ಪಾಕ್ ಭದ್ರತಾ ಸಲಹೆಗಾರ ಸರ್ತಾಜ್ ಅಜೀಜ್ 
ದೇಶ

ಭಾರತದ ಉಪದೇಶ ಬೇಕಿಲ್ಲ, ಪ್ರತ್ಯೇಕತಾವಾದಿಗಳೊಂದಿಗೆ ಮಾತುಕತೆ ನಡೆಸುತ್ತೇವೆ: ಪಾಕಿಸ್ತಾನ

ಸರ್ತಾಜ್ ಅಜೀಜ್ ಅವರು ಹುರಿಯತ್ ಪ್ರತ್ಯೇಕತಾವಾದಿಗಳನ್ನು ಭೇಟಿ ಮಾಡಬಾರದೆಂಬ ಭಾರತದ ಸೂಚನೆಗೆ ಪಾಕಿಸ್ತಾನ ಪ್ರತಿಕ್ರಿಯಿಸಿದ್ದು, ಭಾರತದ ಉಪದೇಶ ಕೇಳಲು ಸಿದ್ಧವಿಲ್ಲ ಎಂದು ತಿರುಗೇಟು ನೀಡಿದೆ.

ಇಸ್ಲಾಮಾಬಾದ್: ಪಾಕ್ ಭದ್ರತಾ ಸಲಹೆಗಾರ ಸರ್ತಾಜ್ ಅಜೀಜ್ ಅವರು ಹುರಿಯತ್ ಪ್ರತ್ಯೇಕತಾವಾದಿಗಳನ್ನು ಭೇಟಿ ಮಾಡಬಾರದೆಂಬ ಭಾರತದ ಸೂಚನೆಗೆ ಪಾಕಿಸ್ತಾನ ಪ್ರತಿಕ್ರಿಯಿಸಿದ್ದು, ಭಾರತದ ಉಪದೇಶ ಕೇಳಲು ಸಿದ್ಧವಿಲ್ಲ ಎಂದು ತಿರುಗೇಟು ನೀಡಿದೆ.
ಷರತ್ತು ಬದ್ಧ ಎನ್ಎಸ್ಎ ಸಭೆಗೆ ವಿರೋಧ ವ್ಯಕ್ತಪಡಿಸಿರುವ ಪಾಕಿಸ್ತಾನ, ತಾನು ಕಾಶ್ಮೀರಿ ಪ್ರತ್ಯೇಕತಾವಾದಿಗಳೊಂದಿಗೆ ಮಾತುಕತೆ ನಡೆಸುವುದಾಗಿ ಸ್ಪಷ್ಟಪಡಿಸಿದೆ. ಆದರೆ ಇದಕ್ಕೆ ವಿರೋಧ ವ್ಯಕ್ತಪಾಡಿಸಿರುವ ಭಾರತ ಸರ್ಕಾರ, ಪಾಕಿಸ್ತಾನದ ನಡೆಯಿಂದ ಸೌಹಾರ್ದಯುತ ದ್ವಿಪಕ್ಷೀಯ ಸಂಬಂಧ ಮುಂದುವರೆಯುವುದಿಲ್ಲ ಎಂದು ಎಚ್ಚರಿಕೆ ನೀಡಿದೆ.

ಆಗಸ್ಟ್ 23 ರಂದು ಸರ್ತಾಜ್ ಅಜೀಜ್ - ಅಜಿತ್ ದೋವಲ್ ಮಾತುಕತೆ ನಡೆಯಲಿದೆ, ಆದರೆ ತನ್ನ ಹಳೆ ಚಾಳಿಯನ್ನೇ ಮುಂದುವರೆಸಿರುವ ಪಾಕಿಸ್ತಾನ, ಸರ್ತಾಜ್ ಅಜೀಜ್ ಅವರನ್ನು ಭೇಟಿ ಮಾಡಲು ಕಾಶ್ಮೀರಿ ಪ್ರತ್ಯೇಕತಾವಾದಿಗಳಿಗೆ ಆಹ್ವಾನ ನೀಡಿತ್ತು. ಪಾಕಿಸ್ತಾನದ ತನ್ನ ಉದ್ಧಟತನ ಮುಂದುವರೆಸಿರುವ ಹಿನ್ನೆಲೆಯಲ್ಲಿ  ಭಾರತ ಸರ್ಕಾರ ಪ್ರತ್ಯೇಕತಾವಾದಿಗಳನ್ನು ಮತ್ತೊಮ್ಮೆ ಗೃಹಬಂಧನದಲ್ಲಿರಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

19 ವರ್ಷಗಳ ಹಳೆಯ ದಾಖಲೆ ಉಡೀಸ್: ಅಭಿಷೇಕ್, ಪಾಂಡೆ ಅಬ್ಬರ; ಜಿಂಬಾಬ್ವೆಗೆ 257 ರನ್‌ಗಳ ಬೃಹತ್ ಮೊತ್ತದ ಗುರಿ ನೀಡಿದ ಭಾರತ!

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

ಹೆಲಿಪ್ಯಾಡ್, ಸ್ವಿಮ್ಮಿಂಗ್ ಪೂಲ್, ಜಿಮ್: ಅನಿಲ್ ಅಂಬಾನಿಯ 3,716 ಕೋಟಿ ರೂ. ಬೆಲೆಬಾಳುವ 17 ಅಂತಸ್ತಿನ ಕಟ್ಟಡ 'Abode ಇಡಿ ವಶಕ್ಕೆ!

SCROLL FOR NEXT