ಕಲ್ಲಿದ್ದಲು ಹಗರಣ: ವಿಜಯ್ ದರ್ದಾ ಸೇರಿ ಐವರಿಗೆ ಜಾಮೀನು (ಸಂಗ್ರಹ ಚಿತ್ರ) 
ದೇಶ

ಕಲ್ಲಿದ್ದಲು ಹಗರಣ: ವಿಜಯ್ ದರ್ದಾ ಸೇರಿ ಐವರಿಗೆ ಜಾಮೀನು

ಕಲ್ಲಿದ್ದಲು ಬ್ಲಾಕ್ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಸಭಾ ಸದಸ್ಯ ವಿಜಯ್ ದರ್ದಾ ಹಾಗೂ ಇತರೆ ಐವರಿಗೆ ನ್ಯಾಯಾಲಯವು ಗುರುವಾರ ಜಾಮೀನು ಮಂಜೂರು ಮಾಡಿದೆ...

ನವದೆಹಲಿ: ಕಲ್ಲಿದ್ದಲು ಬ್ಲಾಕ್ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಸಭಾ ಸದಸ್ಯ ವಿಜಯ್ ದರ್ದಾ ಹಾಗೂ ಇತರೆ ಐವರಿಗೆ ನ್ಯಾಯಾಲಯವು ಗುರುವಾರ ಜಾಮೀನು ಮಂಜೂರು ಮಾಡಿದೆ.

ಕಲ್ಲಿದ್ದಲು ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಧೀಶ ಭರತ್ ಪರಶರ್ ಅವರಿದ್ದ ಪೀಠ, ವಿಜಯ್ ದರ್ದಾ, ಅವರ ಮಗ ದೇವೇಂದ್ರ ದರ್ದಾ, ಗುಪ್ತಾ, ಕಲ್ಲಿದ್ದಲು ಸಚಿವಾಲಯದ ಅಧಿಕಾರಿ ಕೆ.ಎಸ್.ಕ್ರೊಪಾ, ಕೆ.ಸಿ.ಸಮ್ರಿಯಾ ಮತ್ತು ಮನೋಜ್ ಕುಮಾರ್ ಜಯಸ್ವಾಲ್ ಅವರಿಗೆ ಶರತ್ತು ಬದ್ಧ ಜಾಮೀನು ಮಂಜೂರು ಮಾಡಿದ್ದು, ಪ್ರತಿಯೊಬ್ಬ ಆರೋಪಿಯೂ 1 ಲಕ್ಷ ಶೂರಿಟಿ ನೀಡುವಂತೆ ಹೇಳಿದೆ.

ಕಲ್ಲಿದ್ದಲು ಹಗರಣ ಕುರಿತಂತೆ ಹಲವು ವಿವಾದಗಳು ಸೃಷ್ಟಿಯಾಗಿದ್ದವು. ಹೀಗಾಗಿ ಪ್ರಕರಣವನ್ನು ಕಳೆದ ವರ್ಷ ನವೆಂಬರ್ 20 ರಂದು ಸಿಬಿಐ ತನಿಖೆ ವಹಿಸಲಾಗಿದ್ದು, ಪ್ರಕರಣ ಸಂಬಂಧ ತನಿಖೆ ಕೈಗೊಂಡ ಸಿಬಿಐ ಅಧಿಕಾರಿಗಳು ಆರೋಪಪಟ್ಟಿಯಲ್ಲಿ, ದರ್ದಾ, ಅವರ ಪುತ್ರ ದೇವೇಂದ್ರ ದರ್ದಾ, ಜೆಲ್ ಡಿ ಯವತ್ಮಾಲ್ ಎನರ್ಜಿ ಪ್ರೈ.ಲಿ. ಮತ್ತು ಅದರ ನಿರ್ದೇಶಕ ಮನೋಜ್ ಜೈಸ್ವಾಲ್ ಅವರನ್ನು ಹೆಸರಿಸಿದ್ದರು. ಅರೋಪಪಟ್ಟಿಯಲ್ಲಿ ಇವರೆಲ್ಲರೂ ಮೋಸದಿಂದ ಕಲ್ಲಿದ್ದಲು ಬ್ಲಾಕ್ಗಳನ್ನು ಪಡೆದಿದ್ದಾರೆ ಎಂದೂ ಆರೋಪಿಸಲಾಗಿತ್ತು. ಆರೋಪಪಟ್ಟಿಯನ್ನು ಪರಿಶೀಲಿಸಿದ ವಿಶೇಷ ನ್ಯಾಯಾಲಯವು ಜುಲೇ 31 ರಂದು ಆರೋಪಿಗಳೆಲ್ಲರಿಗೂ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT