ಉಪಹಾರ್ ದುರಂತದ 10ನೇ ವರ್ಷಾಚರಣೆ ವೇಳೆ ನಡೆದ ಪ್ರಾರ್ಥನಾ ಸಭೆಯಲ್ಲಿ ನೊಂದ ಕುಟುಂಬಗಳ ಸದಸ್ಯರು (ಸಂಗ್ರಹ ಚಿತ್ರ) 
ದೇಶ

ಉಪಹಾರ್ ಪ್ರಕರಣ: ಕಾನೂನು ಸಲಹೆ ಪಡೆಯಲು ಮುಂದಾದ ದೆಹಲಿ ಸರ್ಕಾರ

ಉಪಹಾರ್ ಅಗ್ನಿ ದುರಂತದಲ್ಲಿ ಅನ್ಸಲ್ ಸಹೋದರರಿಗೆ ಸುಪ್ರೀಂ ಕೋರ್ಟ್ ವಿಧಿಸಿರಿವ 60 ಕೋಟಿ ರುಪಾಯಿ ದಂಡದ ಹಣವನ್ನು ತಿರಸ್ಕರಿಸುವಂತೆ ನೊಂದ...

ನವದೆಹಲಿ: ಉಪಹಾರ್ ಅಗ್ನಿ ದುರಂತದಲ್ಲಿ ಅನ್ಸಲ್ ಸಹೋದರರಿಗೆ ಸುಪ್ರೀಂ ಕೋರ್ಟ್ ವಿಧಿಸಿರಿವ 60 ಕೋಟಿ ರುಪಾಯಿ ದಂಡದ ಹಣವನ್ನು ತಿರಸ್ಕರಿಸುವಂತೆ ನೊಂದ ಕುಟುಂಬಗಳು ದೆಹಲಿ ಸರ್ಕಾರವನ್ನು ಒತ್ತಾಯಿಸಿದ್ದು, ಈ ಸಂಬಂಧ ಕಾನೂನು ಸಲಹೆ ಪಡೆಯಲಾಗುವುದು ಎಂದು ಶುಕ್ರವಾರ ದೆಹಲಿ ಸರ್ಕಾರ ತಿಳಿಸಿದೆ.

ಈ ಸಂಬಂಧ ಇಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿ ಮಾಡಿದ ನೊಂದ ಮೂರು ಕುಟುಂಬಗಳ ಸದಸ್ಯರು ಸುಪ್ರೀಂ ಕೋರ್ಟ್ ಆದೇಶಿಸಿರುವ 60 ಕೋಟಿ ರುಪಾಯಿಯನ್ನು ತಿರಸ್ಕರಿಸುವಂತೆ ಒತ್ತಾಯಿಸಿದೆ.

'ಅವರ ಬೇಡಿಕೆ ಕುರಿತು ಸರ್ಕಾರ ಕಾನೂನು ಸಲಹೆ ಪಡೆಯಲಿದೆ. ಅಲ್ಲದೆ ಮಾನವ ಹಂತಕರಿಗೆ ಕಠಿಣ ಶಿಕ್ಷೆ ವಿಧಿಸುವ ಕಾನೂನು ತರಬೇಕು ಎಂಬ ನೊಂದ ಕುಟುಂಬಗಳ ಸಲಹೆಯನ್ನು ಸ್ವೀಕರಿಸಲಾಗಿದೆ' ಎಂದು ದೆಹಲಿ ಸರ್ಕಾರದ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಬುಧವಾರ 1997ರ ಉಪಹಾರ್ ಚಿತ್ರಮಂದರಿದ ಅಗ್ನಿ ದುರಂತ ಪ್ರಕರಣದ ತೀರ್ಪು ಪ್ರಕಟಿಸಿದ್ದ ಸುಪ್ರೀಂ ಕೋರ್ಟ್, ಪ್ರಕರಣದ ಆರೋಪಿಗಳಾದ ಉದ್ಯಮಿ ಸುಶೀಲ್ ಅನ್ಸಾಲ್ ಮತ್ತು ಗೋಪಾಲ್ ಅನ್ಸಾಲ್ ಅವರಿಗೆ ತಲಾ 30 ಕೋಟಿ ರುಪಾಯಿ ದಂಡ ವಿಧಿಸಿತ್ತು. ಅಲ್ಲದೆ 60 ಕೋಟಿ ರುಪಾಯಿ ದಂಡದ ಮೊತ್ತವನ್ನು ದೆಹಲಿ ಸರ್ಕಾರಕ್ಕೆ ಜಮೆ ಮಾಡುವಂತೆ ಸುಪ್ರೀಂ ಕೋರ್ಟ್‌ನ ತ್ರಿಸದಸ್ಯ ಪೀಠ ಆದೇಶಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

SCROLL FOR NEXT