ಕಾಶ್ಮೀರದ ಪ್ರತ್ಯೇಕತಾವಾದಿ ನಾಯಕ ಶಬೀರ್‌ ಅಹ್ಮದ್‌ ಶಾ (ಸಂಗ್ರಹ ಚಿತ್ರ) 
ದೇಶ

ದೆಹಲಿಗೆ ತೆರಳಿದ್ದ ಪ್ರತ್ಯೇಕತಾವಾದಿ ಶಬೀರ್ ಅಹ್ಮದ್ ಶಾ ಬಂಧನ

ಉಭಯ ರಾಷ್ಟ್ರಗಳ ಭದ್ರತಾ ಸಲಹೆಗಾರರ (ಎನ್ಎಸ್ಎ) ಮಟ್ಟದ ಸಭೆ ಸಂಬಂಧ ಭಾರತ-ಪಾಕಿಸ್ತಾನ ನಡುವೆ ಇತ್ತ ವಾಕ್ಸಮರ ನಡೆಯುತ್ತಿದ್ದರೆ, ಅತ್ತ ಭಾರತದ ನಿಲುವನ್ನು ಕಡೆಗಣಿಸಿ ಸರ್ತಾಜ್ ಅಜೀಜ್ ಅವರನ್ನು ಭೇಟಿಯಾಗಲು ದೆಹಲಿಗೆ ತೆರಳಿದ್ದ ಕಾಶ್ಮೀರದ ಪ್ರತ್ಯೇಕತಾವಾದಿ ನಾಯಕ...

ನವದೆಹಲಿ: ಉಭಯ ರಾಷ್ಟ್ರಗಳ ಭದ್ರತಾ ಸಲಹೆಗಾರರ (ಎನ್ಎಸ್ಎ) ಮಟ್ಟದ ಸಭೆ ಸಂಬಂಧ ಭಾರತ-ಪಾಕಿಸ್ತಾನ ನಡುವೆ ಇತ್ತ ವಾಕ್ಸಮರ ನಡೆಯುತ್ತಿದ್ದರೆ, ಅತ್ತ ಭಾರತದ ನಿಲುವನ್ನು ಕಡೆಗಣಿಸಿ ಸರ್ತಾಜ್ ಅಜೀಜ್ ಅವರನ್ನು ಭೇಟಿಯಾಗಲು ದೆಹಲಿಗೆ ತೆರಳಿದ್ದ ಕಾಶ್ಮೀರದ ಪ್ರತ್ಯೇಕತಾವಾದಿ ನಾಯಕ ಶಬೀರ್‌ ಅಹ್ಮದ್‌ ಶಾ ಅವರನ್ನು ಅಧಿಕಾರಿಗಳು ಶನಿವಾರ ಬಂಧನಕ್ಕೊಳಪಡಿಸಿದ್ದಾರೆ ಎಂದು ತಿಳಿದುಬಂದಿದೆ.

ಎನ್ಎಸ್ಎ ಸಂಬಂಧ ಸಾಕಷ್ಟು ಗೊಂದಲಗಳಿವೆ. ಆದರೂ, ನಾನು ದೆಹಲಿಗೆ ತೆರಳುತ್ತಿದ್ದೇನೆ. ದೆಹಲಿಗೆ ತೆರಳುತ್ತಿದ್ದಂತೆ ಪಾಕಿಸ್ತಾನದ ಪ್ರಧಾನಿ ಅವರ ರಾಷ್ಟ್ರೀಯ ಭದ್ರತೆ ಹಾಗೂ ವಿದೇಶಾಂಗ ನೀತಿ ಸಲಹೆಗಾರ ಸರ್ತಾಜ್ ಅಜೀಜ್ ಅವರನ್ನು ಭೇಟಿ ಮಾಡುತ್ತೇನೆಂದು ಹೇಳಿದ್ದ ಶಬೀರ್ ಅಹ್ಮದ್ ಶಾ ಇಂದು ಬೆಳಿಗ್ಗೆ ದೆಹಲಿಗೆ ತೆರಳಿದ್ದರು.

ಶಬೀರ್ ಅಹ್ಮದ್ ಶಾ ದೆಹಲಿ ವಿಮಾನ ನಿಲ್ದಾಣಕ್ಕೆ ತಲುಪುತ್ತಿದ್ದಂತೆಯೇ ಅವರನ್ನು ತಡೆಹಿಡಿದ ಅಧಿಕಾರಿಗಳು ಶಬೀರ್ ಅವರನ್ನು ಬಂಧನಕ್ಕೊಳಪಡಿಸಿದ್ದು, ಬಹಿರಂಗ ಪಡಿಸದ ಸ್ಥಳವೊಂದರಲ್ಲಿ ಇರಿಸಿದ್ದಾರೆಂದು ತಿಳಿದುಬಂದಿದೆ.

ಆಗಸ್ಚ್ 23-24ರಂದು ಹೊಸದಿಲ್ಲಿಯಲ್ಲಿ ನಡೆಯಲಿರುವ ಸಭೆಗೂ ಮುನ್ನ ಕಾಶ್ಮೀರದ ಪ್ರತ್ಯೇಕತಾವಾದಿಗಳ ಜತೆ ಮಾತನಾಡಲು ಪಾಕಿಸ್ತಾನ ಇದೀಗ ಮುಂದಾಗಿದ್ದು, ಇದನ್ನು ಶತಯಾಗತಾಯವಾಗಿ ಭಾರತ ವಿರೋಧಿಸಿದೆ. ಇತ್ತೀಚೆಗಷ್ಟೇ ರಷ್ಯಾದ ಯುಫಾದಲ್ಲಿ ನಡೆದ ಶೃಂಗಸಭೆಯ ನೇಪಥ್ಯದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಪಾಕಿಸ್ತಾನ ಪ್ರಧಾನಿ ನವಾಜ್ ಷರೀಷ್ ಅವರು ಚರ್ಚಿಸಿದಂತೆ ಭಯೋತ್ಪಾದನೆಯ ಸಭೆಯ ಪ್ರಮುಖ ವಿಷಯವಾಗಬೇಕು. ಯಾವುದೇ ಕಾರಣಕ್ಕೂ ಪಾಕ್ ನ ಎನ್ ಎಸ್ ಎ ಹುರಿಯತ್ ನಾಯಕರ ಜತೆ ಮಾತುಕತೆ ನಡೆಸಬಾರದೆಂದು ಪಾಕಿಸ್ತಾನಕ್ಕೆ ಭಾರತ ಎಚ್ಚರಿಕೆ ನೀಡಿತ್ತು.

ಇದರ ಹಿನ್ನೆಲೆಯಲ್ಲಿ ಷರೀಷ್ ನೇತೃತ್ವದಲ್ಲಿ ಶುಕ್ರವಾರ ಉನ್ನತ ಅಧಿಕಾರಿಗಳ ಸಭೆ ನಡೆದಿತ್ತು. ಸಭೆಯಲ್ಲಿ ಭಾರತದ ಷರತ್ತುಗಳನ್ನು ತಿರಸ್ಕರಿಸಲು ಪಾಕಿಸ್ತಾನ ನಿರ್ಣಯ ಕೈಗೊಳ್ಳಲಾಗಿದೆ. ಪಾಕಿಸ್ತಾನದ ಅಧಿಕಾರಿಗಳು ಭಾರತಕ್ಕೆ ಭೇಟಿ ನೀಡಿದಾಗ ಪ್ರತ್ಯೇಕತಾವಾದಿಗಳ ಜೊತೆ ಮಾತನಾಡುವುದು ಸಂಪ್ರದಾಯವಾಗಿದ್ದು, ಭಾರತ ಉಪದೇಶಕ್ಕೆ ಮಣಿದು ಇದನ್ನು ಮುರಿಯಲು ಸಾಧ್ಯವಿಲ್ಲ. ಒಂದು ವೇಳೆ ಹುರಿಯತ್ ನಾಯಕರ ಜತೆ ಭೇಟಿ ಬೇಡ ಎಂದು ಭಾರತ ತನ್ನ ಪಟ್ಟನ್ನು ಮುಂದುವರಿಸಿದರೆ, ಎನ್ಎಸ್ಎ ಸಭೆಯನ್ನೇ ರದ್ದು ಮಾಡುವುದಾಕಿ ಪಾಕ್ ತೀರ್ಮಾನ ಕೈಗೊಂಡಿದೆ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

"ಭಾರತೀಯರು ಬಗ್ಗದೇ ಹೋದರೆ...." ಹತಾಶಗೊಂಡ ಟ್ರಂಪ್ ಸಲಹೆಗಾರನಿಂದ ನೇರಾ ನೇರಾ ಬೆದರಿಕೆ!

SCO summit: ಟ್ರಂಪ್ ಗೆ ಸೆಡ್ಡು, ಚೀನಾ, ರಷ್ಯಾ ಅಧ್ಯಕ್ಷರೊಂದಿಗೆ ದ್ವಿಪಕ್ಷೀಯ ಸಭೆಗೆ ಪ್ರಧಾನಿ ಮೋದಿ ಸಜ್ಜು; ದಿಗ್ಗಜರ ಸಮಾಗಮದ ಮೇಲೆ ಜಗತ್ತಿನ ಕಣ್ಣು!

ಧರ್ಮಸ್ಥಳ ಪ್ರಕರಣ: ಹೊಸ ದೂರು ದಾಖಲು, ದೂರುದಾರನ ಮಂಪರು ಪರೀಕ್ಷೆಗೆ ಸೌಜನ್ಯ ತಾಯಿ ಒತ್ತಾಯ!

ಮಂಗಳೂರು: KSRTC ಬಸ್ ಬ್ರೇಕ್ ಫೇಲ್; ಭೀಕರ ಅಪಘಾತದಲ್ಲಿ ಮಗು ಸೇರಿ ಆರು ಸಾವು; Video

$34.2 Trillion GDP: 2038ರ ವೇಳೆಗೆ ಅಮೆರಿಕ ಹಿಂದಿಕ್ಕಿ, ಭಾರತ 2ನೇ ಅತಿದೊಡ್ಡ ಆರ್ಥಿಕತೆ- EY ವರದಿ

SCROLL FOR NEXT