ಪ್ರಧಾನಿ ನರೇಂದ್ರ ಮೋದಿ-ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ 
ದೇಶ

ಮುಂದುವರೆದ ಪಾಕ್ ಉದ್ಧಟತನ, ಎನ್‌ಎಸ್‌ಎ ಮಟ್ಟದ ಮಾತುಕತೆ ರದ್ದು ಸಾಧ್ಯತೆ

ಪಾಕಿಸ್ತಾನ ತನ್ನ ಉದ್ಧಟತನ ಮುಂದುವರೆಸಿದ ಹಿನ್ನೆಲೆಯಲ್ಲಿ ಭಾರತ ರಾಷ್ಟ್ರೀಯ ಭದ್ರತಾ ಸಲಹೆಗಾರರ ಮಟ್ಟದ ಸಭೆ(ಎನ್ಎಸ್ಎ)ಯನ್ನು ರದ್ದುಗೊಳಿಸುವ ಸಾಧ್ಯತೆ ಇದೆ.

ನವದೆಹಲಿ: ಪಾಕಿಸ್ತಾನ ತನ್ನ ಉದ್ಧಟತನ ಮುಂದುವರೆಸಿರುವ ಹಿನ್ನೆಲೆಯಲ್ಲಿ ಭಾರತ ರಾಷ್ಟ್ರೀಯ ಭದ್ರತಾ ಸಲಹೆಗಾರರ ಮಟ್ಟದ ಸಭೆ(ಎನ್ಎಸ್ಎ)ಯನ್ನು ರದ್ದುಗೊಳಿಸುವ ಸಾಧ್ಯತೆ ಇದೆ.

ದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ
ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ವಿಕಾಸ್ ಸ್ವರೂಪ್ ಅವರು, ಉಭಯ ರಾಷ್ಟ್ರಗಳ ಮಧ್ಯೆ ಮೂರನೇ ವ್ಯಕ್ತಿಗೆ ಭಾರತ ಯಾವತ್ತು ಅವಕಾಶ ನೀಡಿಲ್ಲ. ಆದರೆ ಪಾಕಿಸ್ತಾನ ಪ್ರತ್ಯೇಕವಾದಿಗಳಿಗೆ ಆಹ್ವಾನಿ ನೀಡಿದ್ದು, ಅದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದಿದ್ದಾರೆ.

ಗಡಿಯಲ್ಲಿ ಪಾಕಿಸ್ತಾನದ ಅಪ್ರಚೋದಿತ ದಾಳಿ ಹಾಗೂ ಇತ್ತೀಚಿಗೆ ಗಡಿಯಲ್ಲಿ ನಡೆದ ಉಗ್ರರ ದಾಳಿಯ ನಡುವೆಯೂ ಉಭಯ ರಾಷ್ಟ್ರಗಳ ಪ್ರಧಾನಿಗಳು ಎನ್ಎಸ್ಎ ಮಾತುಕತೆಗೆ ಒಪ್ಪಿಕೊಂಡಿದ್ದರು. ಈಗಲೂ ಭಾರತ ಸೌಹಾರ್ದಯುತ ಹಾಗೂ ಶಾಂತಿಯೂತ ಮಾತುಕತೆ ಬದ್ಧವಾಗಿದೆ ಎಂದು ಸ್ವರೂಪ್ ಹೇಳಿದ್ದಾರೆ.

ಭಾರತದ ವಿರೋಧದ ನಡುವೆಯೂ ರಾಷ್ಟ್ರೀಯ ಭದ್ರತಾ ಸಲಹೆಗಾರರ ಮಟ್ಟದ ಸಭೆಗೆ ಕಾಶ್ಮೀರಿ ಪ್ರತ್ಯೇಕವಾದಿಗಳಿಗೆ ಪಾಕಿಸ್ತಾನ ಆಹ್ವಾನ ನೀಡಿತ್ತು. ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ ಭಾರತ ಪ್ರತ್ಯೇಕವಾದಿಗಳೊಂದಿಗೆ ಮಾತುಕತೆ ನಡೆಸಬಾರದು ಎಂದು ಸೂಚಿಸಿತ್ತು.

ಆದರೆ ತನ್ನ ಹಳೆ ಚಾಳಿಯನ್ನೇ ಮುಂದುವರೆಸಿ
ದ ಪಾಕಿಸ್ತಾನ, ಭಾರತದ ಉಪದೇಶ ನಮಗೆ ಬೇಕಾಗಿಲ್ಲ. ಕಾಶ್ಮೀರಿ ಪ್ರತ್ಯೇಕತಾವಾದಿಗಳೊಂದಿಗೆ ಮಾತುಕತೆ ನಡೆಸುವುದಾಗಿ ಸ್ಪಷ್ಟಪಡಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT