ಲಾಲೂ ಪ್ರಸಾದ್ ಯಾದವ್ 
ದೇಶ

ಭಾರತದ ಬಳಿ 'ಲಾಲೂಬಾಂಬ್' ಇದೆ-ಲಾಲೂ ಪ್ರಸಾದ್ ಹಾಸ್ಯ

ಕಳೆದ ವಾರವಷ್ಟೇ ಪ್ರಧಾನಿ ಮೋದಿ ಅವರ ಬಗ್ಗೆ ಹಾಸ್ಯ ಮಾಡಿದ್ದ ಆರ್ ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ತನ್ನ ಬಳಿ ಪರಮಾಣು ಬಾಂಬ್ ಇದೆ ಎಂದು.....

ಪಾಟ್ನಾ: ಕಳೆದ ವಾರವಷ್ಟೇ ಪ್ರಧಾನಿ ಮೋದಿ ಅವರ ಬಗ್ಗೆ ಹಾಸ್ಯ ಮಾಡಿದ್ದ ಆರ್ ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್  ತನ್ನ ಬಳಿ ಪರಮಾಣು ಬಾಂಬ್ ಇದೆ ಎಂದು ಭಾರತಕ್ಕೆ ಪಾಕಿಸ್ತಾನ  ಬೆದರಿಕೆ ಒಡ್ಡಿರುವುದಕ್ಕೆ ಎಂದಿನಂತೆ ಹಾಸ್ಯಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ.

'ಪಾಕಿಸ್ತಾನದ ಬಳಿ ಪರಮಾಣುವಿದ್ದರೇನು? ಭಾರತದ ಬಳಿ ಲಾಲು ಬಾಂಬ್ ಇದೆ' ಎಂದಿದ್ದಾರೆ.ಪಾಕಿಸ್ತಾನದ  ರಾಷ್ಟ್ರೀಯ ಭದ್ರತಾ ಸಲಹಾಗಾರ ಸತ್ರಾಜ್  ಅಜೀಜ್ ನಮ್ಮದು ಪರಮಾಣು ಹೊಂದಿರುವ ರಾಷ್ಟ್ರ ಎಂದು ಹೇಳುವ ಮೂಲಕ ಭಾರತಕ್ಕೆ ಒಡ್ಡಿರುವ ಬೆದರಿಕೆಯ ಕುರಿತು ಲಾಲು ಪ್ರಸಾದ್ ಯಾದವ್ ಬಳಿ ಪ್ರತಿಕ್ರಿಯೆ ಕೇಳಿದಾಗ, "ಒಂದೊಮ್ಮೆ ತಾವು ಭಾರತದ ಪ್ರಧಾನಿಯಾದರೆ ಪಾಕ್ ಲಾಲು ಬಾಂಬ್‌ನ್ನು ಎದುರಿಸಬೇಕಾಗುತ್ತದೆ", ಎಂದು ತಾವು ಪಾಕ್‌ಗೆ ಸಮರ್ಥ ಉತ್ತರ ನೀಡಲು ಸಮರ್ಥರು ಎಂದು ಪರೋಕ್ಷವಾಗಿ ಹೇಳಿದ್ದಾರೆ.
 
ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಸಮರ್ಥ ಆಡಳಿತ ನೀಡುವಲ್ಲಿ ವಿಫಲವಾಗಿದೆ. ಇದು ಉದ್ಯಮಿಗಳ ಸರ್ಕಾರ, ದೇಶವನ್ನು ರಕ್ಷಿಸಲು ಇವರಿಂದ ಸಾಧ್ಯವಿಲ್ಲ ಎಂದು ಅವರು ವ್ಯಂಗ್ಯವಾಡಿದ್ದಾರೆ.
 
ಕಾಶ್ಮೀರ ಪ್ರತ್ಯೇಕತಾವಾದಿಗಳ ಜೊತೆಗಿನ ಮಾತುಕತೆ ಹಾಗೂ ಕಾಶ್ಮೀರ ವಿಷಯ ಬಿಟ್ಟು ಮಾತುಕತೆಗೆ ಬನ್ನಿ ಎಂದು ಪಾಕ್‌ಗೆ ಭಾರತ ಷರತ್ತು ವಿಧಿಸಿದ ಹಿನ್ನೆಲೆಯಲ್ಲಿ ಪಾಕ್ ಭಾರತದೊಂದಿಗಿನ ಮಾತುಕತೆಯನ್ನು ರದ್ದುಪಡಿಸಿತ್ತು. ಕಾಶ್ಮೀರ ಪ್ರತ್ಯೇಕತಾವಾದಿಗಳನ್ನು ಪಾಕ್‌  ಮಾತುಕತೆಗೆ ಆಹ್ವಾನಿಸಿದ್ದು, ಉಭಯ ದೇಶಗಳ ಮಧ್ಯದ ಮಾತುಕತೆ ರದ್ದಾಗಲು ಕಾರಣವಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಇನ್ನೂ ನನಸಾಗಿಲ್ಲ ದಶಕಗಳ ಕನಸು: ಹಾಸನ ವಿಮಾನ ನಿಲ್ದಾಣಕ್ಕೆ ಸಿಗದ ರೆಕ್ಕೆ, ಯೋಜನೆಗೆ ಅಡ್ಡಿಯಾಗಿದೆ ಸಂಪನ್ಮೂಲ-ರಾಜಕೀಯ ಇಚ್ಛಾಶಕ್ತಿ ಕೊರತೆ..!

SCROLL FOR NEXT