ಕಲ್ಲಿದ್ದಲು ಹಗರಣ: ವಿಜಯ್ ದರ್ದಾ ಸೇರಿ ಐವರಿಗೆ ಜಾಮೀನು (ಸಂಗ್ರಹ ಚಿತ್ರ) 
ದೇಶ

ಕಲ್ಲಿದ್ದಲು ಹಗರಣ: ವಿಜಯ್ ದರ್ದಾ ಸೇರಿ ಐವರಿಗೆ ಜಾಮೀನು

ಕಲ್ಲಿದ್ದಲು ಬ್ಲಾಕ್ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಸಭಾ ಸದಸ್ಯ ವಿಜಯ್ ದರ್ದಾ ಹಾಗೂ ಇತರೆ ಐವರಿಗೆ ನ್ಯಾಯಾಲಯವು ಗುರುವಾರ ಜಾಮೀನು ಮಂಜೂರು ಮಾಡಿದೆ...

ನವದೆಹಲಿ: ಕಲ್ಲಿದ್ದಲು ಬ್ಲಾಕ್ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಸಭಾ ಸದಸ್ಯ ವಿಜಯ್ ದರ್ದಾ ಹಾಗೂ ಇತರೆ ಐವರಿಗೆ ನ್ಯಾಯಾಲಯವು ಗುರುವಾರ ಜಾಮೀನು ಮಂಜೂರು ಮಾಡಿದೆ.

ಕಲ್ಲಿದ್ದಲು ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಧೀಶ ಭರತ್ ಪರಶರ್ ಅವರಿದ್ದ ಪೀಠ, ವಿಜಯ್ ದರ್ದಾ, ಅವರ ಮಗ ದೇವೇಂದ್ರ ದರ್ದಾ, ಗುಪ್ತಾ, ಕಲ್ಲಿದ್ದಲು ಸಚಿವಾಲಯದ ಅಧಿಕಾರಿ ಕೆ.ಎಸ್.ಕ್ರೊಪಾ, ಕೆ.ಸಿ.ಸಮ್ರಿಯಾ ಮತ್ತು ಮನೋಜ್ ಕುಮಾರ್ ಜಯಸ್ವಾಲ್ ಅವರಿಗೆ ಶರತ್ತು ಬದ್ಧ ಜಾಮೀನು ಮಂಜೂರು ಮಾಡಿದ್ದು, ಪ್ರತಿಯೊಬ್ಬ ಆರೋಪಿಯೂ 1 ಲಕ್ಷ ಶೂರಿಟಿ ನೀಡುವಂತೆ ಹೇಳಿದೆ.

ಕಲ್ಲಿದ್ದಲು ಹಗರಣ ಕುರಿತಂತೆ ಹಲವು ವಿವಾದಗಳು ಸೃಷ್ಟಿಯಾಗಿದ್ದವು. ಹೀಗಾಗಿ ಪ್ರಕರಣವನ್ನು ಕಳೆದ ವರ್ಷ ನವೆಂಬರ್ 20 ರಂದು ಸಿಬಿಐ ತನಿಖೆ ವಹಿಸಲಾಗಿದ್ದು, ಪ್ರಕರಣ ಸಂಬಂಧ ತನಿಖೆ ಕೈಗೊಂಡ ಸಿಬಿಐ ಅಧಿಕಾರಿಗಳು ಆರೋಪಪಟ್ಟಿಯಲ್ಲಿ, ದರ್ದಾ, ಅವರ ಪುತ್ರ ದೇವೇಂದ್ರ ದರ್ದಾ, ಜೆಲ್ ಡಿ ಯವತ್ಮಾಲ್ ಎನರ್ಜಿ ಪ್ರೈ.ಲಿ. ಮತ್ತು ಅದರ ನಿರ್ದೇಶಕ ಮನೋಜ್ ಜೈಸ್ವಾಲ್ ಅವರನ್ನು ಹೆಸರಿಸಿದ್ದರು. ಅರೋಪಪಟ್ಟಿಯಲ್ಲಿ ಇವರೆಲ್ಲರೂ ಮೋಸದಿಂದ ಕಲ್ಲಿದ್ದಲು ಬ್ಲಾಕ್ಗಳನ್ನು ಪಡೆದಿದ್ದಾರೆ ಎಂದೂ ಆರೋಪಿಸಲಾಗಿತ್ತು. ಆರೋಪಪಟ್ಟಿಯನ್ನು ಪರಿಶೀಲಿಸಿದ ವಿಶೇಷ ನ್ಯಾಯಾಲಯವು ಜುಲೇ 31 ರಂದು ಆರೋಪಿಗಳೆಲ್ಲರಿಗೂ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT