ಪಂಜಾಬ್ ನಲ್ಲಿ ತಲೆಕೆಳಗಾಗಿರುವ ರಾಷ್ಟ್ರೀಯ ಧ್ವಜ ಹಾಗೂ ಸಚಿವ ಬಿಕ್ರಮ್ ಸಿಂಗ್ ಮಜಿಥಿಯ 
ದೇಶ

ಪಂಜಾಬ್ ನಲ್ಲಿ ತಲೆಕೆಳಗಾಗಿ ಹಾರಾಡಿದ ಧ್ವಜ: 2 ಪೊಲೀಸರ ಅಮಾನತು

69ನೇ ಸ್ವಾತಂತ್ರ್ಯ ದಿನೋತ್ಸವದ ಸಂಭ್ರಮಾಚರಣೆಯಲ್ಲಿ ತಲೆಕೆಳಗಾಗಿ ರಾಷ್ಟ್ರಧ್ವಜ ಹಾರಿರುವ ಘಟನೆಯೊಂದು ಪಂಜಾಬ್ ನ ಅಮೃತಸರದಲ್ಲಿ ಶನಿವಾರ ನಡೆದಿದೆ...

ಅಮೃತಸರ: 69ನೇ ಸ್ವಾತಂತ್ರ್ಯ ದಿನೋತ್ಸವದ ಸಂಭ್ರಮಾಚರಣೆಯಲ್ಲಿ ತಲೆಕೆಳಗಾಗಿ ರಾಷ್ಟ್ರಧ್ವಜ ಹಾರಿರುವ ಘಟನೆಯೊಂದು ಪಂಜಾಬ್ ನ ಅಮೃತಸರದಲ್ಲಿ ಶನಿವಾರ ನಡೆದಿದೆ.

ಸ್ವಾತಂತ್ರ್ಯದ ದಿನದ ಸಂಭ್ರಮಾಚರಣೆಗಾಗಿ ಅಮೃತಸರದದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮ ಧ್ವಜಾರೋಹಣವನ್ನು ಸಚಿವ ಬಿಕ್ರಮ್ ಸಿಂಗ್ ಮಜಿಥಿಯ ಅವರು ಮಾಡಿದ್ದರು. ಆದರೆ, ಧ್ವಜ ತಲೆಕೆಳಗಾಗಿ ಹಾರಾಡುವುದನ್ನು ಗಮನಿಸದ ಸಚಿವ ಧ್ವಜಕ್ಕೆ ಸೆಲ್ಯೂಟ್ ಹೊಡೆದು ನೇರವಾಗಿ ಭಾಷಣ ಮಾಡಲು ಮುಂದಾಗಿದ್ದಾರೆ. ಈ ವೇಳೆ ಮಾಧ್ಯಮದ ಪತ್ರಕರ್ತನೊಬ್ಬ ಸಚಿವವನ್ನು ಈ ಬಗ್ಗೆ ಪ್ರಶ್ನೆ ಕೇಳಿದಾಗ ಧ್ವಜವನ್ನು ಗಮನಿಸಿದ್ದಾರೆ.

ಕೂಡಲೇ ಕೆಂಡಾಮಂಡಲವಾದ ಸಚಿವ ಘಟನೆಗೆ ಕಾರಣಕರ್ತರಾದ ನಿಲ್ಕಕ್ಷ್ಯ ಪೊಲೀಸರ ವಿರುದ್ಧ ಕ್ರಮಕ್ಕೆ ಮುಂದಾಗಿದ್ದು, ಇಬ್ಬರು ಪೊಲೀಸರನ್ನು ಅಮಾನತು ಮಾಡಿದ್ದಾರೆ. ಘಟನೆ ಕುರಿತಂತೆ ವಿವರಣೆ ನೀಡುವಂತೆಯೂ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಪ್ರಾಥಮಿಕ ವಿಚಾರಣೆಯ ಪ್ರಕಾರ ಇದೀಗ ಇನ್ಸ್ ಪೆಕ್ಟರ್ ಗುರ್ಮುಖ್ ಸಿಂಗ್ ಹಾಗೂ ಸಹಾಯಕ ಸಬ್ ಇನ್ಸ್ಪೆಕ್ಟರ್ ಗುರಿಂದರ್ ಸಿಂಗ್ ಅವರನ್ನು ಅಮಾನತು ಮಾಡಲಾಗಿದೆ ಎಂದು ಪಂಜಾಬ್ ಪೊಲೀಸ್ ಆಯುಕ್ತ ಜತಿಂದರ್ ಔಲಾಖ್ ಹೇಳಿದ್ದಾರೆ.

ಪಂಜಾಬ್ ನಲ್ಲಿ ನಡೆದ ಈ ಘಟನೆ ವೇಳೆ ಮಜಿಥಿಯ ಅವರು ಉಲ್ಟಾ ಹಾರಿದ ರಾಷ್ಟ್ರಧ್ವಜಕ್ಕೆ ಸೆಲ್ಯೂಟ್ ಹೊಡೆದಿರುವುದು ಇದೀಗ ಸಾಮಾಜಿಕ ತಾಣದಾದ್ಯಂತ ಚರ್ಚೆಗೆ ಕಾರಣವಾಗಿದ್ದು, ಬಿಕ್ರಮ್ ಸಿಂಗ್ ವಿರುದ್ಧ ಹಲವು ಚರ್ಚೆಗಳು ಆರಂಭವಾಗಿದ್ದು, ವ್ಯಂಗ್ಯಗಳು ವ್ಯಕ್ತವಾಗುತ್ತಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಗರ ನಕ್ಸಲರ ಟಾರ್ಗೆಟ್‌ ಚಾಮುಂಡಿ ಬೆಟ್ಟ- ಬಿಎಲ್ ಸಂತೋಷ್: ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ಮಾತನಾಡದಿರುವುದೇ ಲೇಸು-dks

ಉಳಿಕೆ ಮತ್ತು ಹೂಡಿಕೆ ನಡುವೆ ಸಮತೋಲನವಿರಲಿ! (ಹಣಕ್ಲಾಸು)

Modi ma*****ch**: ರಾಹುಲ್ ಗಾಂಧಿ Voter Adhikar Yatra ವೇದಿಕೆಯಲ್ಲಿ ಅಶ್ಲೀಲ ನಿಂದನೆ, BJP ಕೆಂಡಾಮಂಡಲ!

Chinnaswamy stampede: 'ನಿಮ್ಮೊಂದಿಗೆ ನಾವಿದ್ದೇವೆ..' 3 ತಿಂಗಳ ಬಳಿಕ ಕೊನೆಗೂ ಮೌನ ಮುರಿದ RCB, ಹೇಳಿದ್ದೇನು?

ಜಮ್ಮುವಿನಲ್ಲಿ 24 ಗಂಟೆಗಳಲ್ಲಿ ದಾಖಲೆಯ 380 ಮಿಮೀ ಮಳೆ!

SCROLL FOR NEXT