ದಾವೂದ್ ಇಬ್ರಾಹಿಂ 
ದೇಶ

ಮುಂಬಯಿ ಪೊಲೀಸ್ ಇನ್ಸ್ ಪೆಕ್ಟರ್ ಗೆ ದಾವೂದ್ ಇಬ್ರಾಹಿಂ ಜೊತೆ ನಂಟು!

ಭೂಗತ ಪಾತಕಿ ದಾವೂದ್ ಇಬ್ರಾಹಿಂ ಪಾಕಿಸ್ತಾನದಲ್ಲೇ ಇದ್ದಾನೆ ಎಂಬುದರ ಬಗ್ಗೆ ಭಾರತ ಸರ್ಕಾರ ಸಾಕ್ಷ್ಯಾಧಾರಗಳನ್ನು ಒದಗಿಸುತ್ತಿರುವ ಬೆನ್ನಲ್ಲೇ ಮತ್ತೊಂದು ...

ದೆಹಲಿ: ಭೂಗತ ಪಾತಕಿ ದಾವೂದ್ ಇಬ್ರಾಹಿಂ ಪಾಕಿಸ್ತಾನದಲ್ಲೇ ಇದ್ದಾನೆ ಎಂಬುದರ ಬಗ್ಗೆ ಭಾರತ ಸರ್ಕಾರ ಸಾಕ್ಷ್ಯಾಧಾರಗಳನ್ನು ಒದಗಿಸುತ್ತಿರುವ ಬೆನ್ನಲ್ಲೇ ಮತ್ತೊಂದು ಆಘಾತಕಾರಿ ಮಾಹಿತಿ ಬಯಲಾಗಿದೆ.

ಮುಂಬಯಿನ ಪೊಲೀಸ್ ಇನ್ಸ್ ಪೆಕ್ಟರ್ ಒಬ್ಬರು ದಾವೂದ್ ಇಬ್ರಾಹಿಂ ಹಾಗೂ ಆತನ ಸಹಚರರ ಜೊತೆ ನಂಟು ಹೊಂದಿದ್ದಾರೆ ಎಂಬ ಅಂಶ ಬೆಳಕಿಗೆ ಬಂದಿದೆ. ಈ ಸಂಬಂಧ ಆಂಗ್ಲ ಪತ್ರಿಕೆಯೊಂದು ವರದಿ ಮಾಡಿದೆ. ನವದೆಹಲಿಯಲ್ಲಿರುವ ಅಮೆರಿಕಾ ರಾಯಭಾರ ಕಚೇರಿ, 2005j ಆಗಸ್ಟ್ 8 ರಂದು ವಾಷಿಂಗ್ಟನ್ ಗೆ ಟೆಲಿಗ್ರಾಮ್ ಮೂಲಕ ಸಂದೇಶ ರವಾನಿಸಿದೆ. ಇನ್ನೂ ಟೆಲಿಗ್ರಾಮ್ ನಲ್ಲಿ ಬಂಧಿತ ವಿಕಿ ಮಲ್ಹೋತ್ರಾ ಮತ್ತು ಫಾರಿದ್ ತನಾಶಾ ಬಗ್ಗೆಯೂ ಕೂಡ ತಿಳಿಸಿದೆ.

ಇನ್ನು ಮಾಹಿತಿ ಬಹಿರಂಗವಾಗುತ್ತಿದ್ದಂತೆ ಮುಂಬಯಿ ಪೊಲೀಸ್ ಆಯುಕ್ತ ಎ ಎನ್ ರಾಯ್ ದಾವೂದ್ ಇಬ್ರಾಹಿಂ ಜೊತೆ ಸಂಪರ್ಕ ಹೊಂದಿದ್ದಾರೆಂಬ ಆರೋಪ ಎದುರಿಸುತ್ತಿರುವ ಪೊಲೀಸ್ ಇನ್ಸ್ ಪೆಕ್ಟರ್ ಅಸ್ಲಂ ಮೊಮಿನ್ ಅವರನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಅಸ್ಲಂ ಮೊಮಿನ್ ದಾವೂದ್ ಜೊತೆ ನಂಟು ಹೊಂದಿರುವ ಸಂಬಂಧ ಗುಪ್ತಚರ ಇಲಾಖೆ ಸೂಕ್ತ ಸಾಕ್ಷ್ಯಾಧಾರಗಳನ್ನು ತನ್ನ ವರದಿಯಲ್ಲಿ ನೀಡಿದೆ.

ಈ ಮಾಹಿತಿ ಛೋಟಾ ರಾಜನ್ ಸಹಚರರನ್ನು ಬಂಧಿಸಿದ ಕೆಲವು ದಿನಗಳ ನಂತರ ಬಹಿರಂಗವಾಗಿದ್ದು, ಪೊಲೀಸ್ ಇನ್ಸ್ ಪೆಕ್ಟರ್ ಅಸ್ಲಂ ಮೊಮಿನ್ ದೂರವಾಣಿ ಕರೆಗಳ ವಿವರಗಳು ಬಹಿರಂಗವಾಗಿದ್ದು ಆತನಿಗೆ ದಾವೂದ್ ಇಬ್ರಾಹಿಂ ಜೊತೆ ನಂಟಿ ಇರುವ ಬಗ್ಗೆ ಸಾಕ್ಷ್ಯ ಒದಗಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?