ಒಆರ್ ಒಪಿ ಪ್ರತಿಭಟನೆ ನಿವೃತ್ತ ಯೋಧರು(ಸಂಗ್ರಹ ಚಿತ್ರ) 
ದೇಶ

ಒಆರ್ ಒಪಿ ಪ್ರತಿಭಟನೆ: ಆಮರಣಾಂತ ಉಪವಾಸ ನಿರತ ನಿವೃತ್ತ ಯೋಧ ಅಸ್ವಸ್ಥ

ಒನ್ ರ್ಯಾಂಕ್ ಒನ್ ಪೆನ್ಷನ್ ಜಾರಿಗೆ ಆಗ್ರಹಿಸಿ ಆಮರಣಾಂತ ಉಪವಾಸ ನಡೆಸುತ್ತಿರುವ ನಿವೃತ್ತ ಯೋಧ ಕರ್ನಲ್ ಪುಷ್ಪೇಂದರ್ ಸಿಂಗ್ ಅಸ್ವಸ್ಥಗೊಂಡಿದ್ದಾರೆ.

ನವದೆಹಲಿ: ಒನ್ ರ್ಯಾಂಕ್ ಒನ್ ಪೆನ್ಷನ್(ಒಆರ್ ಒಪಿ) ಜಾರಿಗೆ ಆಗ್ರಹಿಸಿ ಆಮರಣಾಂತ ಉಪವಾಸ ನಡೆಸುತ್ತಿರುವ ನಿವೃತ್ತ ಯೋಧ ಕರ್ನಲ್ ಪುಷ್ಪೇಂದರ್ ಸಿಂಗ್ ಅಸ್ವಸ್ಥಗೊಂಡಿದ್ದಾರೆ. ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸತತ ಎಂಟನೇ ದಿನ ಉಪವಾಸ ಪ್ರತಿಭಟನೆ ನಡೆಸಿದ್ದ ಪುಷ್ಪೇಂದರ್ ಸಿಂಗ್ ಅವರ ಆರೋಗ್ಯ ತೀವ್ರ ಹದಗೆಟ್ಟಿತ್ತು. ಅಸ್ವಸ್ಥಗೊಂದ ಮಾಜಿ ಯೋಧರನ್ನು ದಕ್ಷಿಣ ದೆಹಲಿಯ ರಾಕ್ ಲ್ಯಾಂಡ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪ್ರತಿಭಟನಾ ನಿರತ  ಮಾಜಿ ಸೈನಿಕರ ಸಂಘದ ವಕ್ತಾರ ಅನಿಲ್ ಕೌಲ್ ತಿಳಿಸಿದ್ದಾರೆ.

ಆಮರಣಾಂತ ಉಪವಾಸ ಪ್ರತಿಭಟನೆಯಲ್ಲಿ ನೇತೃತ್ವ ವಹಿಸಿದ್ದ ಪುಷ್ಪೇಂದರ್ ಅವರ ಆರೋಗ್ಯ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಈಗ ನಿವೃತ್ತ ಯೋಧ ಹವಾಲ್ದಾರ್ ತೇಜ್ ನೇತೃತ್ವ ವಹಿಸಿದ್ದಾರೆ. ಆಮರಣಾಂತ ಉಪವಾಸ ಪ್ರತಿಭಟನೆಯಲ್ಲಿ  ಪಾಲ್ಗೊಂಡಿರುವ ಮೇಜರ್ ಸಿಂಗ್ ಮತ್ತು ಅಶೋಕ್ ಕುಮಾರ್ ಚೌಹಾಣ್ ಆರೋಗ್ಯದ ಬಗ್ಗೆ ಆತಂಕ ಇಲ್ಲ ಎಂದು ಅನಿಲ್ ಕೌಲ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT