ಕಾಂಗ್ರೆಸ್ ವಕ್ತಾರ ಅಭಿಷೇಕ್ ಮನು ಸಿಂಘ್ವಿ 
ದೇಶ

ಪಾಕಿಸ್ತಾನ ರಚಿಸಿದ್ದ ವ್ಯೂಹಕ್ಕೆ ಭಾರತ ಬಲಿಯಾಗಿದೆ: ಕಾಂಗ್ರೆಸ್

ಈಗ ಕಾಂಗ್ರೆಸ್ ಸಹ ಭಾರತ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಮಾತುಕತೆ ಸಂಬಂಧ ಪಾಕಿಸ್ತಾನ ರಚಿಸಿದ್ದ ವ್ಯೂಹಕ್ಕೆ ಭಾರತ ಬಲಿಯಾಗಿದೆ ಎಂದು ಟೀಕಿಸಿದೆ.

ನವದೆಹಲಿ: ಎನ್ಎಸ್ಎ ಮಾತುಕತೆ ರದ್ದುಗೊಂಡಿರುವುದಕ್ಕೆ ಪ್ರತ್ಯೇಕತಾವಾದಿಗಳು ಮಾತ್ರ ಭಾರತ ಸರ್ಕಾರದ ವಿರುದ್ಧ ಆರೋಪ ಹೊರಿಸುತ್ತಿಲ್ಲ. ಈಗ ಕಾಂಗ್ರೆಸ್ ಸಹ ಭಾರತ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಮಾತುಕತೆ ಸಂಬಂಧ ಪಾಕಿಸ್ತಾನ ರಚಿಸಿದ್ದ ವ್ಯೂಹಕ್ಕೆ ಭಾರತ ಬಲಿಯಾಗಿದೆ ಎಂದು ಟೀಕಿಸಿದೆ.

ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಎನ್ಎಸ್ಎ ಮಾತುಕತೆ ನಿಗದಿಗೂ ಮುನ್ನ ಸರಿಯಾದ ತಯಾರಿ ನಡೆಸಿರಲಿಲ್ಲ, ಮಾತುಕತೆ ವೇಳೆ ಚರ್ಚೆಯಾಗಬೇಕಿದ್ದ ವಿಷಯಗಳ ಬಗ್ಗೆ ಕೇಂದ್ರ ಸರ್ಕಾರ ಗಮನವನ್ನು ಕೇಂದ್ರೀಕರಿಸಲಿಲ್ಲ ಎಂದು ಕಾಂಗ್ರೆಸ್ ವಕ್ತಾರ ಅಭಿಷೇಕ್ ಮನು ಸಿಂಘ್ವಿ ಆರೋಪಿಸಿದ್ದಾರೆ.
ಭಯೋತ್ಪಾದನೆ ವಿಷಯವನ್ನು ಚರ್ಚಿಸುವುದರಿಂಡ ಪಲಾಯನ ಮಾಡುವುದಕ್ಕೆ ಈಗ ಭಾರತ ಸರ್ಕಾರವೇ ಪಾಕಿಸ್ತಾನಕ್ಕೆ ಅವಕಾಶ ಮಾಡಿಕೊಟ್ಟಂತಾಗಿದೆ. ಎನ್ಎಸ್ಎ ಸಭೆಗೂ ಮುನ್ನ ಮೋದಿ ಸರ್ಕಾರ ಸರಿಯಾದ ತಯಾರಿ ನಡೆಸದೆ ಇರುವುದು ದುರದೃಷ್ಟಕರ ಎಂದು ಸಿಂಘ್ವಿ ಹೇಳಿದ್ದಾರೆ. ಪಾಕಿಸ್ತಾನ ತನ್ನ ಸಂಚಿನಲ್ಲಿ ಯಶಸ್ವಿಯಾಗದಂತೆ ಭಾರತ ಪೂರ್ವ ತಯಾರಿ ನಡೆಸಿಕೊಳ್ಳಬೇಕಿತ್ತು, ಪಾಕಿಸ್ತಾನ- ಭಾರತದ ಎನ್ಎಸ್ಎ ಸಭೆ ರದ್ದುಗೊಂಡಿದ್ದು ಭಾರತೀಯ ವಿದೇಶಾಂಗ ನೀತಿಯ ದೃಷ್ಟಿಯಿಂದ ಉತ್ತಮ ಬೆಳವಣಿಗೆಯಲ್ಲ ಎಂದು ಸಿಂಘ್ವಿ ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

SCROLL FOR NEXT