ಸ್ವಯಂಘೋಷಿತ ದೇವ ಮಹಿಳೆ ರಾಧೇ ಮಾ ಮಿನಿ ಸ್ಕರ್ಟ್ ಫೋಟೋನಲ್ಲಿರುವ ಫೋಟೋ ( ರಾಹುಲ್ ಮಹಾಜನ್ ಟ್ವೀಟ್ ಮಾಡಿರುವ ಚಿತ್ರ) 
ದೇಶ

ಸತ್ಯಕ್ಕೆ ಜಯವಿದೆ, ಶಿವನೇ ಸತ್ಯವನ್ನು ಹೊರಹಾಕಲಿದ್ದಾನೆ: ದೇವ ಮಹಿಳೆ ರಾಧೆ ಮಾ

ಬಂಧನದ ಭೀತಿಯಲ್ಲಿದ್ದ ಸ್ವಯಂ ಘೋಷಿತ ವಿವಾದಿತ ದೇವ ಮಹಿಳೆ ರಾಧೆ ಮಾ ಇದೀಗ ತನ್ನ ವಿರುದ್ಧವಿರುವ ವರದಕ್ಷಿಣ ಕಿರುಕುಳ ಆರೋಪೆವಲ್ಲಾ ಸುಳ್ಳು...

ಮುಂಬೈ: ಬಂಧನದ ಭೀತಿಯಲ್ಲಿದ್ದ ಸ್ವಯಂ ಘೋಷಿತ ವಿವಾದಿತ ದೇವ ಮಹಿಳೆ ರಾಧೆ ಮಾ ಇದೀಗ ತನ್ನ ವಿರುದ್ಧವಿರುವ ವರದಕ್ಷಿಣ ಕಿರುಕುಳ ಆರೋಪೆವಲ್ಲಾ ಸುಳ್ಳು ಎಂದು ಹೇಳಿದ್ದು, ಶೀಘ್ರದಲ್ಲೇ ಸತ್ಯ ಬಹಿರಂಗವಾಗಲಿದೆ ಎಂದು ಭಾನುವಾರ ಹೇಳಿದ್ದಾರೆ.  

ಈ ಕುರಿತಂತೆ ಖಾಸಗಿ ಮಾಧ್ಯಮವೊಂದರ ಜೊತೆ ಮಾತನಾಡಿರುವ ಅವರು, ನನಗೆ ಯಾರ ಮೇಲೂ ದೂರುಗಳಿಲ್ಲ. ಮನುಷ್ಯನ ಕೈಯಲ್ಲಿ ಏನೂ ಇಲ್ಲ. ಎಲ್ಲವೂ ಆ ದೇವರ ಇಚ್ಛೆ. ದೇವರ ಆಟದ ಪರಿಣಾಮವಿದು ಅಷ್ಟೇ ದೇವರ ಆಟವನ್ನು ನಿಲ್ಲಿಸುವ ಶಕ್ತಿ ಯಾರಿಗೂ ಇಲ್ಲ. ಆರೋಪಗಳ ಕುರಿತಂತಿರುವ ಸತ್ಯ ಶೀಘ್ರದಲ್ಲೇ ಬಹಿರಂಗವಾಗಲಿದೆ. ಸತ್ಯಕ್ಕೆ ಯಾವಾಗಲೂ ಜಯವಿದೆ. ಸತ್ಯ ಯಾವಾಗಲೂ ಬಹಳ ಸುಂದರವಾಗಿರುತ್ತದೆ. ಆಟವಾಡುತ್ತಿರುವ ಶಿವನೇ ಈ ಸತ್ಯವನ್ನು ಭೇದಿಸುತ್ತಾನೆ. ಸಾಮಾಜಕ್ಕಾಗಿ ಸೇವೆ ಸಲ್ಲಿಸುವವರ ಕೆಲಸಕ್ಕೆ ಯಾರು ತೊಂದರೆ ಕೊಡುತ್ತಾರೋ ಅಂತಹವರ ವಧೆಯನ್ನು ಶಿವನೇ ಮಾಡುತ್ತಾನೆ ಎಂದು ಹೇಳಿದ್ದಾರೆ.

