ಕೇಂದ್ರ ಸಚಿವ ವೆಂಕಯ್ಯನಾಯ್ಡು (ಸಂಗ್ರಹ ಚಿತ್ರ) 
ದೇಶ

ದಾವೂದ್ ವಿರುದ್ಧ ದಾಖಲೆ ಪತ್ತೆ: ಭೂಗತ ಪಾತಕಿಯನ್ನು ಭಾರತಕ್ಕೆ ಒಪ್ಪಿಸಿ- ಕೇಂದ್ರ ಸರ್ಕಾರ

1993ರ ಮುಂಬೈ ಸರಣಿ ಸ್ಪೋಟದ ರುವಾರಿ ಹಾಗೂ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಪಾಕಿಸ್ತಾನದಲ್ಲೇ ಇರುವ ಬಗ್ಗೆ ಭಾರತೀಯ ಭದ್ರತಾ ಸಂಸ್ಥೆ ಮಾಹಿತಿ ಹೊಸ ಸಾಕ್ಷ್ಯಗಳನ್ನು ಕಲೆಹಾಕಿದ್ದು, ಪಾಕಿಸ್ತಾನ ಈಗಲಾದರೂ ದಾವೂದ್ ಇಬ್ರಾಹಿಂನನ್ನು ಭಾರತದ ವಶಕ್ಕೆ ಒಪ್ಪಿಸಬೇಕು...

ನವದೆಹಲಿ: 1993ರ ಮುಂಬೈ ಸರಣಿ ಸ್ಪೋಟದ ರುವಾರಿ ಹಾಗೂ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಪಾಕಿಸ್ತಾನದಲ್ಲೇ ಇರುವ ಬಗ್ಗೆ ಭಾರತೀಯ ಭದ್ರತಾ ಸಂಸ್ಥೆ ಮಾಹಿತಿ ಹೊಸ ಸಾಕ್ಷ್ಯಗಳನ್ನು ಕಲೆಹಾಕಿದ್ದು, ಪಾಕಿಸ್ತಾನ ಈಗಲಾದರೂ ದಾವೂದ್ ಇಬ್ರಾಹಿಂನನ್ನು ಭಾರತದ ವಶಕ್ಕೆ ಒಪ್ಪಿಸಬೇಕು ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಎಂ.ವೆಂಕಯ್ಯ ನಾಯ್ಡು ಶನಿವಾರ ಹೇಳಿದ್ದಾರೆ.

ದಾವೂದ್ ಇಬ್ರಾಹಿಂ ಪಾಕಿಸ್ತಾನದಲ್ಲಿಲ್ಲ ಎಂದು ಪಾಕಿಸ್ತಾನ ತನ್ನ ವಾದವನ್ನು ಮುಂದುವರೆಸಿಕೊಂಡು ಬಂದಿರುವ ಹಿನ್ನೆಲೆಯಲ್ಲೇ, ಭಾರತೀಯ ಭದ್ರತಾ ಸಂಸ್ಥೆ ದಾವೂದಾ ಪಾಕಿಸ್ತಾನದಲ್ಲೇ ಇದ್ದಾನೆ ಎಂಬುದನ್ನು ಸಾಬೀತು ಪಡಿಸಲು ಆತನ ಪಾಸ್ ಪೋರ್ಟ್ ಹಾಗೂ ಪತ್ನಿಯ ಫೋನ್ ಬಿಲ್ ನಲ್ಲಿ ಪಾಕಿಸ್ತಾನದ ಕರಾಚಿ ವಿಳಾಸವಿರುವ ದಾಖಲೆಯೊಂದನ್ನು ಬಹಿರಂಗ ಪಡಿಸಿದೆ.

ದಾವೂದ್ ದಾಖಲೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ವೆಂಕಯ್ಯನಾಯ್ಡು ಅವರು, ದಾವೂದ್ ಪಾಕ್ ನಲ್ಲಿ ಇಲ್ಲ ಎಂದು ಪಾಕಿಸ್ತಾನ ಹೇಳುತ್ತಲೇ ಬರುತ್ತಿದೆ. ಆದರೆ, ಇದೀಗ ಆತ ಪಾಕಿಸ್ತಾನದಲ್ಲೇ ಇರುವ ಕುರಿತಂತೆ ಭಾರತೀಯ ಅಧಿಕಾರಿಗಳು ಮಾಹಿತಿ ಕಲೆಹಾಕಿದ್ದು, ಪಾಕಿಸ್ತಾನ ಈ ಪುರಾವೆಗಳನ್ನು ಅಲ್ಲಗೆಳೆಯುವಂತಿಲ್ಲ. ಪಾಕಿಸ್ತಾನ ಈಗಾಗಲಾದರೂ ಅರ್ಥ ಮಾಡಿಕೊಂಡು ದಾವೂದ್ ನನ್ನು ಭಾರತದ ವಶಕ್ಕೆ ನೀಡಬೇಕೆಂದು ಹೇಳಿದ್ದಾರೆ.

ಶಿವಸೇನಾ ನಾಯಕ ಸಂಜಯ್ ರಾವತ್ ಮಾತನಾಡಿ, ದಾವೂದ್ ನ ಹೊಸ ಫೋಟೋಯಿಂದ ಏನೂ ಸಾಧ್ಯವಾಗಲ್ಲ. ಈ ಹಿಂದೆಯೂ ಪಾಕಿಸ್ತಾನ ದಾವೂದ್ ಪಾಕಿಸ್ತಾನದಲ್ಲೇ ಇರುವ ದಾಖಲೆಗಳನ್ನೂ ತಿರಸ್ಕರಿಸಿತ್ತು. ಎನ್ ಡಿಎ ಸರ್ಕಾರ ಇದೀಗ ಮತ್ತೆ ಪಾಕಿಸ್ತಾನದೊಂದಿಗೆ ಮಾತುಕತೆಗೆ ಮುಂದಾಗಿದೆ. ಎನ್ ಡಿಎ ಸರ್ಕಾರ  ಮತ್ತೆ ಹಿಂದೆ ಮಾಡಿದ ತಪ್ಪನ್ನೇ ಮತ್ತೆ ಮಾಡುತ್ತಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT