ಎಲ್.ಕೆ.ಆಡ್ವಾಣಿ(ಸಂಗ್ರಹ ಚಿತ್ರ) 
ದೇಶ

ಪ್ರಧಾನಿ ನರೇಂದ್ರ ಮೋದಿಯವರ ಭಾಷಣ 'ದೃಢ ನಿಲುವನ್ನು' ಸೂಚಿಸುತ್ತದೆ: ಆಡ್ವಾಣಿ

ಕಳೆದ ಒಂದು ವರ್ಷದಲ್ಲಿ ದೇಶ ಸದೃಢವಾಗಿ ಬೆಳೆದಿದೆ ಎಂದು ಹೇಳಿರುವ ಬಿಜೆಪಿ ಹಿರಿಯ ನಾಯಕ ಎಲ್.ಕೆ.ಆಡ್ವಾಣಿ...

ನವದೆಹಲಿ: ಕಳೆದ ಒಂದು ವರ್ಷದಲ್ಲಿ ದೇಶ ಸದೃಢವಾಗಿ ಬೆಳೆದಿದೆ ಎಂದು ಹೇಳಿರುವ ಬಿಜೆಪಿ ಹಿರಿಯ ನಾಯಕ ಎಲ್.ಕೆ.ಆಡ್ವಾಣಿ, ಸ್ವಾತಂತ್ರ್ಯೋತ್ಸವದ ಅಂಗವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಮಾಡಿರುವ ಭಾಷಣ ಅವರ ದೃಢ ನಿಲುವನ್ನು ಸೂಚಿಸುತ್ತದೆ ಎಂದು ಹೇಳಿದ್ದಾರೆ.

ನಮ್ಮ ದೇಶದಲ್ಲಿ ಕಳೆದ ವರ್ಷ ಒಂದು ಪ್ರಮುಖ ರಾಜಕೀಯ ರೂಪಾಂತರ ನಡೆಯಿತು. ಸರ್ಕಾರದ ಆಡಳಿತದ ಎರಡನೇ ವರ್ಷದ ಈ ಸಂದರ್ಭದಲ್ಲಿ ಜನರಲ್ಲಿ ವಿಶ್ವಾಸ ಹೆಚ್ಚಾಗಿದೆ. ಕಳೆದ ವರ್ಷ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಹೇಳಿದ್ದನ್ನೇ ಅವರು ಈ ವರ್ಷವೂ ಪುನರಾವರ್ತನೆ ಮಾಡಿದ್ದಾರೆ. ಅವರ ನಿರ್ಧಾರದಲ್ಲಿ ದೃಢತೆಯಿದೆ ಎಂದು ತಮ್ಮ ನಿವಾಸದಲ್ಲಿ 69ನೇ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಧ್ವಜಾರೋಹಣ ಮಾಡಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಸರ್ಕಾರದಲ್ಲಿನ ಆತ್ಮ ವಿಶ್ವಾಸ ನಮ್ಮ ದೇಶದ ಶ್ರಮಿಕರಲ್ಲಿ ವಿಶ್ವಾಸವನ್ನು ಹೆಚ್ಚಿಸಿದೆ ಎಂದು ನುಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT