ಸಯೀದ್ ಅಲಿ ಶಾಹ್ ಗೀಲಾನಿ 
ದೇಶ

ಭಾರತ-ಪಾಕ್ ಮಾತುಕತೆ: ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕರಿಗೆ ಗೃಹ ಬಂಧನ

ರಾಷ್ಟ್ರೀಯ ಭದ್ರತಾ ಸಲಹೆಗಾರ(ಎನ್‌ಎಸ್‌ಎ)ರ ಮಟ್ಟದ ಮಾತುಕತೆಗೆ ಕಾಶ್ಮೀರ ಪ್ರತ್ಯೇಕತಾವಾದಿ ಮುಖಂಡರಿಗೆ ಆಹ್ವಾನ ನೀಡಿದ ಪಾಕ್‌ಗೆ ಕಠಿಣ ಸಂದೇಶ ರವಾನಿಸಿರುವ...

ಶ್ರೀನಗರ: ರಾಷ್ಟ್ರೀಯ ಭದ್ರತಾ ಸಲಹೆಗಾರ(ಎನ್‌ಎಸ್‌ಎ)ರ ಮಟ್ಟದ ಮಾತುಕತೆಗೆ ಕಾಶ್ಮೀರ ಪ್ರತ್ಯೇಕತಾವಾದಿ ಮುಖಂಡರಿಗೆ ಆಹ್ವಾನ ನೀಡಿದ ಪಾಕ್‌ಗೆ ಕಠಿಣ ಸಂದೇಶ ರವಾನಿಸಿರುವ ಭಾರತ, ಗುರುವಾರ ಮೂವರು ಪ್ರತೇಕವಾದಿ ನಾಯಕರಿಗೆ ಗೃಹ ಬಂಧನ ವಿಧಿಸಿದೆ.

ಹುರಿಯತ್ ಕಾನ್ಫೆರೆನ್ಸ್ ನಾಯಕ ಸಯೀದ್ ಅಲಿ ಶಾಹ್ ಗೀಲಾನಿ, ಹುರಿಯತ್ ಗ್ರೂಪ್ ಅಧ್ಯಕ್ಷ ಮಿರ್ವಾಝ್ ಉಮರ್ ಫಾರೂಖ್ ಹಾಗೂ ಹುರಿಯತ್‌ನ ಅಬ್ಬಾಸ್ ಅನ್ಸಾರಿಗೆ ಗೃಹ ಬಂಧನ ವಿಧಿಸಲಾಗಿದೆ.

ಎನ್‌ಎಸ್‌ಎ ಮಾತುಕತೆಗೂ ಮುನ್ನ ಪಾಕಿಸ್ತಾನ ವಿದೇಶಾಂಗ ಸಲಹೆಗಾರ ಸರ್ತಾಜ್ ಅಜೀಜ್‌ರನ್ನು ಭೇಟಿಯಾಗುವಂತೆ ನಿನ್ನೆ ಕಾಶ್ಮೀರ ಪ್ರತ್ಯೇಕತಾವಾದಿ ಮುಖಂಡರಿಗೆ ಪಾಕ್ ರಾಯಭಾರಿ ಕಚೇರಿ ಆಹ್ವಾನಿ ನೀಡಿತ್ತು. ಈ ಆಹ್ವಾನವನ್ನು ಪ್ರತ್ಯೇಕವಾದಿ ನಾಯಕರು ಸ್ವೀಕರಿಸಿದ್ದರು.

ಭಾರತೀಯ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಜತೆಗೆ ಮಾತುಕತೆಗಾಗಿ ಪಾಕ್ ವಿದೇಶಾಂಗ ಸಲಹೆಗಾರ ಸರ್ತಾಜ್ ಅಜೀಜ್ ಅವರು ಆಗಸ್ಟ್ 23ರಂದು ಭಾರತಕ್ಕೆ ಭೇಟಿ ನೀಡಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT