಲಿಗೆ ಮಸಾಜ್ ಮಾಡಬೇಕಿತ್ತು. ಹೀಗಾಗಿ ಈತನ ವರ್ತನೆ ಕಂಡ ಬಾಲಕ ಶಾಲಾ ಪ್ರಾಂಶುಪಾಲರಿಗೆ ದೂರು ನೀಡಿದ್ದ. ಹೀಗಾಗಿ ಇದರಿಂದ ಕೋಪಗೊಂಡ ಶಿಕ್ಷಕ ಆತನಿಗೆ ಥಳಿಸಿದ್ದಾನೆಂದು ಸ್ಥಳದಲ್ಲಿದ್ದ ವಿದ್ಯಾರ್ಥಿಗಳು ಹೇಳಿದ್ದಾರೆ.

ಪ್ರತಿ ದಿನದಂತೆ ಇಂದು ಶಾಲೆಗೆ ಬಂದ ಶಿಕ್ಷಕ ಕಾಲಿಗೆ ಮಸಾಜ್ ಮಾಡುವಂತೆ ತಿಳಿಸಿದರು. ಇದಕ್ಕೆ ನಾನು ನಿರಾಕರಿಸಿದ ಕಾರಣಕ್ಕೆ ಕೋಪಗೊಂಡು ಹಿಗ್ಗಾಮುಗ್ಗ ಹೊಡೆದರು. ನಂತರ ನನ್ನನ್ನು ಮೇಲ್ಮಹಡಿಯಿಂದ ಕೆಳಗೆ ಹಾಕಿದರು. ಸ್ವಲ್ಪ ಹೊತ್ತಾದ ಬಳಿಕ ನನ್ನ ತಂದೆ ಬಂದು ಮನೆಗೆ ಕರೆದೊಯ್ದು ಆಸ್ಪತ್ರೆಗೆ ದಾಖಲಿಸಿದರು ಎಂದು ಗಾಯಗೊಂಡ ವಿದ್ಯಾರ್ಥಿ ಹೇಳಿದ್ದಾನೆ.

ಇಷ್ಟೆಲ್ಲ ಆದರೂ ಶಾಲೆಯ ಕಡೆಯಿಂದ ಯಾರೊಬ್ಬರು ನಮ್ಮ ಸಹಾಯಕ್ಕೆ ಬರಲಿಲ್ಲ. ಶಿಕ್ಷಕನೊಬ್ಬ ವಿದ್ಯಾರ್ಥಿಗೆ ಹೊಡೆದು ಹೊರ ಹಾಕಿದ್ದರು ಯಾರೂಬ್ಬರೂ ಈ ಬಗ್ಗೆ ಮಾತನಾಡಲೇ ಇಲ್ಲ. ಶಿಕ್ಷಕನ ವರ್ತನೆ ಬಗ್ಗೆ ಪ್ರಾಂಶುಪಾಲರ ಬಳಿ ಮಾತನಾಡಲು ಹೋದಾಗ ಅವರು ನಾಳೆ ಬನ್ನಿ ಎಂದರು, ಅವರು ಹೇಳಿದ ದಿನಕ್ಕೆ ಹೋದರೆ ಮತ್ತೆ ಒಂದು ವಾರದ ಬಳಿಕ ಬನ್ನಿ ಎಂದರು ಎಂದು ವಿರ್ದಾರ್ಥಿಯ ತಾಯಿ ಹೇಳಿದ್ದಾರೆ.

ಶಾಲಾ ವರ್ತನೆಯಿಂದಾಗಿ ಬೇಸತ್ತಿರುವ ವಿದ್ಯಾರ್ಥಿಯ ಪೋಷಕರು ಇದೀಗ  ಶಿಕ್ಷಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್‌ ಯುದ್ಧಕ್ಕೆ ವಿರೋಧ: Hormuz ಬಂದ್ ಮಾಡಿದ್ರೆ ಜಾಗತಿಕ ವ್ಯಾಪಾರಕ್ಕೆ ಮಾರಕ: ಪುಟಿನ್-ಕ್ಸಿ ಜಂಟಿ ಹೇಳಿಕೆ

59 ವರ್ಷಗಳ ನಂತರ ತಮಿಳುನಾಡಿನಲ್ಲಿ ಕಾಂಗ್ರೆಸ್​ಗೆ ಅಧಿಕಾರ ಹಂಚಿಕೆ; ನಾಳೆ ಸಚಿವರಾಗಿ ಇಬ್ಬರು ಪ್ರಮಾಣ

IPL 2026: ಮತ್ತೆ ಮುಗ್ಗರಿಸಿದ MI, KKRಗೆ 4 ವಿಕೆಟ್ ಜಯ, ಮುಂದುವರೆದ ಪ್ಲೇಆಫ್ ಸಸ್ಪನ್ಸ್!

'ದೇವಸ್ಥಾನಗಳಲ್ಲಿ ಅವಮಾನ ಅನುಭವಿಸಿದ್ದೆ': ಇಸ್ಲಾಂಗೆ ಮತಾಂತರವಾದ ತಮಿಳು ನಟ ಜೈ

ಹವಾಮಾನ: ಬಿಸಿಲಿನ ಝಳ, Heat wave ಗೆ ಉತ್ತರ ಭಾರತ ತತ್ತರ; ದೇಶದಲ್ಲೇ ಅತಿ ಹೆಚ್ಚು ತಾಪಮಾನ ಪ್ರದೇಶ ಯಾವುದು ಗೊತ್ತೇ?

SCROLL FOR NEXT