ಕಲ್ಲು ತೂರಾಟದಲ್ಲಿ ಗಾಯಗೊಂಡಿರುವ ಆಪ್ ಶಾಸಕಿ ಅಲಕಾ ಲಂಬಾ 
ದೇಶ

ಆಪ್ ಶಾಸಕಿ ಅಲಕಾ ಲಂಬಾ ಮೇಲೆ ಕಲ್ಲು ತೂರಾಟ: ಓರ್ವನ ಬಂಧನ

ಆಮ್ ಆದ್ಮಿ ಪಕ್ಷದ ಶಾಸಕಿ ಅಲಕಾ ಲಂಬಾ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಕಲ್ಲು ತೂರಾಟ ನಡೆಸಿರುವ ಘಟನೆಯೊಂದು ದೆಹಲಿಯ ರಾಜ್ ಘಾಟ್ ಪ್ರದೇಶದಲ್ಲಿ ಭಾನುವಾರ ನಡೆದಿದೆ. ಮಾದಕ ವ್ಯಸನ ಕುರಿತಂತೆ ದೆಹಲಿಯ ಕಾಶ್ಮೀರಿ ಗೇಟ್ ...

ನವದೆಹಲಿ: ಆಮ್ ಆದ್ಮಿ ಪಕ್ಷದ ಶಾಸಕಿ ಅಲಕಾ ಲಂಬಾ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಕಲ್ಲು ತೂರಾಟ ನಡೆಸಿರುವ ಘಟನೆಯೊಂದು ದೆಹಲಿಯ ರಾಜ್ ಘಾಟ್ ಪ್ರದೇಶದಲ್ಲಿ ಭಾನುವಾರ ನಡೆದಿದೆ.

ಮಾದಕ ವ್ಯಸನ ಕುರಿತಂತೆ ದೆಹಲಿಯ ಕಾಶ್ಮೀರಿ ಗೇಟ್ ಪ್ರದೇಶಕ್ಕೆ ತೆರಳಿದ ಸಂದರ್ಭದಲ್ಲಿ ಆಪ್ ಶಾಸಕಿ ಅಲಕಾ ಲಂಬಾ ಮೇಲೆ ಅಪರಿಚತ ವ್ಯಕ್ತಿಯೊಬ್ಬ ಕಲ್ಲು ತಾರಾಟ ನಡೆಸಿದ್ದಾನೆಂದು ತಿಳಿದುಬಂದಿದೆ. ಘಟನೆ ವೇಳೆ ಶಾಸಕಿಯ ತಲೆಗೆ ತೀವ್ರವಾಗಿ ಪೆಟ್ಟಾಗಿರುವ ಹಿನ್ನಲೆಯಲ್ಲಿ ಶಾಸಕಿಯನ್ನು ಅರುಣಾ ಅಸಫ್ ಅಲಿ ಆಸ್ಪತ್ರೆ ದಾಖಲಿಸಲಾಗಿದೆ.

ದಾಳಿ ಕುರಿತಂತೆ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಅಲಕಾ ಲಂಬಾ, ಮಾದಕ ವ್ಯಸನ ಕುರಿತಂತೆ ಹೋರಾಟ ನಡೆಸುತ್ತಿದ್ದ ವೇಳೆ ನನ್ನ ಮೇಲೆ ಅಪರಿಚತ ವ್ಯಕ್ತಿಯೊಬ್ಬ ದಾಳಿ ನಡೆಸಿದನು. ಅಪರಿಚತ ವ್ಯಕ್ತಿ ಕಲ್ಲು ತೂರಾಟ ನಡೆಸುತ್ತಿದ್ದರು ಸ್ಥಳಿದಲ್ಲಿದ್ದ ಪೊಲೀಸರು ಮಧ್ಯ ಪ್ರವೇಶಿಸಿ ಕ್ರಮ ಕೈಗೊಳ್ಳದೇ ಸುಮ್ಮನೆ ನಿಂತಿದ್ದರು ಎಂದು ಆರೋಪಿಸಿದ್ದಾರೆ. ಅಲ್ಲದೆ, ದಾಳಿಯಿಂದ ಯಾವುದೇ ಕಾರಣಕ್ಕೂ ನನ್ನ ಹೋರಾಟವನ್ನು ಹಿಂಪಡೆಯುವುದಿಲ್ಲ. ಮಾದಕ ವ್ಯಸನ ವಿರೋಧ ಕುರಿತಂತೆ ನನ್ನ ಹೋರಾಟವನ್ನು ಮುಂದುವರೆಯುತ್ತಲೇ ಇರುತ್ತದೆ ಎಂದು ಹೇಳಿದ್ದಾರೆ.

ಪ್ರಕರಣ ಕುರಿತಂತೆ ಈಗಾಗಲೇ ಎಫ್ಐಆರ್ ದಾಖಲಿಸಿಕೊಂಡಿರುವ ಪೊಲೀಸರು ವ್ಯಕ್ತಿಯೋರ್ವನನ್ನು ಬಂಧನಕ್ಕೊಳಪಡಿಸಿದ್ದು, ತನಿಖೆ ನಡೆಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT