ಉಪಹಾರ್ ದುರಂತದ 10ನೇ ವರ್ಷಾಚರಣೆ ವೇಳೆ ನಡೆದ ಪ್ರಾರ್ಥನಾ ಸಭೆಯಲ್ಲಿ ನೊಂದ ಕುಟುಂಬಗಳ ಸದಸ್ಯರು (ಸಂಗ್ರಹ ಚಿತ್ರ) 
ದೇಶ

ಉಪಹಾರ್ ಪ್ರಕರಣ: ಕಾನೂನು ಸಲಹೆ ಪಡೆಯಲು ಮುಂದಾದ ದೆಹಲಿ ಸರ್ಕಾರ

ಉಪಹಾರ್ ಅಗ್ನಿ ದುರಂತದಲ್ಲಿ ಅನ್ಸಲ್ ಸಹೋದರರಿಗೆ ಸುಪ್ರೀಂ ಕೋರ್ಟ್ ವಿಧಿಸಿರಿವ 60 ಕೋಟಿ ರುಪಾಯಿ ದಂಡದ ಹಣವನ್ನು ತಿರಸ್ಕರಿಸುವಂತೆ ನೊಂದ...

ನವದೆಹಲಿ: ಉಪಹಾರ್ ಅಗ್ನಿ ದುರಂತದಲ್ಲಿ ಅನ್ಸಲ್ ಸಹೋದರರಿಗೆ ಸುಪ್ರೀಂ ಕೋರ್ಟ್ ವಿಧಿಸಿರಿವ 60 ಕೋಟಿ ರುಪಾಯಿ ದಂಡದ ಹಣವನ್ನು ತಿರಸ್ಕರಿಸುವಂತೆ ನೊಂದ ಕುಟುಂಬಗಳು ದೆಹಲಿ ಸರ್ಕಾರವನ್ನು ಒತ್ತಾಯಿಸಿದ್ದು, ಈ ಸಂಬಂಧ ಕಾನೂನು ಸಲಹೆ ಪಡೆಯಲಾಗುವುದು ಎಂದು ಶುಕ್ರವಾರ ದೆಹಲಿ ಸರ್ಕಾರ ತಿಳಿಸಿದೆ.

ಈ ಸಂಬಂಧ ಇಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿ ಮಾಡಿದ ನೊಂದ ಮೂರು ಕುಟುಂಬಗಳ ಸದಸ್ಯರು ಸುಪ್ರೀಂ ಕೋರ್ಟ್ ಆದೇಶಿಸಿರುವ 60 ಕೋಟಿ ರುಪಾಯಿಯನ್ನು ತಿರಸ್ಕರಿಸುವಂತೆ ಒತ್ತಾಯಿಸಿದೆ.

'ಅವರ ಬೇಡಿಕೆ ಕುರಿತು ಸರ್ಕಾರ ಕಾನೂನು ಸಲಹೆ ಪಡೆಯಲಿದೆ. ಅಲ್ಲದೆ ಮಾನವ ಹಂತಕರಿಗೆ ಕಠಿಣ ಶಿಕ್ಷೆ ವಿಧಿಸುವ ಕಾನೂನು ತರಬೇಕು ಎಂಬ ನೊಂದ ಕುಟುಂಬಗಳ ಸಲಹೆಯನ್ನು ಸ್ವೀಕರಿಸಲಾಗಿದೆ' ಎಂದು ದೆಹಲಿ ಸರ್ಕಾರದ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಬುಧವಾರ 1997ರ ಉಪಹಾರ್ ಚಿತ್ರಮಂದರಿದ ಅಗ್ನಿ ದುರಂತ ಪ್ರಕರಣದ ತೀರ್ಪು ಪ್ರಕಟಿಸಿದ್ದ ಸುಪ್ರೀಂ ಕೋರ್ಟ್, ಪ್ರಕರಣದ ಆರೋಪಿಗಳಾದ ಉದ್ಯಮಿ ಸುಶೀಲ್ ಅನ್ಸಾಲ್ ಮತ್ತು ಗೋಪಾಲ್ ಅನ್ಸಾಲ್ ಅವರಿಗೆ ತಲಾ 30 ಕೋಟಿ ರುಪಾಯಿ ದಂಡ ವಿಧಿಸಿತ್ತು. ಅಲ್ಲದೆ 60 ಕೋಟಿ ರುಪಾಯಿ ದಂಡದ ಮೊತ್ತವನ್ನು ದೆಹಲಿ ಸರ್ಕಾರಕ್ಕೆ ಜಮೆ ಮಾಡುವಂತೆ ಸುಪ್ರೀಂ ಕೋರ್ಟ್‌ನ ತ್ರಿಸದಸ್ಯ ಪೀಠ ಆದೇಶಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್, ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

ಲೆಬನಾನ್ ನಲ್ಲಿ ಇಸ್ರೇಲ್ ಆರ್ಭಟ: ಮನೆಗಳ ಮೇಲೆ ಸ್ಫೋಟಕಗಳಿಂದ ದಾಳಿ; ಹಲವು ಹಳ್ಳಿಗಳು ನಾಮಾವಶೇಷ!

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

SCROLL FOR NEXT