ಗುರುದ್ವಾರ(ಸಂಗ್ರಹ ಚಿತ್ರ 
ದೇಶ

ಗುರುದ್ವಾರಕ್ಕೆ ಶೂ ಧರಿಸಿ ಪ್ರವೇಶಿಸಿದ ಎಸ್ಐಗೆ ಅಮಾನತು ಶಿಕ್ಷೆ

ಸಿಖ್ ಸಮುದಾಯದ ಧಾರ್ಮಿಕ ಕೇಂದ್ರ ಗುರುದ್ವಾರಕ್ಕೆ ಶೂ ಧರಿಸಿ, ಶಸ್ತ್ರಾಸ್ತ್ರಗಳೊಂದಿಗೆ ಪ್ರವೇಶಿಸಿದ ಗುವಾಹಟಿ ಸಬ್ ಇನ್ಸ್ ಪೆಕ್ಟರ್ (ಎಸ್ಐ) ನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿದೆ.

ಗುವಾಹಟಿ: ಸಿಖ್ ಸಮುದಾಯದ ಧಾರ್ಮಿಕ ಕೇಂದ್ರ ಗುರುದ್ವಾರಕ್ಕೆ ಶೂ ಧರಿಸಿ, ಶಸ್ತ್ರಾಸ್ತ್ರಗಳೊಂದಿಗೆ ಪ್ರವೇಶಿಸಿದ ಗುವಾಹಟಿ ಸಬ್ ಇನ್ಸ್ ಪೆಕ್ಟರ್ (ಎಸ್ಐ) ನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿದೆ.

ಅಸ್ಸಾಮಿ ಟಿವಿ ಚಾನೆಲ್ ವೊಂದು ಗುರುದ್ವಾರದ ಸಮಿತಿ ಸದಸ್ಯ ಗುರುಪ್ರೀತ್ ಸಿಂಗ್ ಉಪ್ಪಲ್ ಹಾಗೂ ಆಮ್ ಆದ್ಮಿ ಪಕ್ಷದ ಮುಖಂಡನ ವಿರುದ್ಧ ನೀಡಿದ್ದ ದೂರಿನ ಹಿನ್ನೆಲೆಯಲ್ಲಿ, ಗುರುಪ್ರೀತ್ ಸಿಂಗ್ ಉಪ್ಪಲ್ ನ ಶೋಧಕ್ಕಾಗಿ ಸಬ್ ಇನ್ಸ್ ಪೆಕ್ಟರ್ ಧನ್ಮೋನಿ ತಿಮಂಗ್ ಹಾಗೂ ಇನ್ನು ಮೂವರು ಪೊಲೀಸ್ ಪೇದೆಗಳು ಗುರುದ್ವಾರ ಸಿಂಗ್ ಸಭಾಗೆ ತೆರಳಿದ್ದಾರೆ. ಈ ವೇಳೆ ಶೂ ಧರಿಸಿ ಒಳಗೆ ಪ್ರವೇಶಿಸಿದರ ಕಾರಣ ಎಸ್ಐ ನನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿದೆ.

ಗುರುದ್ವಾರಕ್ಕೆ ಶೂ ಧರಿಸಿ ಪ್ರವೇಶಿಸಿದ ಘಟನೆ ಬಗ್ಗೆ ಅಸ್ಸಾಂ ಮುಖ್ಯಮಂತ್ರಿ ತರುಣ್ ಗೊಗೋಯಿ ತನಿಖೆಗೆ ಆದೇಶಿಸಿದ್ದಾರೆ. ಪೊಲೀಸ್ ಜಂಟಿ ಆಯುಕ್ತ ಎನ್ಎಂಎಎಸ್ಎಫ್ ಹಕ್ ನೇತೃತ್ವದಲ್ಲಿ ತನಿಖೆ ನಡೆಯುತ್ತಿದ್ದು, ಏಳು ದಿನಗಳಲ್ಲಿ ಈ ಬಗ್ಗೆ ವರದಿ ನೀಡಬೇಕೆಂದು ಸರ್ಕಾರ ಅದೇಶಿಸಿದೆ.
ಧಾರ್ಮಿಕ ಕ್ಷೇತ್ರಗಳ ಪಾವಿತ್ರ್ಯತೆ ಕಾಪಾಡುವುದು ಅತ್ಯಂತ ಮುಖ್ಯವಾಗಿದೆ. ಧಾರ್ಮಿಕ ಪಾವಿತ್ರ್ಯತೆಯನ್ನು ಕಾಪಾಡಲು ಸರ್ಕಾರ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತದೆ ಎಂದು ಗೊಗೋಯಿ ಹೇಳಿಕೆ ನೀಡಿದ್ದಾರೆ. ಗುರುದ್ವಾರದ ಸಮಿತಿ ಸದಸ್ಯ, ಗುರುಪ್ರೀತ್ ಸಿಂಗ್ ಉಪ್ಪಲ್ ಅಸ್ಸಾಮಿ ಟಿವಿ ಚಾನೆಲ್ ನ ಎಂಡಿ ಮಗಳ ಫೋಟೊವನ್ನು ಫೇಸ್ ಬುಕ್ ನಲ್ಲಿ ಹಾಕಿ, ಸರಿಯಾದ ಬಟ್ಟೆ ಧರಿಸುವಂತೆ ಎಂಡಿ ಮಗಳಿಗೆ ಬುದ್ಧಿ ಹೇಳಿ ಎಂದು ಟಿವಿ ಚಾನೆಲ್ ಗೆ ಸಲಹೆ ನೀಡಿದ್ದ. ಇದರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT