ಖ್ಯಾತ ಸರೋದ್ ವಾದಕ ಉಸ್ತಾದ್ ಅಮ್ಜದ್ ಅಲಿ ಖಾನ್ 
ದೇಶ

ಅಮ್ಜದ್ ಅಲಿ ಖಾನ್ ಅವರ ಸರೋದ್ ನಲ್ಲಿ ಹೊಸದಾಗಿ ಮೂಡಿ ಬಂದ 'ವಂದೆ ಮಾತರಂ'

ಖ್ಯಾತ ಸರೋದ್ ವಾದಕ ಉಸ್ತಾದ್ ಅಮ್ಜದ್ ಅಲಿ ಖಾನ್ ಅವರು ೬೯ನೆ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ರಾಷ್ಟ್ರೀಯ ಹಾಡು 'ವಂದೆ ಮಾತರಂ' ಅನ್ನು ನೂತನವಾಗಿ ಮೊಳಗಿಸಿದ್ದಾರೆ.

ಮುಂಬೈ: ಖ್ಯಾತ ಸರೋದ್ ವಾದಕ ಉಸ್ತಾದ್ ಅಮ್ಜದ್ ಅಲಿ ಖಾನ್ ಅವರು ೬೯ನೆ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ರಾಷ್ಟ್ರೀಯ ಹಾಡು 'ವಂದೆ ಮಾತರಂ' ಅನ್ನು ನೂತನವಾಗಿ ಮೊಳಗಿಸಿದ್ದಾರೆ. ತಮ್ಮ ನೆಚ್ಚಿನ ವಾದನದ ಜೊತೆ ಇದನ್ನು ಮೊಳಗಿಸಲು ಸ್ವಲ್ಪ ಕಷ್ಟವೇ ಆಯಿತು ಎಂದು ಅವರು ತಿಳಿಸಿದ್ದಾರೆ.

ಬಂಕಿಮ ಚಂದ್ರ ಅವರ ೧೮೮೨ರ ಕಾದಂಬರಿ 'ಆನಂದ ಮಠ'ದಲ್ಲಿ ಮೂಡಿ ಬಂದಿದ್ದ ತಾಯಿ ನೆಲಕ್ಕೆ ನಮಸ್ಕರಿಸುವ ಈ ಹಾಡು ಬೆಂಗಾಲಿ ಮತ್ತು ಸಂಸ್ಕೃತದಲ್ಲಿ ಬರೆಯಲಾಗಿತ್ತು.

ಪದ್ಮ ಭೂಷಣ ಪ್ರಶಸ್ತಿ ಪುರಸ್ಕೃತ ೬೯ ವರ್ಷದ ಈ ಸಂಗೀತಗಾರ ತಮ್ಮ ಪುತ್ರರಾದ ಅಮಾನ್ ಅಲಿ ಖಾನ್ ಮತ್ತು ಅಯಾನ್ ಅಲಿ ಖಾನ್ ಅವರೊಂದಿಗೆ ಈ ಸಂಗೀತ ಸೃಷ್ಟಿಸಿದ್ದು ಇದಕ್ಕೆ ಮುಂಬೈ ಮೂಲದ ನಿರ್ಮಾಣ ಸಂಸ್ಥೆ #ಫೇಮ್ ಕೈಜೋಡಿಸಿದೆ.

ಯುಟ್ಯೂಬ್ ನಲ್ಲಿ ಪ್ರಕಟವಾದ ಒಂದೆ ದಿನದಲ್ಲಿ ಈ ಸಂಗೀತ ವಿಡಿಯೋ ೫ ಲಕ್ಷಕ್ಕೂ ಹೆಚ್ಚು ಬಾರಿ ವೀಕ್ಷಣೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡಿಂಗ್ ವಿಷಯವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT