ಪ್ರಕಾಶ್ ಜಾವದೇಕರ್(ಸಂಗ್ರಹ ಚಿತ್ರ) 
ದೇಶ

ಜಿಎಸ್ಟಿ ಖಂಡಿತವಾಗಿಯೂ ಜಾರಿಗೆ ಬರುತ್ತದೆ: ಪ್ರಕಾಶ್ ಜಾವದೇಕರ್

ಯಾವುದೇ ಪ್ರಮುಖ ನಿರ್ಣಯ, ಚರ್ಚೆ ನಡೆಯದೆ ಸಂಸತ್ತಿನ ಮುಂಗಾರು ಅಧಿವೇಶನವನ್ನು ಗುರುವಾರ ಅನಿರ್ದಿಷ್ಟಾವಧಿಗೆ ಮುಂದೂಡಿದ್ದು, ಇದಕ್ಕೆ ಕಾಂಗ್ರೆಸ್ ಕಾರಣ...

ಲಕ್ನೋ: ಯಾವುದೇ ಪ್ರಮುಖ ನಿರ್ಣಯ, ಚರ್ಚೆ ನಡೆಯದೆ ಸಂಸತ್ತಿನ ಮುಂಗಾರು ಅಧಿವೇಶನವನ್ನು ಗುರುವಾರ ಅನಿರ್ದಿಷ್ಟಾವಧಿಗೆ ಮುಂದೂಡಿದ್ದು, ಇದಕ್ಕೆ ಕಾಂಗ್ರೆಸ್ ಕಾರಣ ಅಂತ ಸರ್ಕಾರ  ಗಂಭೀರ ಆರೋಪ ಮಾಡಿದೆ.

ಮುಂಗಾರು ಅಧಿವೇಶನ ಸಂಪೂರ್ಣವಾಗಿ ನಿಷ್ಪ್ರಯೋಜಕವಾಗಲು ಕಾಂಗ್ರೆಸ್ ಮತ್ತು ಎಡಪಕ್ಷಗಳೇ ಕಾರಣ. ಅವರು ಸಚಿವೆ ಸುಷ್ಮಾ  ಸ್ವರಾಜ್, ವ್ಯಾಪಂ ಹಗರಣ ಮತ್ತು ರಾಜಸ್ತಾನ ಮುಖ್ಯಮಂತ್ರಿ ವಸುಂಧರಾ ರಾಜೆ ವಿಷಯದಲ್ಲಿ ಕಿಡಿ ಹಚ್ಚಲು ಯತ್ನಿಸಿದರು. ಆದರೆ ಅದು ಅವರಿಗೆ ಫಲ ನೀಡಲಿಲ್ಲ ಎಂದು ಲಕ್ನೋದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡುತ್ತಾ  ಕೇಂದ್ರ ಪರಿಸರ ಮತ್ತು ಅರಣ್ಯ ಖಾತೆ ಸಚಿವ ಪ್ರಕಾಶ್ ಜಾವದೇಕರ್ ಹೇಳಿದರು.

ಆದರೆ ಸರಕು ಮತ್ತು ಸೇವಾ ತೆರಿಗೆಗೆ (ಜಿಎಸ್ಟ್ಗಿ) ಖಂಡಿತವಾಗಿಯೂ ಅನುಮೋದನೆ ಸಿಗುತ್ತದೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು.ಇದರ ಅನುಮೋದನೆಗೆ ಒಂದು ವಿಶೇಷ ಅಧಿವೇಶನವನ್ನು ಕರೆಯುವ ಸೂಚನೆಯನ್ನೂ ಅವರು ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

SCROLL FOR NEXT