ಅರುಣ್ ಜೇಟ್ಲಿ(ಸಂಗ್ರಹ ಚಿತ್ರ) 
ದೇಶ

ರಾಜ್ಯಸಭೆಯಲ್ಲಿ ಜಿಎಸ್‍ಟಿ ಮಸೂದೆ ಮಂಡಿಸಿದ ಅರುಣ್ ಜೇಟ್ಲಿ

ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಜಿಎಸ್‍ಟಿ (ಸರಕು ಮತ್ತು ಸೇವಾ ತೆರಿಗೆ) ತಿದ್ದುಪಡಿ ವಿಧೇಯಕವನ್ನು ಮಂಗಳವಾರ ರಾಜ್ಯಸಭೆಯಲ್ಲಿ ಮಂಡಿಸಿತು...

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಜಿಎಸ್‍ಟಿ (ಸರಕು ಮತ್ತು ಸೇವಾ ತೆರಿಗೆ) ತಿದ್ದುಪಡಿ ವಿಧೇಯಕವನ್ನು ಮಂಗಳವಾರ ರಾಜ್ಯಸಭೆಯಲ್ಲಿ ಮಂಡಿಸಿತು. 
ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ವಿಧೇಯಕ ಮಂಡನೆ ವೇಳೆ ಪ್ರತಿಪಕ್ಷಗಳ ಸಚಿವರು ಪ್ರತಿಭಟನೆ ನಡೆಸಿದರು. ಇದರಿಂದ ಕೋಪಗೊಂಡ ಜೇಟ್ಲಿ ಅವರು ಕಾಂಗ್ರೆಸ್ ದೇಶದ ಅಭಿವೃದ್ಧಿಗೆ ತಡೆಯೊಡ್ಡುತ್ತಿದೆ. ಹೀಗಾಗಿ ದೇಶದ ಅಭಿವೃದ್ಧಿಗೆ ಪೂರಕವಾಗಿರುವ ಜಿಎಸ್‍ಟಿ ಮಸೂದೆ ಮಂಡನೆಗೆ ವಿರೋಧ ವ್ಯಕ್ತಪಡಿಸುತ್ತಿದೆ ಎಂದರು.
ಕಾಂಗ್ರೆಸ್ ಸದಸ್ಯರ ತೀವ್ರ ಗದ್ದಲ ಹಿನ್ನೆಲೆಯಲ್ಲಿ ರಾಜ್ಯಸಭಾ ಕಲಾಪವನ್ನು ನಾಳೆ ಮುಂದೂಡಿಕೆ ಮಾಡಲಾಗಿದೆ. 
ಕಳೆದ ಅಧಿವೇಶನದ ಸಮಯದಲ್ಲೇ ಲೋಕಸಭೆಯಲ್ಲಿ ಜಿಎಸ್‍ಟಿ ಮಸೂದೆ ಅಂಗೀಕೃತವಾಗಿ ರಾಜ್ಯಸಭೆ ಬಂದಿತ್ತು. ರಾಜ್ಯಸಭೆಯಲ್ಲಿ ಸೆಲೆಕ್ಟ್ ಕಮ್ಯೂಟಿಗೆ ಪರಮಾರ್ಶಿಸಲು ಕಳುಹಿಸಲಾಗಿತ್ತು. ರಾಜ್ಯಸಭೆ ಸೆಲೆಕ್ಟ್ ಕಮ್ಯೂನಿಟಿ ತಿಳಿಸಿದಂತೆ ತಿದ್ದುಪಡಿ ಹೊಂದಿರುವ ಮಸೂದೆಯನ್ನು ಅರುಣ್ ಜೇಟ್ಲಿ ಇಂದು ರಾಜ್ಯಸಭೆಯಲ್ಲಿ ಮಂಡಿಸಿದರು. 
ಜಿಎಸ್‍ಟಿ ತಿದ್ದುಪಡಿ ಮಸೂದೆಗೆ ಈಗಾಗಲೇ ತೃಣಮೂಲ ಕಾಂಗ್ರೆಸ್ ಹಾಗೂ ಸಮಾಜವಾದಿ ಪಕ್ಷಗಳು ಬೆಂಬಲ ಸೂಚಿಸಿವೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT