ಮೃಣಾಲಿನಿ ಸಿಂಗ್ 
ದೇಶ

ಒಆರ್ ಒಪಿ ಪ್ರತಿಭಟನೆಯಲ್ಲಿ ಕೇಂದ್ರ ಸಚಿವ ವಿಕೆ ಸಿಂಗ್ ಪುತ್ರಿ ಭಾಗಿ

ಒನ್ ರ್ಯಾಂಕ್ ಒನ್ ಪೆನ್ಷನ್ ಯೋಜನೆಯನ್ನು ಶೀಘ್ಪವೇ ಅನುಷ್ಠಾನಗೊಳಿಸಬೇಕೆಂದು ಒತ್ತಾಯಿಸಿ ರಕ್ಷಣಾ ಇಲಾಖೆಯ ನಿವೃತ್ತ ಸಿಬ್ಬಂದಿ ...

ನವದೆಹಲಿ: ಒನ್ ರ್ಯಾಂಕ್ ಒನ್ ಪೆನ್ಷನ್ ಯೋಜನೆಯನ್ನು ಶೀಘ್ಪವೇ ಅನುಷ್ಠಾನಗೊಳಿಸಬೇಕೆಂದು ಒತ್ತಾಯಿಸಿ ರಕ್ಷಣಾ ಇಲಾಖೆಯ ನಿವೃತ್ತ ಸಿಬ್ಬಂದಿ ನಡೆಸುತ್ತಿರುವ ಪ್ರತಿಭಟನೆಗೆ ಕೇಂದ್ರ ಸಚಿವ ಹಾಗೂ ರಕ್ಷಣಾ ಇಲಾಖೆ ಮಾಜಿ ಮುಖ್ಯಸ್ಥ ವಿ.ಕೆ ಸಿಂಗ್ ಪುತ್ರಿ ಮೃಣಾಲಿನಿ ಸಿಂಗ್ ಸಾಥ್ ನೀಡಿದ್ದಾರೆ.

ಜೂನ್ 12 ರಿಂದ ದೆಹಲಿಯಿ ಜಂಥರ್ ಮಂಥರ್ ನಲ್ಲಿ ನಿವೃತ್ತ ರಕ್ಷಣಾ ಸಿಬ್ಬಂದಿ ಹಾಗೂ ಮೃತ ಸಿಬ್ಬಂದಿಯ ವಿಧವಾ ಪತ್ನಿಯರು ಒನ್ ರ್ಯಾಂಕ್ ಒನ್ ಪೆನ್ಷನ್ ಯೋಜನೆ ಅನುಷ್ಠಾನ ಮಾಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿವೆ. ಸುಮಾರು ಸುಮಾರು 2.5 ಮಿಲಿಯನ್ ನಿವೃತ್ತ ಸಿಬ್ಬಂದಿ ಈ ಸೌಲಭ್ಯಕ್ಕಾಗಿ ನಡೆಸುತ್ತಿರುವ ಪ್ರತಿಭಟನೆಯಲ್ಲಿ ಭಾಗವಹಿಸಿರುವ ವಿಕೆ ಸಿಂಗ್ ಪುತ್ರಿ ಮೃಣಾಲಿನಿ ಸಿಂಗ್, ನಿವೃತ್ತಯೋಧರು ನಡೆಸುತ್ತಿರುವ ಪ್ರತಿಭಟನೆಗೆ ನನ್ನ ಬೆಂಬಲವಿದೆ. ಹೀಗಾಗಿ ನಾನು ಪ್ರತಿಭಟನೆಯಲ್ಲಿ ಭಾಗವಹಿಸಿದ್ದೇನೆ. ಒಂದುವೇಳೆ ಈ ಪ್ರತಿಭಟನಾಕಾರರು ಉಪವಾಸ ಸತ್ಯಾಗ್ರಹ ಆರಂಭಿಸಿದರೇ ತಾವು ಕೂಡ ಉಪವಾಸ ಮಾಡುವುದಾಗಿ ಅವರು ತಿಳಿಸಿದ್ದಾರೆ.

ನನ್ನ ತಾತ ಕೂಡ ಒಬ್ಬ ಸೈನಿಕರಾಗಿದ್ದರು. ನಾನು ಯೋಧ ಕುಟುಂಬದಿಂದ ಬಂದವಳು. ನನ್ನ ಮಗ ಕೂಡ ಈ ದೇಶದ ಒಬ್ಬ ಸೈನಿಕನಾಗುತ್ತಾನೆ ಎಂದು ಹೇಳಿರುವ ಮೃಣಾಲಿನಿ ಸಿಂಗ್ ಶೀಘ್ರವೇ ಒನ್ ರ್ಯಾಂಕ್ ಒನ್ ಪೆನ್ಷನ್ ಯೋಜನೆಯನ್ನು ಅನುಷ್ಠಾನಗೊಳಿಸುವಂತೆ ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT