ಕ್ಯಾಪ್ಟರ್‍ನ ಅವಶೇಷಗಳನ್ನು ಹುಡುಕುತ್ತಿರುವ ರಕ್ಷಣಾ ಪಡೆ (ಕೃಪೆ : ಪಿಟಿಐ) 
ದೇಶ

ಪವನ್ ಹಂಸ ಕಾಪ್ಟರ್ ಅವಶೇಷ ಪತ್ತೆ: ಮೈಸೂರಿನ ರಾಜೀವ್ ಸಾವು

ಆರು ದಿನಗಳ ಹಿಂದೆ ನಾಪತ್ತೆಯಯಾಗಿದ್ದ ಪವನ್ ಹಂಸ ಹೆಲಿಕಾಪ್ಟರ್‍ನಲ್ಲಿದ್ದ ಮೈಸೂರಿನ ಪೈಲಟ್ ರಾಜೀವ್ ಬದುಕಿಬರಬಹುದು ಎಂಬ ನಿರೀಕ್ಷೆ ...

ಇಟಾನಗರ/ಮೈಸೂರು: ಆರು ದಿನಗಳ ಹಿಂದೆ ನಾಪತ್ತೆಯಯಾಗಿದ್ದ ಪವನ್ ಹಂಸ ಹೆಲಿಕಾಪ್ಟರ್‍ನಲ್ಲಿದ್ದ ಮೈಸೂರಿನ ಪೈಲಟ್ ರಾಜೀವ್ ಬದುಕಿಬರಬಹುದು ಎಂಬ ನಿರೀಕ್ಷೆ ಹುಸಿಯಾಗಿದೆ. ಕ್ಯಾಪ್ಟರ್‍ನ ಅವಶೇಷಗಳು ಸೋಮವಾರ ತಿರಾಪ್ ಜಿಲ್ಲೆ ಯ ಥಿನ್ಸಾ ಮತ್ತು ಸಾಂಗ್ಲಿಯಾನ್ ಗ್ರಾಮದ ನಡುವೆ ಪತ್ತೆಯಾಗಿದ್ದು, ರಾಜೀವ್ ಮೃತದೇಹವೂ ಸಿಕ್ಕಿದೆ. ಮೈಸೂರಿನ ರಮಾನುಜ ರಸ್ತೆ ನಿವಾಸಿಯಾಗಿದ್ದ ರಾಜೀವ್ ಅವರು ಸಿವಿಲ್ ಎಂಜಿನಿಯರ್ ಮಂಜುನಾಥ್ ಮತ್ತು ವಾಣಿಶ್ರೀ ಅವರ ಪುತ್ರ.ಮಗ ಮೃತಪಟ್ಟ ಸುದ್ದಿ ತಿಳಿಯುತ್ತಿದ್ದಂತೆಯೇ ರಾಜೀವ್ ಪೋಷಕರು ಅರುಣಾಚಲ ಪ್ರದೇಶಕ್ಕೆ ಧಾವಿಸಿದ್ದಾರೆ. ರಾಜೀವ್‍ಗೆ ಇತ್ತೀಚೆಗಷ್ಟೇ ವಿವಾಹ ನಿಶ್ಚಯವಾಗಿತ್ತು. ಅ. 6ರಂದು ಮದುವೆಗೆ ಎಲ್ಲ ಸಿದ್ಧತೆಯಲ್ಲಿತೊಡಗಿ ದ್ದರು. ರಾಜೀವ್ ಅವರು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಒಮ್ಮೆ ಪೈಲೆಟ್ ಆಗಿದ್ದರು. ಸೋಮವಾರ ಕಾಪ್ಟರ್ ನಿಯಂತ್ರಣ ಕಳೆದುಕೊಂಡ ಸ್ಥಳದಲ್ಲಿ ವಾಯುಪಡೆ ರಕ್ಷಣಾ ತಂಡ ಹುಡುಕಾಟ ನಡೆಸಿದಾಗ ಕಾಪ್ಟರ್‍ನ ಅವಶೇಷ ಹಾಗೂ ಮೃತದೇಹಗಳು ಪತ್ತೆಯಾಗಿವೆ. ರಾಜೀವ್ ಜತೆಗೆ ತಿರಾಪ್ ಜಿಲ್ಲಾ ಧಿಕಾರಿ ಡಾ. ಕಮಲೇಶ್ ಕುಮಾರ್ ಜೋಶಿ ಹಾಗೂ ಮತ್ತೊಬ್ಬ ಪೈಲಟ್ ಮೃತದೇಹವೂ ಪತ್ತೆಯಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT