ಐಪಿಎಸ್ ಅಧಿಕಾರಿ ಸಂಜೀವ್ ಭಟ್ (ಸಂಗ್ರಹ ಚಿತ್ರ) 
ದೇಶ

ಮೋದಿ ವಿರುದ್ಧ ಬಂಡೆದ್ದ ಸಂಜೀವ್ ಭಟ್ ವಜಾ

2002ರ ಗುಜರಾತ್ ನ ಕೋಮುಗಲಭೆ ಪ್ರಕರಣದಲ್ಲಿ ಹಾಲಿ ಪ್ರಧಾನಿ ಮೋದಿ ವಿರುದ್ಧ ಸಿಡಿದೆದ್ದಿದ್ದ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ರನ್ನು ರಾಜ್ಯ ಸರ್ಕಾರ ಸೇವೆಯಿಂದಲೇ ವಜಾಗೊಳಿಸಿದೆ...

ಅಹಮದಾಬಾದ್: 2002ರ ಗುಜರಾತ್ ನ ಕೋಮುಗಲಭೆ ಪ್ರಕರಣದಲ್ಲಿ ಹಾಲಿ ಪ್ರಧಾನಿ ಮೋದಿ ವಿರುದ್ಧ ಸಿಡಿದೆದ್ದಿದ್ದ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ರನ್ನು ರಾಜ್ಯ ಸರ್ಕಾರ ಸೇವೆಯಿಂದಲೇ ವಜಾಗೊಳಿಸಿದೆ.

ನನಗೆ ವಜಾ ಆದೇಶ ಸಿಕ್ಕಿದೆ ಎಂದು ಸ್ವತಃ ಸಂಜೀವ್ ಭಟ್ ಹೇಳಿಕೊಂಡಿದ್ದಾರೆ. ಈ ಬಗ್ಗೆ ಫೇಸ್ ಬುಕ್ ನಲ್ಲಿ 27 ವರ್ಷಗಳ ಸೇವೆಯನ್ನು ನಾನು ಸಂತೋಷದಿಂದ ನಡೆಸಿದ್ದೇನೆ. ಹಾಲಿ ಸರ್ಕಾರ ಕಪೋಲಕಲ್ಪಿತ ಆರೋಪಗಳ ಬಗ್ಗೆ ನೆಪ ಮಾತ್ರದ ತನಿಖೆ ನಡೆಸಿ, ಅನಧಿಕೃತ ಗೈರುಹಾಜರಾದ ಆರೋಪ ಹೊರಿಸಿ ಕರ್ತವ್ಯದಿಂದ ಬಿಡುಗಡೆ ಮಾಡಿದೆ ಎಂದು ಸಂಜೀವ್ ಭಟ್ ಬರೆದುಕೊಂಡಿದ್ದಾರೆ.

ಜುನಾಗಡದಲ್ಲಿ ಕಾರ್ಯನಿರ್ವಹಿಸುತ್ತಿದ್ದಾಗ ಸೂಚನೆಯಿಲ್ಲದೆ ಸೇವೆಗೆ ಗೈರು ಹಾಜರಾಗಿದ್ದಕ್ಕಾಗಿ ಹಾಗೂ ಕಚೇರಿ ವಾಹನಗಳ ದುರ್ಬಳಕೆ ಆರೋಪದ ಮೇಲೆ ಅವರನ್ನು 2011ರಲ್ಲಿ ಸೇವೆಯಿಂದ ಅಮಾನತುಗೊಳಿಸಲಾಗಿತ್ತು. ತಾಯಿಯ ಅನಾರೋಗ್ಯ ಕಾರಣವೊಡ್ಡಿ ತಾವು ಗೈರುಹಾಜರಿದ್ದುದಾಗಿ ಭಟ್ ಹೇಳಿಕೊಂಡಿದ್ದರು. ಜೊತೆಗೆ 2002ರ ಕೋಮುಗಲಭೆ ಪ್ರಕರಣಕ್ಕೆ ಸಂಬಂಧಿಸಿ ನಾನಾವತಿ ಆಯೋಗದೆದುರು ಹಾಜರಾಗಲು ತಾವು ಅಹ್ಮದಾಬಾದ್ ನಲ್ಲಿರುವುದು ಅವಶ್ಯವೆಂದೂ ಕೇಳಿಕೊಂಡಿದ್ದರು. ಆದರೆ ಇದೀಗ ಅವರನ್ನು ಕಳೆದ ವರ್ಷದ ಕೇಂದ್ರ ಗೃಹ ಸಚಿವಾಲಯದ ನಿರ್ದೇಶನದಂತೆ ವಜಾ ಮಾಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT