ಬರ ತಾಲೂಕುಗಳು 114ಕ್ಕೆ ಏರಿಕೆ ( ಸಾಂದರ್ಭಿಕ ಚಿತ್ರ) 
ದೇಶ

ಬರ ತಾಲೂಕುಗಳು 114ಕ್ಕೆ ಏರಿಕೆ

ರಾಜ್ಯದಲ್ಲಿ ಮುಂಗಾರು ವೈಫಲ್ಯದಿಂದ ಬರದ ಪರಿಸ್ಥಿತಿ ಎದುರಿಸುತ್ತಿರುವ ತಾಲೂಕುಗಳ ಸಂಖ್ಯೆ 98ರಿಂದ 114ಕ್ಕೆ ಹೆಚ್ಚಾಗಿದೆ. ಬರ ಪರಿಹಾರ ತುರ್ತು ಕಾಮಗಾರಿ ಕೈಗೊಳ್ಳಲು ರು.149 ಕೋಟಿಗಳನ್ನು ಸರ್ಕಾರ ಬಿಡುಗಡೆ ಮಾಡಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ...

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ವೈಫಲ್ಯದಿಂದ ಬರದ ಪರಿಸ್ಥಿತಿ ಎದುರಿಸುತ್ತಿರುವ ತಾಲೂಕುಗಳ ಸಂಖ್ಯೆ 98ರಿಂದ 114ಕ್ಕೆ ಹೆಚ್ಚಾಗಿದೆ. ಬರ ಪರಿಹಾರ ತುರ್ತು ಕಾಮಗಾರಿ ಕೈಗೊಳ್ಳಲು ರು.149 ಕೋಟಿಗಳನ್ನು ಸರ್ಕಾರ ಬಿಡುಗಡೆ ಮಾಡಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ತಿಳಿಸಿದ್ದಾರೆ.

ರಾಜ್ಯದ 26 ಜಿಲ್ಲೆಗಳ 114 ತಾಲೂಕುಗಳಲ್ಲಿ ಬರ ಇದೆ. ಆಗಸ್ಟ್ ಅಂತ್ಯದ ವೇಳೆಗೆ ಮತ್ತಷ್ಟು ತಾಲೂಕುಗಳು ಸೇರ್ಪಡೆಯಾಗುವ ಸಾಧ್ಯತೆ ಇದೆ. ಕುಡಿಯುವ ನೀರು ಪೂರೈಕೆಗೆ ಬೋರ್
ವೆಲ್ ಕೊರೆಸಲು ರು.75 ಕೋಟಿ, ಉದ್ಯೋಗ ಖಾತರಿಗೆ ರು.50 ಕೋಟಿ ಸೇರಿದಂತೆ ತುರ್ತು ಕಾಮಗಾರಿಗಳಿಗೆ ಹಣ ಬಿಡುಗಡೆ ಮಾಡಲಾ- ಗಿದೆ ಎಂದು ಸುದ್ದಿಗಾರರಿಗೆ ಸೋಮವಾರ
ಹೇಳಿದರು.

ರಾಜ್ಯದ 6000 ಗ್ರಾಮ ಪಂಚಾಯಿತಿಗಳ ವಿಶೇಷ ಗ್ರಾಮಸಭೆ ಆ.20 ರಂದು ನಡೆಯಲಿದ್ದು, ಮುಖ್ಯಮಂತ್ರಿ-ಯವರು ಎಲ್ಲ ಹಂತದ ಜನಪ್ರತಿನಿಧಿಗಳು ಈ ಗ್ರಾಮ ಸಭೆಗಳಲ್ಲಿ ಭಾಗವಹಿಸಲಿದ್ದಾರೆ. ಇದೇ ಮೊಟ್ಟ ಮೊದಲ ಬಾರಿ ಮುಖ್ಯಮಂತ್ರಿ, ಸಚಿವರು, ಶಾಸಕರು ಸೇರಿದಂತೆ ವಿವಿಧ ಹಂತಗಳ ನಾಯಕರು ಗ್ರಾಮಸಭೆಗಳಲ್ಲಿ ಭಾಗವಹಿಸಲಿದ್ದಾರೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

SCROLL FOR NEXT