ಸಂಜಯ್ ದತ್ ಹಾಗೂ ಪ್ರಿಯಾ ದತ್ (ಸಂಗ್ರಹ ಚಿತ್ರ) 
ದೇಶ

ಮತ್ತೆ 30 ದಿನ ಪೆರೋಲ್ ಪಡೆದ ಸಂಜಯ್ ದತ್

ಬಾಲಿವುಡ್ ನಟ ಹಾಗೂ ಮುಂಬೈ ಸರಣಿ ಸ್ಫೋಟದ ಅಪರಾಧಿ ಸಂಜಯ್ ದತ್ ಅವರಿಗೆ ಮಹಾರಾಷ್ಟ್ರ ಸರ್ಕಾರ ಮತ್ತೆ 30 ದಿನಗಳ ಕಾಲ ಪೆರೋಲ್ ನೀಡಿದೆ.

ಮುಂಬೈ: ಬಾಲಿವುಡ್ ನಟ ಹಾಗೂ ಮುಂಬೈ ಸರಣಿ ಸ್ಫೋಟದ ಅಪರಾಧಿ ಸಂಜಯ್ ದತ್ ಅವರಿಗೆ ಮಹಾರಾಷ್ಟ್ರ ಸರ್ಕಾರ ಮತ್ತೆ 30 ದಿನಗಳ ಕಾಲ ಪೆರೋಲ್ ನೀಡಿದೆ.

ತಮ್ಮ ಮಗಳ ಅನಾರೋಗ್ಯದ ಹಿನ್ನೆಲೆಯಲ್ಲಿ ಪೆರೋಲ್ ಕೋರಿ ಕಳೆದ ಜೂನ್‌ನಲ್ಲಿ ಸಂಜಯ್ ದತ್ ಅರ್ಜಿ ಸಲ್ಲಿಸಿದ್ದರು. ಇದು ಮಾಧ್ಯಮಗಳಲ್ಲಿ ತೀವ್ರ ಚರ್ಚೆಗೆ ಕಾರಣವಾಗಿತ್ತು. ಅಲ್ಲದೆ ಬಾಲಿವುಡ್ ನಟನಿಗೆ ವಿಶೇಷ ಆತಿಥ್ಯ ನೀಡಲಾಗುತ್ತಿದೆ ಎಂಬ ಆರೋಪಗಳು ಕೇಳಿಬಂದಿದ್ದವು.

ಎಎನ್‌ಐ ವರದಿಯ ಪ್ರಕಾರ, ಸಂಜಯ್ ತಮ್ಮ ಪುತ್ರಿ ಮೂಗಿನ ಶಸ್ತ್ರ ಚಿಕಿತ್ಸೆಗೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಅವರಿಗೆ ಪೆರೋಲ್ ಮಂಜೂರು ಮಾಡಲಾಗಿದೆ. ಎರಡು ದಿನಗಳ ಹಿಂದೆಯೇ ಪುಣೆ ವಿಭಾಗೀಯ ಆಯುಕ್ತರು ಪೆರೋಲ್‌ಗೆ ಅನುಮತಿ ನೀಡಿದ್ದು, ಒಂದೇರಡು ದಿನಗಳಲ್ಲೇ ದತ್ ಜೈಲಿನಿಂದ ಮನಗೆ ತೆರಳಲಿದ್ದಾರೆ.

ಸಂಜಯ್ ದತ್ ಅವರು ಜೈಲು ಶಿಕ್ಷೆಗೆ ಒಳಗಾದ ನಂತರ ಇದುವವರೆಗೆ ಒಟ್ಟು 146 ದಿನ ಜೈಲಿನಿಂದ ಹೊರಗಿದ್ದಾರೆ. ಕಳೆದ ಜನವರಿ 2014ರಲ್ಲಿ 30 ದಿನಗಳ ಪೆರೋಲ್ ಪಡೆದಿದ್ದ ದತ್ ಅದನ್ನು ಮತ್ತೆ 60 ದಿನಗಳವರೆಗೆ ವಿಸ್ತರಿಸಿಕೊಂಡಿದ್ದರು. ಬಳಿಕ ಮತ್ತೆ ಡಿಸೆಂಬರ್‌ನಲ್ಲಿ 14 ದಿನಗಳ ಪೆರೋಲ್ ಪಡೆದಿದ್ದರು. ಅಲ್ಲದೆ ಮತ್ತೆ ವಿಸ್ತರಿಸುವಂತೆ ಕೋರಿದ್ದರು. ಆದರೆ ಇದಕ್ಕೆ ಮಾಧ್ಯಮಗಳಲ್ಲಿ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಮಹಾ ಸರ್ಕಾರ ಪೆರೋಲ್ ವಿಸ್ತರಿಸಲು ನಿರಾಕರಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT