ಸಚಿನ್ ತೆಂಡೂಲ್ಕರ್-ಶಾರೂಕ್ ಖಾನ್(ಸಂಗ್ರಹ ಚಿತ್ರ) 
ದೇಶ

ಅಂತಾರಾಷ್ಟ್ರೀಯ ಜಾಹೀರಾತು ಸಂಸ್ಥೆಯ ಬೆಳ್ಳಿಹಬ್ಬಕ್ಕೆ ಸಚಿನ್, ಶಾರೂಕ್

ಅಂತಾರಾಷ್ಟ್ರೀಯ ಜಾಹೀರಾತು ಸಂಸ್ಥೆಯ ಭಾರತದ ಆವೃತ್ತಿಯ ಬೆಳ್ಳಿ ಹಬ್ಬದ ಅಂಗವಾಗಿ ಅದರ ಮೂರು ದಿನಗಳ ಸಭೆಯಲ್ಲಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್...

ಕೊಚ್ಚಿ: ಅಂತಾರಾಷ್ಟ್ರೀಯ ಜಾಹೀರಾತು ಸಂಸ್ಥೆಯ ಭಾರತದ ಆವೃತ್ತಿಯ ಬೆಳ್ಳಿ ಹಬ್ಬದ ಅಂಗವಾಗಿ ಅದರ ಮೂರು ದಿನಗಳ ಸಭೆಯಲ್ಲಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಮತ್ತು ಬಾಲಿವುಡ್ ನಟ ಶಾರೂಕ್ ಖಾನ್ ಉತ್ಪನ್ನಗಳ ಬ್ರ್ಯಾಂಡ್ ಉಸ್ತುವಾರಿಯ ಅನುಭವವನ್ನು ಹಂಚಿಕೊಳ್ಳಲಿದ್ದಾರೆ.

ಸೆಪ್ಟೆಂಬರ್ 3ರಿಂದ 5ರವರೆಗೆ ಮೂರು ದಿನಗಳ ಕಾಲ ನಡೆಯಲಿರುವ ಕಾರ್ಯಕ್ರಮದಲ್ಲಿ ಜಾಹೀರಾತು ಮತ್ತು ಮಾರ್ಕೆಟಿಂಗ್ ನ ಅನುಭವಸ್ಥರು, ಬ್ರಾಂಡ್ ಅಂಬಾಸಿಡರ್ ಗಳು, ಗಣ್ಯರನ್ನು ಒಂದೇ ವೇದಿಕೆಯಲ್ಲಿ ನೋಡಬಹುದು ಎಂದು ಸಂಘಟಕರು ಹೇಳಿದ್ದಾರೆ.

''ಮುಂದೆ ಏನು ಬರುತ್ತದೆ'' ಎಂಬ ಘೋಷ ವಾಕ್ಯ ಹಾಗೂ ''ಬದಲಾವಣೆ ಭವಿಷ್ಯವನ್ನು ರೂಪುಗೊಳಿಸುತ್ತದೆ'' ಎಂಬ ಉಪ ಘೋಷ ವಾಕ್ಯದೊಂದಿಗೆ ಈ ಬಾರಿಯ ಸಭೆ ನಡೆಯಲಿದೆ.ಕೇರಳ ರಾಜ್ಯದಲ್ಲಿ ಇದುವರೆಗೆ ನಡೆದ ಎಲ್ಲಾ ಮಾರುಕಟ್ಟೆ ಮತ್ತು ಸಂವಹನ ಕಾರ್ಯಕ್ರಮಗಳಲ್ಲಿ ಅತಿ ಬೃಹತ್ ಕಾರ್ಯಕ್ರಮ ಇದಾಗಿರಲಿದೆ ಎಂದು ಸಂಸ್ಥೆಯ ಭಾರತೀಯ ಆವೃತ್ತಿಯ ಅಧ್ಯಕ್ಷ ಶ್ರೀನಿವಾಸನ್ ಸ್ವಾಮಿ ತಿಳಿಸಿದ್ದಾರೆ.

ಸಚಿನ್ ತೆಂಡೂಲ್ಕರ್ ಮತ್ತು ಶಾರೂಕ್ ಖಾನ್ ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಕ್ರಿಕೆಟ್ ಮತ್ತು ಚಲನಚಿತ್ರ ಹೊರತುಪಡಿಸಿ ಪ್ರಚಾರ ರಾಯಭಾರಿಗಳಾಗಿ ತಮ್ಮ ಅನುಭವ ಹಂಚಿಕೊಳ್ಳಲಿದ್ದಾರೆ.

ಬೇರೆ ಬೇರೆ ಕ್ಷೇತ್ರಗಳಲ್ಲಿ ಹೆಸರು ಮಾಡಿರುವ ಜಗತ್ತಿನ ಪ್ರಮುಖ ವ್ಯಕ್ತಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಗರ ನಕ್ಸಲರ ಟಾರ್ಗೆಟ್‌ ಚಾಮುಂಡಿ ಬೆಟ್ಟ- ಬಿಎಲ್ ಸಂತೋಷ್: ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ಮಾತನಾಡದಿರುವುದೇ ಲೇಸು-dks

ಉಳಿಕೆ ಮತ್ತು ಹೂಡಿಕೆ ನಡುವೆ ಸಮತೋಲನವಿರಲಿ! (ಹಣಕ್ಲಾಸು)

Chinnaswamy stampede: 'ನಿಮ್ಮೊಂದಿಗೆ ನಾವಿದ್ದೇವೆ..' 3 ತಿಂಗಳ ಬಳಿಕ ಕೊನೆಗೂ ಮೌನ ಮುರಿದ RCB, ಹೇಳಿದ್ದೇನು?

ಜಮ್ಮುವಿನಲ್ಲಿ 24 ಗಂಟೆಗಳಲ್ಲಿ ದಾಖಲೆಯ 380 ಮಿಮೀ ಮಳೆ!

ಅಮೆರಿಕದಿಂದ ಆಮದು ಮಾಡಿಕೊಳ್ಳುವ ವಸ್ತುಗಳ ಮೇಲೆ ಭಾರತ ಹೆಚ್ಚಿನ ಸುಂಕ ವಿಧಿಸಬೇಕು: ಕೇಜ್ರಿವಾಲ್

SCROLL FOR NEXT