ಕೆಲವು ದಿನಗಳ ಹಿಂದಷ್ಟೇ ಸ್ವಯಂ ಘೋಷಿತ ದೇವ ಮಹಿಳೆ ರಾಧೆ ಮಾ ಅವರ ಮೇಲೆ ಆರೋಪ ಮಾಡಿದ್ದ ಮಹಿಳೆಯೊಬ್ಬರು ದೇವ ಮಹಿಳೆ ಸೂಚನೆ ಮೇರೆಗೆ ನನ್ನ ಗಂಡನ ಮನೆಯವರು ನನಗೆ ಮಾನಸಿಕವಾಗಿ ಹಿಂಸೆ ನೀಡಿದ್ದರಲ್ಲದೇ, ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ. ಇದೀಗ ನನ್ನ ಪತಿ ವರದಕ್ಷಿಣೆ ಕಿರುಕುಳ ನೀಡುತ್ತಿದ್ದು, ನನ್ನ ಪೋಷಕರಿಗೆ ಜೀವ ಬೆದರಿಕೆ ಹಾಕಿದ್ದಾರೆ. ಇದರಲ್ಲಿ ರಾಧೆ ಮಾ ಅವರ ಕೈ ವಾಡಿದೆ ಎಂದು ಮುಂಬೈ ನ ಬೊರಿವಲಿ ಕ್ಷೇತ್ರದ ಠಾಣೆಯೊಂದರಲ್ಲಿ ರಾಧೆ ಮಾ ವಿರುದ್ಧ ಪ್ರಕರಣ ದಾಖಲಿಸಿದ್ದರು.

ಈ ಪ್ರಕರಣದ ಮೂಲಕ ರಾಧೆ ಮಾ ಅವರ ವಿರುದ್ಧವಿದ್ದ ಇನ್ನಿತರೆ ಘಟನೆಗಳೂ ಸಹ ನಿಧಾನಗತಿಯಲ್ಲಿ ಬಹಿರಂಗವಾಗಲು ಆರಂಭಿಸಿದವು. ಸಾಮಾಜಿಕ ಜಾಲತಾಣ ಸೇರಿದಂತೆ ದೇಶದ ಜನತೆಯಲ್ಲಿಯೂ ರಾಧೆ ಮಾ ಕುರಿತಂತೆ ಹಲವು ಚರ್ಚೆಗಳು ಹಾಗೂ ವಿರೋಧಗಳು ವ್ಯಕ್ತವಾದವು. ವಿವಾದಗಳು ಚರ್ಚೆಗಳು ಹೆಚ್ಚಾಗುತ್ತಿದ್ದಂತೆ ರಾಧೆ ಮಾಗಾಗಿ ಮುಂಬೈ ಪೊಲೀಸರು ಹುಡುಕಾಟ ಆರಂಭಿಸಿದ್ದರು. ಆದರೆ, ಬಂಧನ ಭೀತಿಯಲ್ಲಿದ್ದ ರಾಧೆ ಮಾ ವಿದೇಶಕ್ಕೆ ಹಾರಿದ್ದಾರೆ ಎಂದು ಹೇಳಲಾಗುತ್ತಿತ್ತು. ನಿನ್ನೆಯಷ್ಟೇ ಮಹಾರಾಷ್ಟ್ರದಲ್ಲಿ ರಾಧೆ ಮಾ ಕಾಣಿಸಿಕೊಂಡಿದ್ದರು. ಇದೀಗ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯವು ರಾಧೆ ಮಾಗೆ ನೋಟಿಸ್ ಜಾರಿ ಮಾಡಿದ್ದು, ಶೀಘ್ರದಲ್ಲೇ ಮುಂಬೈ ಪೊಲೀಸರು ರಾಧೆ ಮಾರನ್ನು ವಿಚಾರಣೆಗೊಳಪಡಿಸಲಿದ್ದಾರೆಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

ವಿಶ್ವದಾಖಲೆ ಬರೆದ ಸ್ಮೃತಿ ಮಂದಾನ: ಕ್ಯಾಲೆಂಡರ್ ವರ್ಷದಲ್ಲಿ ODI ಕ್ರಿಕೆಟ್ ನಲ್ಲಿ 1,000 ರನ್ ಪೂರೈಸಿದ ಜಗತ್ತಿನ ಮೊದಲ ಬ್ಯಾಟರ್!

ಯಾವುದೇ ಸಂಪರ್ಕ ಕಡಿತಗೊಳ್ಳದೇ ಎಲ್ಲಾ ಇ-ಮೇಲ್ ಗಳನ್ನು Gmail ನಿಂದ Zoho Mail ಗೆ ವರ್ಗಾವಣೆ ಮಾಡುವುದು ಹೇಗೆ? ಸಿಗುವ ಸೌಲಭ್ಯಗಳೇನು? ಇಲ್ಲಿದೆ ಮಾಹಿತಿ

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಯಾರ ಒತ್ತಡಕ್ಕೆ ಒಳಗಾಗಿ Congress ಮರ್ಯಾದೆ ತೆಗೆಯುತ್ತಿದ್ದೀರಾ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!

SCROLL FOR NEXT