ಅರವಿಂದ್ ಕೇಜ್ರಿವಾಲ್ 
ದೇಶ

ಯುವಜನತೆ ಮೋದಿ ಆಡಳಿತದಲ್ಲಿ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆ: ಕೇಜ್ರಿವಾಲ್

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸ್ವಚ್ಛ ಭಾರತ ಅಭಿಯಾನದ ಬಗ್ಗೆ ಮಾತನಾಡಿದ್ದು, ಮೋದಿ ಅವರ ಯೋಜನೆ ವಿಫಲವಾಗಿದೆ ಎಂದಿದ್ದಾರೆ.

ಪಾಟ್ನಾ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸ್ವಚ್ಛ ಭಾರತ ಅಭಿಯಾನದ ಬಗ್ಗೆ ಮಾತನಾಡಿದ್ದು, ಮೋದಿ ಅವರ ಯೋಜನೆ ವಿಫಲವಾಗಿದೆ ಎಂದಿದ್ದಾರೆ.

ಪಾಟ್ನಾ ಗೆ ಭೇಟಿ ನೀಡಿ ಬಿಹಾರ ಸರ್ಕಾರ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅರವಿಂದ್ ಕೇಜ್ರಿವಾಲ್, ಯುವಜನತೆ ಮೋದಿ ಅವರಲ್ಲಿ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆ. ಮೋದಿ ಅವರ ಸ್ವಚ್ಛ ಭಾರತ ಅಭಿಯಾನ ವಿಫಲವಾಗಿದೆ ಎಂದು ಹೇಳಿದ್ದಾರೆ.
ಚುನಾವಣೆಗೂ ಮುನ್ನ ಕಪ್ಪು ಹಣ ವಾಪಸ್ ತರುವುದಾಗಿ ಮೋದಿ ಜನರಿಗೆ ಭರವಸೆ ನೀಡಿದ್ದರು. ಆದರೆ ಈಗ ಕಪ್ಪು ಹಣದ ವಿಷಯವನ್ನು ಕೈಬಿಟ್ಟಿರುವ ಮೋದಿ, ಜನರಿಗೆ ಯೋಗ ಮಾಡಲು ಹೇಳುತ್ತಿದ್ದಾರೆ. ಇದರೊಂದಿಗೆ ಸ್ವಚ್ಛ ಭಾರತ ಅಭಿಯಾನಕ್ಕೆ ಕರೆ ನೀಡಿದ್ದಾರೆ. ಈ ಅಭಿಯಾನಕ್ಕಾಗಿ ಮಿಲಿಯನ್ ಗಟ್ಟಲೆ ಹಣ ಖರ್ಚು ಮಾಡಲಾಗಿದೆ. ಆದರೆ ಒಂದೇ ಒಂದು ರಸ್ತೆಯೂ ಸ್ವಚ್ಚವಾಗಿಲ್ಲ ಎಂದು ಕೇಜ್ರಿವಾಲ್ ಹೇಳಿದ್ದಾರೆ.
ಬಿಹಾರದ ಜನತೆ, ದೆಹಲಿ ಅಥವಾ ಕೇಂದ್ರ ಸರ್ಕಾರದ ಎರಡು ಮಾದರಿಯ ಸರ್ಕಾರಗಳ ಪೈಕಿ ಒಂದು ಮಾದರಿಯನ್ನು  ಆಯ್ಕೆ ಮಾಡಿಕೊಳ್ಳಬೇಕಿದೆ, ನಕಾರಾತ್ಮಕ ರಾಜಕೀಯ, ದೋಷಾರೋಪಣೆಯ ರಾಜಕೀಯವನ್ನು ಜನರು ತಿರಸ್ಕರಿಸುತ್ತಿದ್ದಾರೆ. ಮೋದಿ ಸರ್ಕಾರದಲ್ಲಿ ಜನತೆಗೆ ವಿಶ್ವಾಸ ಕಡಿಮೆಯಾಗುತ್ತಿದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.  

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT