ಅರವಿಂದ್ ಕೇಜ್ರಿವಾಲ್ 
ದೇಶ

ಯುವಜನತೆ ಮೋದಿ ಆಡಳಿತದಲ್ಲಿ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆ: ಕೇಜ್ರಿವಾಲ್

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸ್ವಚ್ಛ ಭಾರತ ಅಭಿಯಾನದ ಬಗ್ಗೆ ಮಾತನಾಡಿದ್ದು, ಮೋದಿ ಅವರ ಯೋಜನೆ ವಿಫಲವಾಗಿದೆ ಎಂದಿದ್ದಾರೆ.

ಪಾಟ್ನಾ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸ್ವಚ್ಛ ಭಾರತ ಅಭಿಯಾನದ ಬಗ್ಗೆ ಮಾತನಾಡಿದ್ದು, ಮೋದಿ ಅವರ ಯೋಜನೆ ವಿಫಲವಾಗಿದೆ ಎಂದಿದ್ದಾರೆ.

ಪಾಟ್ನಾ ಗೆ ಭೇಟಿ ನೀಡಿ ಬಿಹಾರ ಸರ್ಕಾರ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅರವಿಂದ್ ಕೇಜ್ರಿವಾಲ್, ಯುವಜನತೆ ಮೋದಿ ಅವರಲ್ಲಿ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆ. ಮೋದಿ ಅವರ ಸ್ವಚ್ಛ ಭಾರತ ಅಭಿಯಾನ ವಿಫಲವಾಗಿದೆ ಎಂದು ಹೇಳಿದ್ದಾರೆ.
ಚುನಾವಣೆಗೂ ಮುನ್ನ ಕಪ್ಪು ಹಣ ವಾಪಸ್ ತರುವುದಾಗಿ ಮೋದಿ ಜನರಿಗೆ ಭರವಸೆ ನೀಡಿದ್ದರು. ಆದರೆ ಈಗ ಕಪ್ಪು ಹಣದ ವಿಷಯವನ್ನು ಕೈಬಿಟ್ಟಿರುವ ಮೋದಿ, ಜನರಿಗೆ ಯೋಗ ಮಾಡಲು ಹೇಳುತ್ತಿದ್ದಾರೆ. ಇದರೊಂದಿಗೆ ಸ್ವಚ್ಛ ಭಾರತ ಅಭಿಯಾನಕ್ಕೆ ಕರೆ ನೀಡಿದ್ದಾರೆ. ಈ ಅಭಿಯಾನಕ್ಕಾಗಿ ಮಿಲಿಯನ್ ಗಟ್ಟಲೆ ಹಣ ಖರ್ಚು ಮಾಡಲಾಗಿದೆ. ಆದರೆ ಒಂದೇ ಒಂದು ರಸ್ತೆಯೂ ಸ್ವಚ್ಚವಾಗಿಲ್ಲ ಎಂದು ಕೇಜ್ರಿವಾಲ್ ಹೇಳಿದ್ದಾರೆ.
ಬಿಹಾರದ ಜನತೆ, ದೆಹಲಿ ಅಥವಾ ಕೇಂದ್ರ ಸರ್ಕಾರದ ಎರಡು ಮಾದರಿಯ ಸರ್ಕಾರಗಳ ಪೈಕಿ ಒಂದು ಮಾದರಿಯನ್ನು  ಆಯ್ಕೆ ಮಾಡಿಕೊಳ್ಳಬೇಕಿದೆ, ನಕಾರಾತ್ಮಕ ರಾಜಕೀಯ, ದೋಷಾರೋಪಣೆಯ ರಾಜಕೀಯವನ್ನು ಜನರು ತಿರಸ್ಕರಿಸುತ್ತಿದ್ದಾರೆ. ಮೋದಿ ಸರ್ಕಾರದಲ್ಲಿ ಜನತೆಗೆ ವಿಶ್ವಾಸ ಕಡಿಮೆಯಾಗುತ್ತಿದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.  

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಇನ್ನೂ ನನಸಾಗಿಲ್ಲ ದಶಕಗಳ ಕನಸು: ಹಾಸನ ವಿಮಾನ ನಿಲ್ದಾಣಕ್ಕೆ ಸಿಗದ ರೆಕ್ಕೆ, ಯೋಜನೆಗೆ ಅಡ್ಡಿಯಾಗಿದೆ ಸಂಪನ್ಮೂಲ-ರಾಜಕೀಯ ಇಚ್ಛಾಶಕ್ತಿ ಕೊರತೆ..!

ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್‌ಗಿರಿ: ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಜಾತಿ ನಿಂದನೆ ತಂದೆ-ಮಗನ ವಿರುದ್ಧ ಪ್ರಕರಣ ದಾಖಲು

SCROLL FOR NEXT